• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗೆ ಮಹಿಳೆಯರು ಸಜ್ಜಾಗಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ

admin by admin
March 8, 2025 - 7:07 pm
in Flash News, ಕರ್ನಾಟಕ
0 0
0
Befunky collage 2025 03 08t185658.084

“2028 ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕಲಬುರ್ಗಿಯಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಅವರು ಮಾತನಾಡಿದರು.

RelatedPosts

ಭಾರತದಲ್ಲಿ ಹೆಚ್ಚುತ್ತಿದೆ ಅವಿವಾಹಿತ ಮಹಿಳೆಯರ ಸಂಖ್ಯೆ: ಮದುವೆಗೆ ಮಹಿಳೆಯರು ಏಕೆ ಹಿಂದೇಟು?

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

JDS ಪಾದಯಾತ್ರೆಯಲ್ಲಿ ಭಾರಿ ಹೈಡ್ರಾಮಾ: ಪೊಲೀಸರ ತಳ್ಳಾಟ ನೂಕಾಟದ ವೇಳೆ ನಿಖಿಲ್ ಕುಮಾರಸ್ವಾಮಿ ಕಾಲಿಗೆ ಗಾಯ

ADVERTISEMENT
ADVERTISEMENT

“ಈಗ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಮಹಿಳೆಯರು ಅಧಿಕಾರದಲ್ಲಿ ಇದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ರಷ್ಟು ಮೀಸಲಾತಿ ನೀಡಲಾಗಿದೆ. ಈಗ ಅನೇಕ ಸ್ಥಳೀಯ ಸಂಸ್ಥೆಗಳಲ್ಲಿ ಹೆಂಡತಿಯನ್ನು ಸದಸ್ಯೆಯನ್ನಾಗಿಸಿ ಗಂಡ ಅಧಿಕಾರ ಚಲಾಯಿಸುತ್ತಾ ಇರುತ್ತಾನೆ. ಮುಂದಕ್ಕೆ ಇದೆಲ್ಲಾ ಕಡಿಮೆಯಾಗುತ್ತದೆ. ಮಹಿಳೆಯರೇ ಇದನ್ನೆಲ್ಲಾ ಸಮರ್ಥವಾಗಿ ನಿಭಾಯಿಸುತ್ತಾರೆ” ಎಂದರು.

“ಸೋನಿಯಾ ಗಾಂಧಿ ಅವರ ನಾಯಕತ್ವದಲ್ಲಿ, ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಶೇ.33 ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ಹೋಗಿತ್ತು. ಕಾರಣಾಂತರಗಳಿಂದ ಮಹತ್ವದ ಕಾರ್ಯ ಜಾರಿಗೆ ಬರಲಿಲ್ಲ. ಈಗ ಮೀಸಲಾತಿಯನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಮುಂದಿನ ವಿಧಾನಸಭಾ, ಲೋಕಸಭಾ ಚುನಾವಣೆಗೆ ಮಹಿಳಾ ಮೀಸಲಾತಿ ಇರುತ್ತದೆ” ಎಂದು ಹೇಳಿದರು.

“ಮಹಿಳಾ ಮೀಸಲಾತಿ ಜಾರಿಯಾದರೆ ಇಲ್ಲಿ ಇರುವ ಯಾರ ಸ್ಥಾನ ಹೋಗುತ್ತದೆ ಎಂದು ಹೇಳಲು ಆಗುವುದಿಲ್ಲ. ಅಜಯ್ ಸಿಂಗ್, ಅಲ್ಲಮಪ್ರಭು, ಬಿ.ಆರ್.ಪಾಟೀಲ್, ಪ್ರಿಯಾಂಕ್ ಖರ್ಗೆ ಯಾರದ್ದು ಬೇಕಾದರೂ ಆಗಬಹುದು. ಅದಕ್ಕೆ ಈಗಿನಿಂದಲೇ ಸಜ್ಜಾಗಿ” ಎಂದರು.

