ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರಂತರವಾಗಿ ಟೀಕಿಸುತ್ತಿದ್ದರೆ, ಇತ್ತ ತಾಯಿ ಮಾತ್ರ ಹಿಂದೂ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ.
ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಅವರು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರು ಚಿನ್ನದ ಕಿರೀಟವನ್ನು ದೇವಿಗೆ ಅರ್ಪಿಸಿದರು.
ತಮಿಳುನಾಡಿನ ಹಲವಾರು ಜನರಂತೆ ದುರ್ಗಾ ಸ್ಟಾಲಿನ್ ಅವರು ಕೂಡ ಮೂಕಾಂಬಿಕಾ ದೇವಿಯ ಭಕ್ತೆಯಾಗಿದ್ದಾರೆ. ತಮ್ಮ ಸ್ನೇಹಿತೆಯರೊಂದಿಗೆ ಕೊಲ್ಲೂರು ದೇವಾಲಯಕ್ಕೆ ಆಗಮಿಸಿದ ಅವರು, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಆಡಳಿತ ಮಂಡಳಿಯವರು ಅವರಿಗೆ ಗೌರವ ಸಮರ್ಪಿಸಿದರು.
ಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್, ಹಿಂದೂ ಧರ್ಮವನ್ನು ನಿರಂತರವಾಗಿ ಟೀಕಿಸುತ್ತಿದ್ದಾರೆ. ಉದಯನಿಧಿ ಸ್ಟಾಲಿನ್ ಹಿಂದೆ ಸನಾತನ ಧರ್ಮವನ್ನು ಡೆಂಘೀ, ಮಲೇರಿಯಾ ರೋಗಗಳಿಗೆ ಹೋಲಿಸಿ ದೇಶದಿಂದ ನಿರ್ಮೂಲನೆ ಮಾಡಬೇಕು ಎಂಬ ಹೇಳಿಕೆ ನೀಡಿದ್ದರು. ಆದರೆ ಅವರ ತಾಯಿ ದುರ್ಗಾ ಸ್ಟಾಲಿನ್, ಅದರ ವಿರುದ್ಧವಾಗಿ ಹಿಂದೂ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು ಗಮನ ಸೆಳೆದಿದೆ.





