• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮತ್ತೆ ಎನ್‌‌ಡಿಎ ತೆಕ್ಕೆಗೆ ಅಣ್ಣಾ ಡಿಎಂಕೆ..?

ಮಾಡು ಇಲ್ಲವೇ ಮಡಿ ಸ್ಥಿತಿಯಲ್ಲಿ ಅಣ್ಣಾ ಡಿಎಂಕೆ ಪಕ್ಷ..! ಬದ್ಧವೈರಿಗಳಂತೆ ಕಾದಾಡುತ್ತಿದ್ದವರು ಒಂದಾಗುತ್ತಾರಾ..?

ಚಂದ್ರಮೋಹನ್ ಕೋಲಾರ by ಚಂದ್ರಮೋಹನ್ ಕೋಲಾರ
March 27, 2025 - 7:57 pm
in ದೇಶ
0 0
0
1153 (4)

2026ರಲ್ಲಿ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದೇ ಕಾರಣಕ್ಕೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಪದೇಪದೆ ಕೇಂದ್ರದ ವಿರುದ್ಧ ಸಮರ ಸಾರುತ್ತಿದ್ದಾರೆ. ತಮಿಳು ನಾಡಿನಲ್ಲಿ ನಿರೀಕ್ಷಿತ ಅಭಿವೃದ್ಧಿ ಆಗಿಲ್ಲ, ಕಾನೂನು-ಸುವ್ಯವಸ್ಥೆ ಹಳ್ಳ ಹಿಡಿದಿದೆ. ಭ್ರಷ್ಟಾಚಾರ ಹೆಚ್ಚಾಗಿದೆ. ಇದೆಲ್ಲವನ್ನು ಮರೆ ಮಾಚಲು ಸ್ಟಾಲಿನ್ ತ್ರಿಭಾಷಾ ಸೂತ್ರ, ಕ್ಷೇತ್ರ ಮರು ವಿಂಗಡಣೆಯಂತಹ ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ. 2026ರ ವಿಧಾನಸಭೆ ಚುನಾವಣೆ ಎಐಎಡಿಎಂಕೆಗೆ ಮಾಡು ಇಲ್ಲವೇ ಮಡಿ ಎಂಬ ಪರಿಸ್ಥಿತಿ ಸೃಷ್ಟಿಸಿದೆ. ಈ ಚುನಾವಣೆಯಲ್ಲಿ ಸೋತರೆ ಪಕ್ಷಕ್ಕೆ ಉಳಿಗಾಲವಿಲ್ಲ. ಹೀಗಾಗಿ ಮತ್ತೆ ಬಿಜೆಪಿ ಜೊತೆ ಮೈತ್ರಿ ಕುರಿತು ಚರ್ಚೆ ನಡೆಸುತ್ತಿದೆ. 2023ಕ್ಕೂ ಮೊದಲು ಮಿತ್ರಪಕ್ಷಗಳಾಗಿದ್ದವರು, 2024ರ ಲೋಕಸಭೆ ಚುನಾವಣೆಗೆ ಮುನ್ನ ಮೈತ್ರಿ ಮುರಿದು ಕೊಂಡಿದ್ದವು. ಈಗ ಮತ್ತೆ ಮೈತ್ರಿ ಮಾಡಿಕೊಳ್ಳಲು ಎರಡು ಪಕ್ಷಗಳು ಮುಂದಾಗುವ ಲಕ್ಷಣಗಳು ಕಂಡು ಬರುತ್ತಿವೆ.