ಹೆಣ್ಣಿಲ್ಲದೇ ಮನೆ ಉದ್ಧಾರವಾಗಲು ಸಾಧ್ಯವಿಲ್ಲ

“ಮಣ್ಣಿಲ್ಲದೇ ಮಡಕೆ ಮಾಡಲು ಸಾಧ್ಯವಿಲ್ಲ. ಹೆಣ್ಣಿಲ್ಲದೇ ಮನೆ ಉದ್ದಾರವಾಗಲು ಸಾಧ್ಯವಿಲ್ಲ. ಈ ಸಮಾಜ ಹಾಗೂ ನಾಗರಿಕಥೆಯನ್ನು ಕಟ್ಟಿದವರು ಮಹಿಳೆಯರು. ಇಡೀ ಸಂಸಾರದ ಜವಾಬ್ದಾರಿ ಮಹಿಳೆಯರ ಮೇಲೆ ಇರುತ್ತದೆ. ಕೆಆರ್ ಎಸ್ ಅಣೆಕಟ್ಟು ನಿರ್ಮಾಣದ ವೇಳೆ ಕೆಂಪ ನಂಜಮ್ಮಣ್ಣಿ ಅವರು ಒಡವೆಗಳನ್ನು ಅಡವಿಟ್ಟು ಸಹಾಯ ಮಾಡಿದರು. ನೆಹರು ಅವರು ಬಾಕ್ರಾನಂಗಲ್ ಅಣೆಕಟ್ಟನ್ನು ಬುಡಕಟ್ಟು ಮಹಿಳೆಯಿಂದ ಉದ್ಘಾಟನೆ ಮಾಡಿಸಿದರು. ನಮ್ಮ ದೇಶದಲ್ಲಿ ಮಹಿಳೆಯರಿಗೆ ನೀಡುವ ಪ್ರಾಶಸ್ತ್ಯವನ್ನು ಇದು ಹೇಳುತ್ತದೆ” ಎಂದರು.

“ಹೆಣ್ಣಿನಿಂದ ಕುಟುಂಬದಲ್ಲಿ ಜಗಳಗಳು ಉಂಟಾಗುತ್ತವೆ ಎಂದು ಹೇಳುತ್ತಾರೆ. ನನಗೆ ಈ ಮಾತುಗಳ ಮೇಲೆ ನಂಬಿಕೆಯಿಲ್ಲ. ಆದರೆ ಎಲ್ಲರೂ ತಮ್ಮ ಹಕ್ಕುಗಳಿಗಾಗಿ ಒಗ್ಗಟ್ಟಾಗಿ ಹೋರಾಟ ಮಾಡಬೇಕು. ಭಿನ್ನಾಭಿಪ್ರಾಯಗಳನ್ನು ಇಟ್ಟುಕೊಂಡಿರಬಾರದು. ಬಸವಣ್ಣನವರು ಪುಣ್ಯ ಸ್ತ್ರೀ ಎಂದು ಮಹಿಳೆಯರನ್ನು ಕರೆದಿದ್ದಾರೆ” ಎಂದು ಹೇಳಿದರು.

“ಜನನ ನೀಡುವವಳು ತಾಯಿ, ಜೋಪಾನ ಮಾಡುವವಳು ಅಕ್ಕ, ಅಕ್ಷರ ಕಲಿಸುವವಳು ಶಿಕ್ಷಕಿ, ಜೊತೆಯಾಗಿ ನಿಲ್ಲುವವಳು ಹೆಂಡತಿ, ಮುಪ್ಪಿನಲ್ಲಿ ಆರೈಕೆ ಮಾಡುವವಳು ಮಗಳು, ಸತ್ತಾಗ ಜಾಗ ಕೊಡುವವಳು ಭೂಮಿ ತಾಯಿ. ಹೀಗೆ ಎಲ್ಲದಕ್ಕೂ ಹೆಣ್ಣೇ ಮೂಲ” ಎಂದರು.

