• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಫಾಸ್ಟ್ ಫುಡ್ ಸೇವನೆಯಿಂದ ದೆಹಲಿ ಏಮ್ಸ್‌ನಲ್ಲಿ ಬಾಲಕಿ ಸಾ*ವು!

admin by admin
December 24, 2025 - 9:51 am
in Flash News, ಆರೋಗ್ಯ-ಸೌಂದರ್ಯ, ದೇಶ
0 0
0
Untitled design 2025 12 24T094027.085

ನವದೆಹಲಿ: ಆಧುನಿಕ ಜೀವನಶೈಲಿಯಲ್ಲಿ ‘ಫಾಸ್ಟ್ ಫುಡ್’ ಎನ್ನುವುದು ಅನಿವಾರ್ಯದಂತಾಗಿದೆ. ಆದರೆ ಈ ಆಹಾರ ಪದ್ಧತಿಯು ನಮ್ಮ ಜೀವವನ್ನೇ ಬಲಿಪಡೆಯಬಲ್ಲದು ಎಂಬುದಕ್ಕೆ ದೆಹಲಿಯ ಏಮ್ಸ್‌ನಲ್ಲಿ ನಡೆದ ಒಂದು ಘಟನೆ ಸಾಕ್ಷಿಯಾಗಿದೆ. ಜಂಕ್ ಫುಡ್ ಸೇವನೆಯಿಂದ ಜೀರ್ಣಾಂಗ ವ್ಯವಸ್ಥೆ ಸಂಪೂರ್ಣ ಹಾನಿಗೊಳಗಾಗಿ 11ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ದೇಶಾದ್ಯಂತ ಆತಂಕ ಮೂಡಿಸಿದೆ.

ಅಹಾನಾ ಎಂಬ 16 ವರ್ಷದ ವಿದ್ಯಾರ್ಥಿನಿ ಕಳೆದ ಸೋಮವಾರ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (AIIMS) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಳು. ಕರುಳಿನ ತೀವ್ರತರವಾದ ಸೋಂಕಿನಿಂದ ಆಕೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಕೇವಲ 16ನೇ ವಯಸ್ಸಿನಲ್ಲಿಯೇ ಆಕೆಯ ಜೀರ್ಣಾಂಗ ವ್ಯವಸ್ಥೆಯು ಸಂಪೂರ್ಣವಾಗಿ ಹದಗೆಟ್ಟಿತ್ತು ಎಂದರೆ ಜಂಕ್ ಫುಡ್ ಎಷ್ಟು ಅಪಾಯಕಾರಿ ಎಂಬುದನ್ನು ಊಹಿಸಬಹುದು.

RelatedPosts

ರೈತರ ಬೆಳೆ ವಿಮೆ ನೋಂದಣಿ; 15 ದಿನ ವಿಸ್ತರಣೆ

ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: ಓರ್ವ ಸಾ*ವು

IRCTC ಹೊಸ ವೆಬ್‌ಸೈಟ್ ಲಾಂಚ್: ಟಿಕೆಟ್ ಬುಕ್ಕಿಂಗ್ ಈಗ ಮತ್ತಷ್ಟು ಸುಲಭ!

E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌

ADVERTISEMENT
ADVERTISEMENT

ಅಹಾನಾಳ ಕುಟುಂಬದವರು ನೀಡಿರುವ ಮಾಹಿತಿ ಪ್ರಕಾರ, ಆಕೆ ಬಾಲ್ಯದಿಂದಲೂ ಮನೆಯಲ್ಲಿ ತಯಾರಿಸಿದ ಆಹಾರಕ್ಕಿಂತ ಮಾರುಕಟ್ಟೆಯಲ್ಲಿ ಸಿಗುವ ಚೌಮಿನ್, ಮ್ಯಾಗಿ, ಪಿಜ್ಜಾ ಮತ್ತು ಬರ್ಗರ್‌ಗಳನ್ನೇ ಅತಿಯಾಗಿ ಇಷ್ಟಪಡುತ್ತಿದ್ದಳು. ಪೋಷಕರು ಎಚ್ಚರಿಕೆ ನೀಡಿದರೂ, ಮನೆಯವರ ಕಣ್ಣು ತಪ್ಪಿಸಿ ಪ್ಯಾಕ್ ಮಾಡಿದ ಆಹಾರ ಪದಾರ್ಥಗಳನ್ನು (Chips & Snacks) ತಿನ್ನುತ್ತಿದ್ದಳು. ದೀರ್ಘಕಾಲದ ಈ ಆಹಾರ ಪದ್ಧತಿಯಿಂದಾಗಿ ಆಕೆಯ ಕರುಳುಗಳು ಪರಸ್ಪರ ಅಂಟಿಕೊಂಡಿದ್ದವು ಎಂದು ಶಸ್ತ್ರಚಿಕಿತ್ಸೆಯ ಸಮಯದಲ್ಲಿ ವೈದ್ಯರು ಪತ್ತೆಹಚ್ಚಿದ್ದಾರೆ.