RelatedPosts

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

ಬೆಡ್‌ರೂಮ್‌ಗೂ ತಟ್ಟಿದ್ದ ಇರಾನ್ ಯುದ್ಧದ ಎಫೆಕ್ಟ್‌: ಕಾಂಡೋಮ್‌ ಬೆಲೆ ಏರಿಕೆಗೆ ಸಜ್ಜಾದ ಕಂಪನಿ

ತ್ರಿಶೂರ್‌ನಲ್ಲಿ ಭೀಕರ ಪಟಾಕಿ ಸ್ಫೋಟ: 10 ಮಂದಿ ಸಾ*ವು, ಹಲವರಿಗೆ ಗಾಯ

ನಾಯಕರ ಬೆಡ್ ರೂಂನಿಂದ ಮಹಿಳೆಯರ ರಾಜಕೀಯ ಜೀವನ ಶುರುವಾಗುತ್ತದೆ: ಸಂಸದ ಪಪ್ಪು ಯಾದವ್

ADVERTISEMENT
ADVERTISEMENT

ಎರಡೇ ಎರಡು ಫೋಟೋಗಳು ತಮಿಳುನಾಡಿನ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿವೆ. ಜೊತೆಗೆ ಬಿಜೆಪಿ-ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಮತ್ತೆ ಮೈತ್ರಿ ಮಾಡಿಕೊಳ್ಳಲಿವೆ ಎಂಬ ಗುಸುಗುಸು.. ಪಿಸುಪಿಸು ಮಾತುಗಳಿಗೆ ಕಾರಣವಾಗಿದೆ. ಅದರಲ್ಲಿಯೂ ಮಾರ್ಚ್ 3ರಂದು ಎಐಎಡಿಎಂಕೆಯ ಪ್ರಮುಖ ನಾಯಕರಲ್ಲಿ ಒಬ್ಬರಾದ ಎಸ್.ಪಿ.ವೇಲುಮಣಿ ಪುತ್ರನ ವಿವಾಹ ಸಮಾರಂಭದಲ್ಲಿ ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಭಾಗವಹಿಸಿದ್ದರು. ಈ ವೇಳೆ ಎಐಎಡಿಎಂಕೆ ನಾಯಕರು ಅವರಿಗೆ ಸ್ವಾಗತ ಕೋರಿದ ಪರಿ. ಅವರಿಗೆ ಆತಿಥ್ಯ ನೀಡಿದ ವರಸೆಯನ್ನು ಕಂಡು ತಮಿಳುನಾಡಿನ ರಾಜಕೀಯ ಗೊತ್ತಿರುವವರು ಫುಲ್ ಸ್ಟನ್ ಆಗಿದ್ದರು. ಅದೇನು ಗೌರವ, ಅದೇನು ಆತಿಥ್ಯ ಎಂದು ಬೆಕ್ಕಸ ಬೆರಗಾಗಿದ್ದರು. ಈ ವಿಚಾರ ತೆರೆಮರೆಗೆ ಸರಿಯುವ ಮುನ್ನವೇ ದೆಹಲಿಯಲ್ಲಿ ಅಮಿತ್ ಶಾ-ತಮಿಳುನಾಡು ಮಾಜಿ ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಭೇಟಿಯಾಗಿದ್ದಾರೆ. ಇಷ್ಟಾಗುತ್ತಿದ್ದಂತೆ ತಮಿಳುನಾಡು ರಾಜಕಾರಣದಲ್ಲಿ ದೊಡ್ಡ ಸಂಚಲನವೇ ಸೃಷ್ಟಿಯಾಗಿದೆ.