ಎಲ್ಲಾ ರಂಗಗಳಲ್ಲೂ ಮಹಿಳೆಯರು ಹೆಸರು ಮಾಡುತ್ತಿದ್ದಾರೆ

“ಕಳೆದ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮೊದಲ ಸ್ಥಾನ ಗಳಿಸಿದ್ದು ಹೆಣ್ಣುಮಗಳು. ಸರ್ಕಾರಿ ಶಾಲೆಯಲ್ಲಿ ಓದಿ ಇಡೀ ರಾಜ್ಯದ ಗಮನ ಸೆಳೆದಳು. ಬೆಂಗಳೂರು ಭಾಗದ ಹುಡುಗಿಯರು ಬರಲಿಲ್ಲ ಎಂಬುದನ್ನು ಗಮನಿಸಬೇಕು. ಮಹಿಳೆಯರು ಈಗ ಎಲ್ಲಾ ರಂಗಗಳಲ್ಲೂ ಬೆಳೆಯುತ್ತಿದ್ದಾರೆ. ಮುಂದಕ್ಕೆ ಈ ದೇಶವನ್ನು ಆಳುವ ಶಕ್ತಿ ಮಹಿಳೆಯರಿಗಿದೆ. ಕಾಂಗ್ರೆಸ್ ಪಕ್ಷದಿಂದ ಇಂದಿರಾಗಾಂಧಿ ಅವರು ಪ್ರಧಾನಿಯಾಗಿದ್ದರು. ಪಕ್ಷದ ಅಧ್ಯಕ್ಷರಾಗಿದ್ದರು. ಮುಂದಕ್ಕೂ ದೇಶದ ಚುಕ್ಕಾಣಿ ಹಿಡಿಯುವವರು ಇದ್ದಾರೆ. ಶೇ.‌33 ರಷ್ಟು ಮಹಿಳಾ ಮೀಸಲಾತಿ ಜಾರಿಯಾದರೆ ದೇಶದಲ್ಲಿ ಸಾಕಷ್ಟು ಬದಲಾವಣೆ ಆಗುತ್ತದೆ” ಎಂದರು.

“ನಮ್ಮ ಸಂಸ್ಕೃತಿ ಮಹಿಳಾ ಪರವಾದುದು. ಯಾವುದೇ ದೇವರ ಹೆಸರನ್ನು ಪ್ರಸ್ತಾಪಿಸುವಾಗ ಮೊದಲು ಸ್ತ್ರೀ ದೇವತೆಗಳ ಹೆಸರು ಹೇಳುತ್ತೇವೆ. ಉದಾಹರಣೆಗೆ ಲಕ್ಣ್ಮೀ ವೆಂಕಟೇಶ್ವರ, ಪಾರ್ವತಿ ಪರಮೇಶ್ವರ ಹೀಗೆ. ನಮಗೆ ಆಹ್ವಾನ ಪತ್ರಿಕೆ ಕೊಡುವಾಗಲೂ ಶ್ರೀಮತಿ ಮತ್ತು ಶ್ರೀ ಡಿ.ಕೆ.ಶಿವಕುಮಾರ್ ಎಂದು ಬರೆಯುತ್ತಾರೆ‌. ಈ ಮೂಲಕ ಹೆಣ್ಣು ಮಕ್ಕಳಿಗೆ ಮೊದಲ ಆದ್ಯತೆ ನೀಡುವುದು ನಮ್ಮ ಸಂಸ್ಕೃತಿ” ಎಂದು ಹೇಳಿದರು.

