• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್: 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 11, 2026 - 7:49 pm
in Flash News, ದೇಶ
0 0
0
ಟಾ (3)

ನವದೆಹಲಿ: ದೇಶದ ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಕೇಂದ್ರ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದೆ. ದಿನನಿತ್ಯದ ಚಿಕಿತ್ಸೆಗೆ ಅಗತ್ಯವಾಗಿರುವ 39 ಪ್ರಮುಖ ಔಷಧಿಗಳ ಬೆಲೆಯನ್ನು ಕಡಿತಗೊಳಿಸಿ ಹೊಸ ದರವನ್ನು ನಿಗದಿಪಡಿಸಲಾಗಿದೆ. ಈ ಮೂಲಕ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ಲಕ್ಷಾಂತರ ರೋಗಿಗಳಿಗೆ ಔಷಧಿ ವೆಚ್ಚದ ಹೊರೆ ಕಡಿಮೆಯಾಗಲಿದೆ.

ರಾಷ್ಟ್ರೀಯ ಔಷಧ ದರ ನಿಯಂತ್ರಣ ಪ್ರಾಧಿಕಾರ (NPPA) ಈ ಕುರಿತು ಮಹತ್ವದ ಆದೇಶ ಹೊರಡಿಸಿದೆ. ರಕ್ತದೊತ್ತಡ (BP), ಮಧುಮೇಹ (Diabetes), ಹೃದಯ ಸಂಬಂಧಿ ಕಾಯಿಲೆಗಳು, ಸೋಂಕುಗಳು, ಕಣ್ಣಿನ ಸಮಸ್ಯೆಗಳು ಹಾಗೂ ಉಸಿರಾಟದ ಕಾಯಿಲೆಗಳಿಗೆ ಬಳಸುವ ಹಲವು ಔಷಧಿಗಳ ಗರಿಷ್ಠ ಚಿಲ್ಲರೆ ದರವನ್ನು ನಿಗದಿ ಮಾಡಲಾಗಿದೆ.

RelatedPosts

ಗಾನ ಕೋಗಿಲೆ ಎಸ್‌. ಜಾನಕಿ ಇನ್ನಿಲ್ಲ

ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ

ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು

ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಪಲ್ಟಿ: 15 ಜನ ಜಲಸಮಾಧಿ

ADVERTISEMENT
ADVERTISEMENT

ಹೊಸ ದರದ ಪ್ರಕಾರ, ಔಷಧಿ ತಯಾರಕರು ಹಾಗೂ ಮಾರಾಟಗಾರರು ನಿಗದಿಪಡಿಸಿರುವ ಬೆಲೆಗಿಂತ ಹೆಚ್ಚಿನ ಮೊತ್ತಕ್ಕೆ ಔಷಧಿಗಳನ್ನು ಮಾರಾಟ ಮಾಡುವಂತಿಲ್ಲ ಎಂದು NPPA ಸ್ಪಷ್ಟಪಡಿಸಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಹೆಚ್ಚಿನ ಬೆಲೆಗೆ ಔಷಧಿ ಮಾರಾಟ ಮಾಡಿದರೆ, ಹೆಚ್ಚುವರಿ ಹಣವನ್ನು ಬಡ್ಡಿ ಸಮೇತ ಗ್ರಾಹಕರಿಗೆ ಹಿಂದಿರುಗಿಸಬೇಕಾಗುತ್ತದೆ. ಜೊತೆಗೆ ಔಷಧ ಬೆಲೆ ನಿಯಂತ್ರಣ ಆದೇಶ 2013 ಹಾಗೂ ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಮಧುಮೇಹ ಮತ್ತು ಹೃದಯ ರೋಗಿಗಳಿಗೆ ಪರಿಹಾರ

ಇತ್ತೀಚಿನ ದಿನಗಳಲ್ಲಿ ಮಧುಮೇಹ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿವೆ. ಇಂತಹ ರೋಗಿಗಳು ಪ್ರತಿನಿತ್ಯ ಔಷಧಿಗಳನ್ನು ಸೇವಿಸಬೇಕಾಗಿರುವುದರಿಂದ, ಔಷಧಿ ವೆಚ್ಚವು ಕುಟುಂಬಗಳ ಮೇಲೆ ದೊಡ್ಡ ಆರ್ಥಿಕ ಹೊರೆ ಆಗುತ್ತಿದೆ.