2026ರಲ್ಲಿ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದು ತಮಿಳುನಾಡಿನ ಎಲ್ಲ ಪಕ್ಷಗಳಿಗಿಂತಲೂ ಹೆಚ್ಚಾಗಿ ಆಲ್ ಇಂಡಿಯಾ ಅಣ್ಣಾ ಡಿಎಂಕೆ ಪಕ್ಷಕ್ಕೆ ಮಹತ್ವದ ಚುನಾವಣೆಯಾಗಿದೆ. ಈ ಚುನಾವಣೆಯ ಸೋಲು-ಗೆಲುವು ಎಐಎಡಿಎಂಕೆಯ ಭವಿಷ್ಯ ನಿರ್ಧರಿಸಲಿದೆ. ಈ ಚುನಾವಣೆ ಎಐಎಡಿಎಂಕೆಗೆ ಮಾಡು ಇಲ್ಲವೇ ಮಡಿ ಚುನಾವಣೆಯಾಗಿದೆ. 2026ರ ಚುನಾವಣೆಯಲ್ಲಿ ಸೋತರೆ ಎಐಎಡಿಎಂಕೆ ಸರ್ವನಾಶವಾಗುವುದು ಕಟ್ಟಿಟ್ಟ ಬುತ್ತಿ. ಏಕೆಂದರೆ, ಎಐಎಡಿಎಂಕೆಯನ್ನು ಮತ್ತೆ ಕಟ್ಟಿ ಬೆಳೆಸಲು ಎಂಜಿಆರ್ ಅಥವಾ ತಮಿಳರ ಪಾಲಿನ ಅಮ್ಮ ಪುರುಚ್ಚಿ ತಲೈವಿ ಜಯಲಲಿತಾರಂತಹ ಬಲಶಾಲಿ ನಾಯಕರಿಲ್ಲ. ಎಡಪ್ಪಾಡಿ ಪಳನಿಸ್ವಾಮಿ ತಮ್ಮದೇ ಆದ ಬಲ ಹೊಂದಿದ್ದರೂ, ದ್ರಾವಿಡ ಕೇಂದ್ರಿತ ರಾಜಕಾರಣಕ್ಕೆ ಆ ಬಲ ಸಾಕಾಗುವುದಿಲ್ಲ. ಜೊತೆಗೆ ಯಾವುದೇ ಪ್ರಾದೇಶಿಕ ಪಕ್ಷ ನಿರಂತರವಾಗಿ ಎರಡು ಬಾರಿ ಸರ್ಕಾರ ರಚನೆ ಮಾಡದಿದ್ದರೆ, ಅದರ ಬಲ ಕ್ಷೀಣಿಸುತ್ತೆ. ಭಾರತದ ರಾಜಕಾರಣದಲ್ಲಿ ಇದಕ್ಕೆ ಹಲವಾರು ಉದಾಹರಣೆಗಳನ್ನು ಕೊಡಬಹುದು.

ಎಐಎಡಿಎಂಕೆ 2023ರವರೆಗೆ ಎನ್‌‌‌ಡಿಎ ಭಾಗವಾಗಿತ್ತು. ಆದರೆ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷರಾದ ಬಳಿಕ ಮೈತ್ರಿ ಕಡಿದುಕೊಂಡಿತ್ತು. ಇದಕ್ಕೆ ಮುಖ್ಯ ಕಾರಣ ಅಣ್ಣಾಮಲೈ. ಎಐಎಡಿಎಂಕೆ ಮೈತ್ರಿಯಿಂದ ಬಿಜೆಪಿಗೆ ಲಾಭವಿಲ್ಲ ಎಂದು ಕೇಂದ್ರ ನಾಯಕರಿಗೆ ಮನವರಿಕೆ ಮಾಡಿಸಿದ್ದ ಅಣ್ಣಾಮಲೈ, ಎನ್‌‌ಡಿಎ ಮೈತ್ರಿಯಿಂದ ಅಣ್ಣಾ ಡಿಎಂಕೆ ಹೊರ ನಡೆಯುವಂತೆ ಮಾಡಿದ್ದರು. ಇದಾದ ಬಳಿಕ ಅಣ್ಣಾಮಲೈ ತಮಿಳುನಾಡಿನಲ್ಲಿ ‘‘ಎನ್ ಮಣ್ ಎನ್ ಮಕ್ಕಳ್’’ ಯಾತ್ರೆ ಮಾಡಿದ್ದರು. ಇದರಿಂದಾಗಿ ತಮಿಳುನಾಡಿನ ಮೂಲೆಮೂಲೆಗೂ ಬಿಜೆಪಿ ಹೆಸರನ್ನು ತಲುಪಿಸಲು ಯಶಸ್ವಿಯಾಗಿದ್ದರು. 2024ರ ಲೋಕಸಭೆ ಚುನಾವಣೆಯಲ್ಲಿ ಅಣ್ಣಾಮಲೈ ಶ್ರಮ ಪ್ರತಿಫಲಿತವಾಗಿತ್ತು.