ನವೆಂಬರ್ 28 ರಂದು ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಾಗ ಅಹಾನಾಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದ ಪರೀಕ್ಷೆಯಲ್ಲಿ ಆಕೆಯ ಹೊಟ್ಟೆಯಲ್ಲಿ ದ್ರವ ಸಂಗ್ರಹವಾಗಿರುವುದು ಪತ್ತೆಯಾಯಿತು. ಶಸ್ತ್ರಚಿಕಿತ್ಸೆಯ ಮೂಲಕ ಆಕೆಯ ಹೊಟ್ಟೆಯಿಂದ ಬರೋಬ್ಬರಿ ಏಳು ಲೀಟರ್ ದ್ರವವನ್ನು ಹೊರತೆಗೆಯಲಾಗಿತ್ತು. ಅಷ್ಟರ ಮಟ್ಟಿಗೆ ಸೋಂಕು ಆಕೆಯ ದೇಹವನ್ನು ಆವರಿಸಿತ್ತು.

ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿ ಏಮ್ಸ್‌ಗೆ ದಾಖಲಾದಾಗ ಅಹಾನಾ ಚೇತರಿಸಿಕೊಳ್ಳುವ ಭರವಸೆ ಇತ್ತು. ಆದರೆ ಭಾನುವಾರ ತಡರಾತ್ರಿ ಆಕೆಯ ಸ್ಥಿತಿ ಹಠಾತ್ತನೆ ಹದಗೆಟ್ಟಿತು. ಕರುಳಿನಲ್ಲಿ ಪ್ರಾರಂಭವಾದ ಸೋಂಕು ಶ್ವಾಸಕೋಶಗಳಿಗೆ ಹರಡಿತ್ತು. ಇದರಿಂದ ದೇಹದಲ್ಲಿ ರಕ್ತ ಪರಿಚಲನೆ ಕಡಿಮೆಯಾಗಿ, ಹೃದಯಕ್ಕೆ ರಕ್ತ ಸಾಗಿಸುವ ರಕ್ತನಾಳಗಳು ಮುಚ್ಚಿಹೋಗಿದ್ದವು. ಕೊನೆಗೆ ಹೃದಯಾಘಾತದಿಂದ ಆಕೆ ಸಾವನ್ನಪ್ಪಿದ್ದಾಲೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಘಟನೆಯ ಬೆನ್ನಲ್ಲೇ ಅಮ್ರೋಹಾದ ಮುಖ್ಯ ವೈದ್ಯಾಧಿಕಾರಿ ಡಾ. ಎಸ್.ಪಿ. ಸಿಂಗ್ ಪೋಷಕರಿಗೆ ಕಟ್ಟುನಿಟ್ಟಾದ ಎಚ್ಚರಿಕೆ ನೀಡಿದ್ದಾರೆ. ಫಾಸ್ಟ್ ಫುಡ್‌ಗಳಲ್ಲಿ ಮಸಾಲೆ, ಕೊಬ್ಬು ಮತ್ತು ಕಾರ್ಬೋಹೈಡ್ರೇಟ್‌ಗಳು ಅಧಿಕವಾಗಿರುತ್ತವೆ. ಇವು ಮಕ್ಕಳ ನೈಸರ್ಗಿಕ ಹಸಿವನ್ನು ಕೊಲ್ಲುತ್ತವೆ. ತಂಪು ಪಾನೀಯಗಳು, ಫ್ರೆಂಚ್ ಫ್ರೈಗಳು ಮಕ್ಕಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತವೆ ಎಂದು ತಿಳಿಸಿದ್ದಾರೆ.

ಅಹಾನಾಳ ಸಾವು ಕೇವಲ ಒಂದು ಅಪಘಾತವಲ್ಲ, ಬದಲಿಗೆ ಅದು ಅನಾರೋಗ್ಯಕರ ಆಹಾರ ಪದ್ಧತಿಯ ಪರಿಣಾಮ. ಮಕ್ಕಳನ್ನು ಜಂಕ್ ಫುಡ್‌ನಿಂದ ದೂರವಿಟ್ಟು, ನೈಸರ್ಗಿಕ ಮತ್ತು ಮನೆಯಲ್ಲಿ ತಯಾರಿಸಿದ ಪೌಷ್ಟಿಕ ಆಹಾರದ ಕಡೆಗೆ ಪ್ರೇರೇಪಿಸುವುದು ಇಂದಿನ ತುರ್ತು ಅಗತ್ಯವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 16T175437.962

ಕಂಬಳಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್; 1.15 ಕೋಟಿ ರೂ. ಅನುದಾನ ಬಿಡುಗಡೆ

by ಶಾಲಿನಿ ಕೆ. ಡಿ
July 16, 2026 - 6:02 pm
0

Untitled design (85)

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಟ್ರೇನ್

by ಕವಿತಾ
July 16, 2026 - 6:00 pm
0

Untitled design (83)

ರೈತರ ಬೆಳೆ ವಿಮೆ ನೋಂದಣಿ; 15 ದಿನ ವಿಸ್ತರಣೆ

by ಕವಿತಾ
July 16, 2026 - 5:39 pm
0

Untitled design (81)

ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: ಓರ್ವ ಸಾ*ವು

by ಕವಿತಾ
July 16, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version