ಈ ಹಿನ್ನೆಲೆ ಕೇಂದ್ರ ಸರ್ಕಾರ ಮಧುಮೇಹ ಚಿಕಿತ್ಸೆಯಲ್ಲಿ ಬಳಸುವ ಎಂಪಾಗ್ಲಿಫ್ಲೋಜಿನಾ, ಸಿಟಾಗ್ಲಿಪ್ಟಿನ್, ಮೆಟ್‌ಫಾರ್ಮಿನ್ ಹೈಡ್ರೋಕ್ಲೋರೈಡ್ ಸಂಯೋಜನೆಯ ಮಾತ್ರೆಗಳ ದರವನ್ನು 14.88 ರೂಪಾಯಿಯಿಂದ 17.17 ರೂಪಾಯಿ ಒಳಗೆ ನಿಗದಿ ಮಾಡಿದೆ.

ಅದೇ ರೀತಿ, ರಕ್ತದೊತ್ತಡ ನಿಯಂತ್ರಣಕ್ಕೆ ಬಳಸುವ ಆಮ್ಲೋಡಿಪೈನ್, ಬಿಸೊಪ್ರೊಲೊಲ್ ಹಾಗೂ ಟೆಲ್ಮಿಸಾರ್ಟನ್ ಸಂಯೋಜನೆಯ ಮಾತ್ರೆಯ ಬೆಲೆಯನ್ನು 14.74 ರೂಪಾಯಿಗೆ ನಿಗದಿ ಮಾಡಲಾಗಿದೆ.

ಕಣ್ಣಿನ ಸೋಂಕು ಮತ್ತು ಹೃದಯ ಚಿಕಿತ್ಸಾ ಔಷಧಿಗಳ ದರ ಇಳಿಕೆ

ಕಣ್ಣಿನ ಸೋಂಕುಗಳಿಗೆ ಬಳಸುವ ನೆಪಾಫೆನಾಕ್ ಮತ್ತು ಮೊಕ್ಸಿಫ್ಲೋಕ್ಸಾಸಿನ್ ಕಣ್ಣಿನ ಡ್ರಾಪ್ಸ್‌ಗಳ ಬೆಲೆಯನ್ನು ಕೂಡ ನಿಯಂತ್ರಿಸಲಾಗಿದೆ. ಇದರ ಪ್ರತಿ ಮಿಲಿಲೀಟರ್‌ಗೆ ಗರಿಷ್ಠ ದರವನ್ನು 68.64 ರೂಪಾಯಿಗೆ ನಿಗದಿ ಮಾಡಲಾಗಿದೆ.

ಹೃದಯ ಸಂಬಂಧಿ ಸಮಸ್ಯೆಗಳಿಗೆ ಬಳಸುವ ಕ್ಲೋಪಿಡೋಗ್ರೆಲ್, ಆಸ್ಪಿರಿನ್ ಮತ್ತು ಅಟೊರ್ವಸ್ಟಾಟಿನ್ ಸಂಯೋಜನೆಯ ಮಾತ್ರೆಯ ಬೆಲೆಯನ್ನು 6 ರೂಪಾಯಿಗೆ ನಿಗದಿಪಡಿಸಲಾಗಿದೆ.

ಇದಲ್ಲದೆ, ದೇಹಕ್ಕೆ ಅಗತ್ಯವಾದ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ3 ಮಾತ್ರೆಗಳ ಗರಿಷ್ಠ ಬೆಲೆಯನ್ನು ಪ್ರತಿ ಮಾತ್ರೆಗೆ 8 ರೂಪಾಯಿಗೆ ನಿಗದಿ ಮಾಡಲಾಗಿದೆ.