2024ರ ಲೋಕಸಭೆ ಚುನಾವಣೆಗೂ ಮೊದಲು ತಮಿಳುನಾಡಿನಲ್ಲಿ ಬಿಜೆಪಿ ಶೇಕಡವಾರು ಮತ ಒಂದಂಕಿಯನ್ನು ದಾಟುತ್ತಿರಲಿಲ್ಲ. ಆದರೆ, 2024ರ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಎರಡಂಕಿ ಶೇಕಡವಾರು ಮತ ಪಡೆದಿತ್ತು. ಬಿಜೆಪಿ ಶೇಕಡ 11ರಷ್ಟು ಮತ ಪಡೆದಿದ್ದರೆ, ಎನ್‌‌ಡಿಎ ಮೈತ್ರಿಕೂಟ ಶೇಕಡ 18ರಷ್ಟು ಮತ ಪಡೆದಿತ್ತು. ಇದಕ್ಕೆ ಪ್ರತಿಯಾಗಿ ಎಐಎಡಿಎಂಕೆ ಶೇಕಡವಾರು ಮತಗಳಿಕೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿತ್ತು. 10 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಎಐಎಡಿಎಂಕೆ ಅಭ್ಯರ್ಥಿಗಳನ್ನು ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳುವಂತೆ ಮಾಡಿದ್ದರು. ಪ್ರಾದೇಶಿಕ ಪಕ್ಷಗಳ ನಡುವೆ ನಡೆಯುತ್ತಿದ್ದ ಮತ ಯುದ್ಧದಲ್ಲಿ ಹಲವಾರು ದಶಕಗಳ ಬಳಿಕ ರಾಷ್ಟ್ರೀಯ ಪಕ್ಷವೂ ಪಾಲು ಹಂಚಿಕೊಂಡಿತ್ತು.

ತಮಿಳುನಾಡಿನಲ್ಲಿ ಪ್ರಸ್ತುತ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಪಕ್ಷ ಸರ್ಕಾರದ ನೇತೃತ್ವ ವಹಿಸಿದೆ. ಡಿಎಂಕೆ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿ ಕ್ಷೀಣಿಸಿದೆ. ಭ್ರಷ್ಟಾಚಾರ ಹೆಚ್ಚಾಗಿದೆ. ಕಾನೂನು-ಸುವ್ಯವಸ್ಥೆ ಕುರಿತು ಕೇಳುವಂತಿಲ್ಲ. ಹೀಗಾಗಿಯೇ ತಾವು ಮಾಡಿರುವ ಸಾಧನೆಗಳನ್ನು ಜನರ ಮುಂದಿಟ್ಟು ಮತ ಕೇಳಲು ಹಿಂಜರಿಯುತ್ತಿರುವ ಸ್ಟಾಲಿನ್ ತ್ರಿಭಾಷಾ ಸೂತ್ರ ಹೇರಿಕೆ, ಕ್ಷೇತ್ರ ಪುನರ್ ವಿಂಗಡಣೆಯಿಂದ ದಕ್ಷಿಣ ಭಾರತಕ್ಕೆ ಅನ್ಯಾಯ ಎಂಬ ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದಿದ್ದಾರೆ. ಇದರ ಜೊತೆಗೆ ಕಾಲಿವುಡ್‌ನ ಖ್ಯಾತ ನಟ ಜೋಸೆಫ್ ವಿಜಯ್ ತಮ್ಮದೇ ಆದ ತಮಿಳಿಗ ವೆಟ್ರಿ ಕಚ್ಚಿ ಎಂಬ ಪಕ್ಷವನ್ನು ಹುಟ್ಟು ಹಾಕಿದ್ದಾರೆ.