ಮಹಿಳೆಯರಿಗೆ ಮಾತ್ರ ಅವಕಾಶ ನೀಡಿ

“ಮಹಿಳಾ ದಿನಾಚರಣೆಯನ್ನು ಸಂಪೂರ್ಣವಾಗಿ ಮಹಿಳೆಯರೇ ನಡೆಸಿಕೊಡಬೇಕು. ಪುರುಷರು ವೇದಿಕೆಯ ಕೆಳಗೆ ಕುಳಿತುಕೊಳ್ಳಬೇಕು. ಅವರ ಶಕ್ತಿಯನ್ನು ಈ ಮೂಲಕವೂ ನಾವೆಲ್ಲ ನೋಡಬಹುದು. ಬೆಂಗಳೂರಿನಲ್ಲಿ ದೊಡ್ಡ ಕಾರ್ಯಕ್ರಮ ಇದ್ದರೂ ಈ ಭಾಗದ ಮಹಿಳೆಯರ ಆಶೀರ್ವಾದ ಪಡೆಯಬೇಕು ಎಂದು ಬಂದಿದ್ದೇನೆ. ಮಹಿಳಾ ಪರವಾದ ಕಾರ್ಯಕ್ರಮಗಳನ್ನು ಮಹಿಳೆಯರಿಂದಲೇ ನೆರವೇರಿಸಬೇಕು. ಪುರುಷ ಅಧಿಕಾರಿಗಳು ಇನ್ನು ಮುಂದೆ ಇಂತಹ ಕಾರ್ಯಕ್ರಮಗಳಲ್ಲಿ ಇರಬಾರದು” ಎಂದು ಡಿಸಿಎಂ ಸೂಚನೆ ನೀಡಿದರು.

“ಶಾಲೆಗೆ ಸೇರುವಾಗ ತಂದೆ ಭಾಷೆ ಕೇಳುವುದಿಲ್ಲ. ಮಾತೃಭಾಷೆ ಯಾವುದು ಎಂದು ಕೇಳುತ್ತಾರೆ.‌ ಹೆಣ್ಣು ಕುಟುಂಬದ ಕಣ್ಣು, ಹೆಣ್ಣಿನಿಂದಲೇ ಸಮಾಜ ಬೆಳೆಯುತ್ತದೆ ಎಂದು ನಂಬಿದವರು. ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಕನ್ನಡಿ ಇದ್ದಂತೆ” ಎಂದರು.

“ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಇಲ್ಲಿಯ ತನಕ ಮಹಿಳೆಯರಿಗೆ ಹೆಚ್ಚು ಒತ್ತನ್ನು ನೀಡುತ್ತಾ ಬಂದಿದೆ. ಹೆಣ್ಣು ಬೆಳೆದರೆ ಸಮಾಜ ಮತ್ತು ಕುಟುಂಬ ಎರಡೂ ಬೆಳೆಯುತ್ತದೆ ಎಂದು ನಂಬಿದ್ದೇವೆ. 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿಗಳು ಮಹಿಳೆಯರಿಗೆ ಅನುಕೂಲವಾಗುವಂತಹವು. ನಿಮಗೆ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (55)

ಭಾರತದಲ್ಲಿ ಹೆಚ್ಚುತ್ತಿದೆ ಅವಿವಾಹಿತ ಮಹಿಳೆಯರ ಸಂಖ್ಯೆ: ಮದುವೆಗೆ ಮಹಿಳೆಯರು ಏಕೆ ಹಿಂದೇಟು?

by ದಿಶಾ ಕೆ. ಎಸ್.
August 10, 2026 - 7:38 pm
0

ಬಲಿಷ್ಠ (54)

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ

by ದಿಶಾ ಕೆ. ಎಸ್.
August 10, 2026 - 7:02 pm
0

ಬಲಿಷ್ಠ (53)

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

by ದಿಶಾ ಕೆ. ಎಸ್.
August 10, 2026 - 6:54 pm
0

ಬಲಿಷ್ಠ (52)

ರಷ್ಯಾ ಮೇಲೆ ಹಿಂದೆಂದೂ ಕಂಡು ಕೇಳರಿಯದಂಥಾ ದಾಳಿ ಮಾಡಿದ ಉಕ್ರೇನ್

by ದಿಶಾ ಕೆ. ಎಸ್.
August 10, 2026 - 6:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (9)
    ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version