ತುರ್ತು ಚಿಕಿತ್ಸಾ ಔಷಧಿಗಳಿಗೂ ಹೊಸ ದರ

ತುರ್ತು ಸಂದರ್ಭಗಳಲ್ಲಿ ಬಳಸುವ ಕೆಲವು ಜೀವ ರಕ್ಷಕ ಔಷಧಿಗಳ ಬೆಲೆಯನ್ನೂ ನಿಯಂತ್ರಣಕ್ಕೆ ತರಲಾಗಿದೆ. ನಾಯಿ ಕಡಿತದ ಸಂದರ್ಭದಲ್ಲಿ ನೀಡಲಾಗುವ ಆಂಟಿ-ರೇಬಿಸ್ ಇಮ್ಯುನೊಗ್ಲೋಬ್ಯುಲಿನ್ ಇಂಜೆಕ್ಷನ್ ದರವನ್ನು 119.48 ರೂಪಾಯಿಗೆ ನಿಗದಿ ಮಾಡಲಾಗಿದೆ.

ಅದೇ ರೀತಿ, ಹೃದಯಾಘಾತದ ಸಂದರ್ಭದಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ತಡೆಯಲು ಬಳಸುವ ಟೆನೆಕ್ಟೆಪ್ಲೇಸ್ ಇಂಜೆಕ್ಷನ್ ಬೆಲೆಯನ್ನು 60,238.27 ರೂಪಾಯಿಗೆ ನಿಗದಿ ಮಾಡಲಾಗಿದೆ.

ರೋಗಿಗಳ ಹಿತದೃಷ್ಟಿಯಿಂದ ಮಹತ್ವದ ಕ್ರಮ

ಔಷಧಿಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಈ ಕ್ರಮ ಮಹತ್ವ ಪಡೆದಿದೆ. ದೀರ್ಘಕಾಲದ ಕಾಯಿಲೆಗಳಿಗೆ ನಿರಂತರ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಇದು ಆರ್ಥಿಕವಾಗಿ ನೆರವಾಗಲಿದೆ.

ಕಡಿಮೆ ದರದಲ್ಲಿ ಗುಣಮಟ್ಟದ ಔಷಧಿಗಳು ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಹೊಸ ದರಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಔಷಧ ಮಾರಾಟಗಾರರಿಗೆ ಸೂಚನೆ ನೀಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಾ (4)

ಗಾನ ಕೋಗಿಲೆ ಎಸ್‌. ಜಾನಕಿ ಇನ್ನಿಲ್ಲ

by ಶಾಲಿನಿ ಕೆ. ಡಿ
July 11, 2026 - 8:19 pm
0

ಟಾ (3)

ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್: 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

by ಶಾಲಿನಿ ಕೆ. ಡಿ
July 11, 2026 - 7:49 pm
0

ಟಾ (2)

ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ

by ಶಾಲಿನಿ ಕೆ. ಡಿ
July 11, 2026 - 7:10 pm
0

ಟಾ (1)

ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು

by ಶಾಲಿನಿ ಕೆ. ಡಿ
July 11, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಾ (4)
    ಗಾನ ಕೋಗಿಲೆ ಎಸ್‌. ಜಾನಕಿ ಇನ್ನಿಲ್ಲ
    July 11, 2026 | 0
  • ಟಾ (2)
    ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ: ಓರ್ವನಿಗೆ ಚಾಕು ಇರಿತ
    July 11, 2026 | 0
  • ಟಾ (1)
    ಕಾನೂನು ಚೌಕಟ್ಟಿನಲ್ಲಿ ಜನರ ಸಮಸ್ಯೆಗೆ ಪರಿಹಾರ ಹುಡುಕಿ: ಸರ್ಕಾರಿ ನೌಕರರಿಗೆ ಡಿ.ಕೆ ಶಿವಕುಮಾರ್ ಕಿವಿಮಾತು
    July 11, 2026 | 0
  • ಟಾ
    ವಿಯೆಟ್ನಾಂನಲ್ಲಿ ಭಾರತೀಯ ಪ್ರವಾಸಿಗರಿದ್ದ ಬೋಟ್ ಪಲ್ಟಿ: 15 ಜನ ಜಲಸಮಾಧಿ
    July 11, 2026 | 0
  • Untitled design 2026 07 11T172712.469
    ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹ*ತ್ಯೆ ಕೇಸ್: ಶಿಕ್ಷಕಿ ಸೇರಿ ಇಬ್ಬರು ವಜಾ
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version