ಹಿಂದೆಲ್ಲಾ ಎರಡು ದ್ರಾವಿಡ ಪಕ್ಷಗಳ ನಡುವೆ ಮಾತ್ರ ನಡೆಯುತ್ತಿದ್ದ ಚುನಾವಣೆ ಅಖಾಡದಲ್ಲಿ ಈ ಬಾರಿ ಚತುಷ್ಕೋನ ಸ್ಪರ್ಧೆ ಏರ್ಪಡುವ ಲಕ್ಷಣಗಳು ಕಂಡು ಬರುತ್ತಿದೆ. ಇದು ಎಐಎಡಿಎಂಕೆಗೆ ಸವಾಲಾಗಿ ಪರಿಣಮಿಸಿದೆ. ಮಾಡು ಇಲ್ಲವೇ ಮಡಿ ಎಂಬ ಪರಿಸ್ಥಿತಿ ಒಂದೆಡೆ. ಮತ್ತೊಂದೆಡೆ ಅಣ್ಣಾಮಲೈ, ವಿಜಯ್ ಎಂಬ ಯುವ ನಾಯಕರು ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಎಐಎಡಿಎಂಕೆಗೆ ಎನ್‌‌ಡಿಎ ಜೊತೆ ಮೈತ್ರಿ ಮಾಡಿಕೊಂಡರೆ ಮಾತ್ರ ಉಳಿಗಾಲ ಎಂಬ ಅನಿವಾರ್ಯತೆಯನ್ನು ಸೃಷ್ಟಿಸಿದೆ. ಹೀಗೆಂದು ಸುಲಭವಾಗಿ ಮೈತ್ರಿ ಮಾಡಿಕೊಳ್ಳುವ ಸ್ಥಿತಿ ಇಲ್ಲ. ಎಐಎಡಿಎಂಕೆ ವಿರುದ್ಧ ಅಣ್ಣಾಮಲೈ ನಡೆಸಿದ್ದ ವಾಕ್ಸಮರ ಎನ್‌‌ಡಿಎ ಮೈತ್ರಿ ಮುರಿದುಕೊಳ್ಳಲು ಒಂದು ಕಾರಣವಾದರೆ, ಥೇವರ್ ಸಮುದಾಯದ ನಾಯಕರಾದ ಓ.ಪನೀರ್ ಸೆಲ್ವಂ, ಟಿಟಿವಿ ದಿನಕರನ್ ಜೊತೆ ರಾಜಿ ಮಾಡಿಕೊಳ್ಳಲು ಪಳನಿಸ್ವಾಮಿ ಒಪ್ಪದೇ ಇದ್ದುದು, ಮೈತ್ರಿ ಮುರಿದುಕೊಳ್ಳಲು ಮತ್ತೊಂದು ಕಾರಣವಾಗಿತ್ತು.

