ಬಾಗಲಕೋಟೆಯಲ್ಲಿ ಕಾಂಗ್ರೆಸ್‌ಗೆ ಭಾರಿ ಮುನ್ನಡೆ

BeFunky collage (68)

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಆರಂಭಿಕ ಸುತ್ತಿನಿಂದಲೂ ತನ್ನ ಪ್ರಾಬಲ್ಯ ಮೆರೆದಿರುವ ಕಾಂಗ್ರೆಸ್, 5ನೇ ಸುತ್ತಿನ ಮುಕ್ತಾಯದ ವೇಳೆಗೆ ಬಿಜೆಪಿಯ ಭದ್ರಕೋಟೆಯನ್ನು ನಡುಗಿಸಿದೆ. ದಿವಂಗತ ಎಚ್.ವೈ. ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರು ಮತಗಳ ಅಂತರವನ್ನು ಹೆಚ್ಚಿಸಿಕೊಳ್ಳುತ್ತಾ ಗೆಲುವಿನತ್ತ ದಾಪುಗಾಲು ಹಾಕುತ್ತಿದ್ದಾರೆ.

5ನೇ ಸುತ್ತಿನ ಮತ ಎಣಿಕೆ ಅಂತ್ಯ :

ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎಣಿಕೆಯಲ್ಲಿ ಒಟ್ಟು 23 ಸುತ್ತುಗಳ ಪೈಕಿ ಐದು ಸುತ್ತುಗಳು ಪೂರ್ಣಗೊಂಡಿವೆ.

ಕಾಂಗ್ರೆಸ್ ಮುನ್ನಡೆ : ಎಲ್ಲಾ ಐದೂ ಸುತ್ತುಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಸತತವಾಗಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಿಜೆಪಿಗೆ ಹಿನ್ನಡೆ : ಬಿಜೆಪಿಯ ಅನುಭವಿ ನಾಯಕ ವೀರಣ್ಣ ಚರಂತಿಮಠ ಅವರು ನಗರ ಪ್ರದೇಶದ ಮತಗಳ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದರೂ, ಗ್ರಾಮೀಣ ಭಾಗದ ಮತಗಳು ಕಾಂಗ್ರೆಸ್ ಕೈ ಹಿಡಿದಿವೆ.

ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ :

ನಾಲ್ಕನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸ್ಪಷ್ಟ ಮುನ್ನಡೆ ಸಾಧಿಸುತ್ತಿದ್ದಂತೆ ಮತ ಎಣಿಕೆ ಕೇಂದ್ರದ ಹೊರಗೆ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಬಣ್ಣ ಎರಚುತ್ತಾ, ಕಾಂಗ್ರೆಸ್ ಪರ ಘೋಷಣೆ ಕೂಗುತ್ತಾ ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. “ಉಮೇಶ್ ಮೇಟಿ ಅವರಿಗೆ ಜಯವಾಗಲಿ, ಸಿದ್ದರಾಮಯ್ಯ ಅವರಿಗೆ ಜಯವಾಗಲಿ” ಎಂಬ ಘೋಷಣೆಗಳು ಎಣಿಕೆ ಕೇಂದ್ರದ ಸುತ್ತ ಮಾರ್ದನಿಸುತ್ತಿವೆ.

ಗೆಲುವಿನ ಲೆಕ್ಕಾಚಾರ :

ಸಿಎಂ ಸಿದ್ದರಾಮಯ್ಯ ಅವರ ಆಪ್ತ ಕ್ಷೇತ್ರವಾಗಿದ್ದ ಬಾಗಲಕೋಟೆಯಲ್ಲಿ ಈ ಗೆಲುವು ಸರ್ಕಾರದ ಪ್ರತಿಷ್ಠೆಯ ಪ್ರಶ್ನೆಯಾಗಿತ್ತು. ಅನುಕಂಪದ ಅಲೆ ಹಾಗೂ ಅಹಿಂದ ಮತಗಳ ಕ್ರೋಢೀಕರಣವು ಉಮೇಶ್ ಮೇಟಿ ಅವರ ಕೈ ಹಿಡಿದಂತೆ ಕಾಣುತ್ತಿದೆ. ಮಧ್ಯಾಹ್ನ 12 ಗಂಟೆಯ ವೇಳೆಗೆ ಅಂತಿಮ ಘೋಷಣೆಯಾಗುವ ನಿರೀಕ್ಷೆಯಿದೆ.

Exit mobile version