ಪ್ರಸ್ತುತ ಪರಿಸ್ಥಿತಿಯಲ್ಲಿ ಎಐಎಡಿಎಂಕೆಗೆ ಎನ್‌‌ಡಿಎ ಜೊತೆ ಮೈತ್ರಿ ಮಾಡಿಕೊಳ್ಳದೇ ಬೇರೆ ವಿಧಿಯಿಲ್ಲ. ಹೀಗಾಗಿ ಅತ್ತ ಅಣ್ಣಾಮಲೈ ಜೊತೆಗಿನ ಮುನಿಸು ಕಡಿಮೆ ಮಾಡಿಕೊಳ್ಳಬೇಕು. ಅಲ್ಲದೇ, ಪನೀರ್ ಸೆಲ್ವಂ, ಟಿಟಿವಿ ದಿನಕರನ್ ಜೊತೆಗೆ ರಾಜಿಗೂ ಒಪ್ಪಿಕೊಳ್ಳಬೇಕು. ಇಂತಹ ಪರಿಸ್ಥಿತಿಯಲ್ಲಿ ಪಳನಿಸ್ವಾಮಿ ಮತ್ತು ಅಮಿತ್ ಶಾ ಭೇಟಿ ನಡೆದಿದೆ. ತಮಿಳುನಾಡಿನಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿದೆ. ಹೀಗಾಗಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅಮಿತ್ ಶಾಗೆ ಮನವಿ ಮಾಡುವ ನೆಪದಲ್ಲಿ ಈ ಭೇಟಿ ನಡೆದಿದೆ. ಆದರೆ, ಭೇಟಿ ವೇಳೆ 2026ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತು ಪ್ರಮುಖವಾಗಿ ಚರ್ಚಿಸಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಒಂದು ವೇಳೆ ಎಐಎಡಿಎಂಕೆ ಮತ್ತೆ ಎನ್‌ಡಿಎ ತೆಕ್ಕೆಗೆ ಮರಳಿದರೆ, ಆಂಧ್ರದಲ್ಲಿನ ಫಾರ್ಮುಲಾ ಪರಿಗಣಿಸಿ ಎಂದು ಪಳನಿಸ್ವಾಮಿ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಆಂಧ್ರಪ್ರದೇಶದಲ್ಲಿಯೂ ಸಹ 2018ರಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ, ಎನ್‌‌ಡಿಎ ಮೈತ್ರಿಯನ್ನು ಕಡಿದುಕೊಂಡಿತ್ತು. ಇದಾದ ಬಳಿಕ ನಡೆದ 2019ರ ಚುನಾವಣೆಯಲ್ಲಿ ಟಿಡಿಪಿ ಮಕಾಡೆ ಮಲಗಿತ್ತು. 2023ರಲ್ಲಿ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಮಾಡಿದ ಸತತ ಪ್ರಯತ್ನದ ಫಲವಾಗಿ ಟಿಡಿಪಿ-ಜೆಎಸ್‌‌ಪಿ-ಬಿಜೆಪಿ ಮೈತ್ರಿ ಮಾಡಿಕೊಂಡಿದ್ದವು. ಮೂರು ಪಕ್ಷಗಳು ಒಟ್ಟಾಗಿ 2024ರ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಎದುರಿಸಿದ್ದವು. ಬಳಿಕ ಬಂದ ಫಲಿತಾಂಶ ಕೇವಲ ಆಂಧ್ರಪ್ರದೇಶ ರಾಜಕಾರಣದ ಮೇಲೆ ಮಾತ್ರವೇ ಅಲ್ಲ, ಭಾರತದ ರಾಜಕೀಯದ ಮೇಲೂ ಪ್ರಭಾವ ಬೀರಿತ್ತು. ಒಂದು ವೇಳೆ ಮೈತ್ರಿ ಏರ್ಪಟ್ಟರೆ ಎಐಎಡಿಎಂಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಅಣ್ಣಾಮಲೈ ಬದಲಿಗೆ ಪಳನಿಸ್ವಾಮಿ ನೇತೃತ್ವ ವಹಿಸಬೇಕು. ಇಲ್ಲದೇ ಹೋದರೆ ಜಂಟಿ ನಾಯಕತ್ವಕ್ಕೆ ಮಣೆ ಹಾಕಬೇಕು. ಯಾವುದೇ ಕಾರಣಕ್ಕೂ ಅಣ್ಣಾಮಲೈ ಮೇಲುಗೈ ಸಾಧಿಸದಂತೆ ಸೂತ್ರ ರೂಪಿಸಬೇಕು ಎಂಬುದು ಎಐಎಡಿಎಂಕೆ ಷರತ್ತುಗಳಾಗಿವೆ ಎಂದು ತಿಳಿದು ಬಂದಿದೆ.

ಅಮಿತ್ ಶಾ-ಎಡಪ್ಪಾಡಿ ಪಳನಿಸ್ವಾಮಿ ಭೇಟಿ ಬಳಿಕ, ಶೀಘ್ರವೇ ಅಣ್ಣಾಮಲೈ ದೆಹಲಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಕೇಂದ್ರದ ಬಿಜೆಪಿ ನಾಯಕರ ಜೊತೆ ಚರ್ಚಿಸಿ ಮೈತ್ರಿ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಪ್ರಸ್ತುತ ತಮಿಳುನಾಡು ರಾಜಕೀಯದಲ್ಲಿ ಅತ್ಯಂತ ಹೆಚ್ಚು ಸದ್ದು ಮಾಡುತ್ತಿರುವ ನಾಯಕರಲ್ಲಿ ಅಣ್ಣಾಮಲೈ ಒಬ್ಬರು. ತಳಮಟ್ಟದಲ್ಲಿ ಅಣ್ಣಾಮಲೈ ಎಷ್ಟು ಪ್ರಭಾವ ಬೀರಿದ್ದಾರೆ ಎಂಬುದು ಗೊತ್ತಿಲ್ಲದೇ ಇದ್ದರೂ, ಸೋಷಿಯಲ್ ಮೀಡಿಯಾ ಸದ್ದು ಮಾಡುವ ಯುಗದಲ್ಲಿ ಅಣ್ಣಾಮಲೈ ಹೆಚ್ಚು ಸೌಂಡ್ ಮಾಡುತ್ತಿದ್ದಾರೆ. ಮೈತ್ರಿಯಿಂದ ಎರಡೂ ಪಕ್ಷಗಳಿಗೂ ಲಾಭವಾಗಲಿದೆ. ಇಲ್ಲದೇ ಹೋದರೆ ಡಿಎಂಕೆ ವಿರೋಧಿ ಮತಗಳು ಒಡೆದು ಡಿಎಂಕೆ ಮೈತ್ರಿಗೆ ವರವಾಗಲಿದೆ.

ಎಐಎಡಿಎಂಕೆ ಈಗ ಕವಲು ದಾರಿಯಲ್ಲಿ ನಿಂತಿದೆ. ಮೈತ್ರಿಯಿಂದ ಆಗುವ ನಷ್ಟಕ್ಕಿಂತಲೂ ಲಾಭವೇ ಹೆಚ್ಚು ಎಂಬುದು ಎಐಎಡಿಎಂಕೆ ನಾಯಕರಿಗೆ ಗೊತ್ತಿದೆ. ಆದರೆ, ಮೈತ್ರಿಯಿಂದಾಗಿ ಅಣ್ಣಾಮಲೈಗೆ ಹೆಚ್ಚಿನ ಮೈಲೇಜ್ ಸಿಗಲಿದೆ ಎಂಬ ಚಿಂತೆ ಎಐಎಡಿಎಂಕೆ ನಾಯಕರಿಗೆ ಕಾಡುತ್ತಿದೆ. ಆದರೆ, ಸೋತು ಸರ್ವನಾಶ ಆಗುವ ಬದಲು, ಮುಳುಗುತ್ತಿರುವವನಿಗೆ ಹುಲುಕಡ್ಡಿಯೂ ಆಸರೆಯಾದಂತೆ ಮೈತ್ರಿಯಿಂದಾಗಿ ಪಕ್ಷವನ್ನು ಉಳಿಸಿಕೊಂಡು, ಭವಿಷ್ಯದಲ್ಲಿ ಬೆಳೆಸುವ ಯೋಚನೆಯನ್ನು ಎಐಎಡಿಎಂಕೆ ನಾಯಕರು ಮಾಡುತ್ತಿದ್ದಾರೆ ಎಂದು ತಮಿಳುನಾಡಿನ ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ. ಇದೇ ಕಾರಣಕ್ಕೆ ಇತ್ತೀಚಿನ ದಿನಗಳಲ್ಲಿ ಎರಡು ಪಕ್ಷಗಳ ನಾಯಕರು ಒಬ್ಬರನ್ನೊಬ್ಬರು ಟೀಕಿಸುವ ಬದಲು, ಸಂಬಂಧ ವೃದ್ಧಿಗೆ ಆದ್ಯತೆ ನೀಡಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ.

ShareSendShareTweetShare
ಚಂದ್ರಮೋಹನ್ ಕೋಲಾರ

ಚಂದ್ರಮೋಹನ್ ಕೋಲಾರ

ಗ್ಯಾರಂಟಿ ನ್ಯೂಸ್ ಸಂಸ್ಥೆಯಲ್ಲಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಹಲವಾರು ಸುದ್ದಿವಾಹಿನಿಗಳಲ್ಲಿ ವಿವಿಧ ಹುದ್ದೆಗಳಲ್ಲಿ 13 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ಪ್ರಚಲಿತ ವಿದ್ಯಮಾನಗಳು, ವಿಜ್ಞಾನ - ತಂತ್ರಜ್ಞಾನ ರಂಗಗಳು ಇವರು ಆಸಕ್ತಿಯ ವಿಚಾರಗಳು. ಇದಲ್ಲದೆ ಇತಿಹಾಸ, ಆರ್ಥಿಕತೆ, ಬಾಹ್ಯಾಕಾಶ, ಕ್ರೀಡಾ ಸುದ್ದಿಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಮೋಟರ್ ಸ್ಪೋರ್ಟ್ ರೇಸಿಂಗ್ ವೀಕ್ಷಣೆ, ಬೈಕಿಂಗ್, ಪ್ರವಾಸ ಮಾಡುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 04 21T233314.930

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

by ಶಾಲಿನಿ ಕೆ. ಡಿ
April 21, 2026 - 11:34 pm
0

Untitled design 2026 04 21T230346.949

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

by ಶಾಲಿನಿ ಕೆ. ಡಿ
April 21, 2026 - 11:04 pm
0

Untitled design 2026 04 21T224207.607

ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್

by Hemanth Kumar S
April 21, 2026 - 10:43 pm
0

Untitled design 2026 04 21T222350.838

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

by ಶಾಲಿನಿ ಕೆ. ಡಿ
April 21, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T230346.949
    ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್
    April 21, 2026 | 0
  • Untitled design 2026 04 21T220648.629
    ಬೆಡ್‌ರೂಮ್‌ಗೂ ತಟ್ಟಿದ್ದ ಇರಾನ್ ಯುದ್ಧದ ಎಫೆಕ್ಟ್‌: ಕಾಂಡೋಮ್‌ ಬೆಲೆ ಏರಿಕೆಗೆ ಸಜ್ಜಾದ ಕಂಪನಿ
    April 21, 2026 | 0
  • Untitled design 2026 04 21T204558.585
    ತ್ರಿಶೂರ್‌ನಲ್ಲಿ ಭೀಕರ ಪಟಾಕಿ ಸ್ಫೋಟ: 10 ಮಂದಿ ಸಾ*ವು, ಹಲವರಿಗೆ ಗಾಯ
    April 21, 2026 | 0
  • Untitled design 2026 04 21T193803.581
    ನಾಯಕರ ಬೆಡ್ ರೂಂನಿಂದ ಮಹಿಳೆಯರ ರಾಜಕೀಯ ಜೀವನ ಶುರುವಾಗುತ್ತದೆ: ಸಂಸದ ಪಪ್ಪು ಯಾದವ್
    April 21, 2026 | 0
  • Untitled design 2026 04 21T184255.810
    “ಪ್ರಧಾನಿ ನರೇಂದ್ರ ಮೋದಿ ಒಬ್ಬ ಟೆರರಿಸ್ಟ್”: ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version