• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೆಹಲಿ ಕಾರ್‌ ಬಾಂಬ್‌ ಸ್ಫೋಟ ಪ್ರಕರಣ: ಕಾರು ಮಾಲೀಕ ತಾರೀಕ್‌ ಅರೆಸ್ಟ್‌‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 11, 2025 - 7:59 am
in Flash News, ದೇಶ
0 0
0
Untitled design 2025 11 11T074301.811

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಭೀಕರ ಸ್ಫೋಟವು ದೇಶವನ್ನೇ ನಡುಗಿಸಿದೆ. ಈ ಘಟನೆಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಸ್ಫೋಟದಲ್ಲಿ ಬಳಸಲಾದ ಕಾರಿನ ಮಾಲೀಕನನ್ನು ಪತ್ತೆ ಹಚ್ಚಿದ ತನಿಖಾ ಅಧಿಕಾರಿಗಳು ಇದೀಗ ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

ಸ್ಫೋಟದ ತೀವ್ರತೆಯಿಂದ ಸುತ್ತಮುತ್ತಲಿನ ಹಲವು ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಈ ಘಟನೆಯನ್ನು ಶಂಕಿತ ಭಯೋತ್ಪಾದಕ ಕೃತ್ಯವೆಂದು ಪರಿಗಣಿಸಿ, ದೆಹಲಿ ಪೊಲೀಸ್ ವಿಶೇಷ ಘಟಕ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಬಾಂಬ್ ನಿಷ್ಕ್ರಿಯ ದಳದ ತಂಡಗಳು ಸ್ಥಳದಲ್ಲಿ ತೀವ್ರ ತನಿಖೆ ನಡೆಸುತ್ತಿವೆ.

RelatedPosts

ಇಸ್ರೇಲ್‌ ಸೈನಿಕರಿಂದ ಅಮಾನವೀಯ ಕೃತ್ಯ: 18 ತಿಂಗಳ ಮಗುವಿಗೆ ಸಿಗರೇಟ್‌ನಿಂದ ಸುಟ್ಟು ಮೊಳೆಯಿಂದ ಚುಚ್ಚಿ ಚಿತ್ರಹಿಂಸೆ..!

ಪೋಕ್ಸೊ ಪ್ರಕರಣದ ಬೆನ್ನಲ್ಲೇ ಆರ್‌ಸಿಬಿ ಆಟಗಾರ ಯಶ್ ದಯಾಳ್ ಐಪಿಲ್‌ನಿಂದ ಔಟ್‌

ಹಣಕಾಸು ವಹಿವಾಟು ನಡೆಸುವಾಗ ಎಚ್ಚರ..! ಯಾಮಾರಿದ್ರೆ ದಂಡ..!

ಆರ್‌ಸಿಬಿ ಕ್ರೇಜ್: ಕೇವಲ 4 ನಿಮಿಷಗಳಲ್ಲಿ ಎಲ್ಲಾ ಟಿಕೆಟ್‌ ಸೋಲ್ಡ್‌ಔಟ್

ADVERTISEMENT
ADVERTISEMENT
ಕಾರು ಯಾರದ್ದು? ಹೇಗೆ ಸ್ಫೋಟವಾಯ್ತು?

ಸ್ಫೋಟಕ್ಕೆ ಬಳಸಲಾದ ಕಾರು ಹುಂಡೈ i20 (HR26CE7674) ಆಗಿದ್ದು, ಇದು ಹರಿಯಾಣ ನೋಂದಣಿಯ ವಾಹನ. ಮೊದಲಿಗೆ ಕಾರು ದೆಹಲಿಯ ಮೊಹಮ್ಮದ್ ಸಲ್ಮಾನ್ ಅವರ ಹೆಸರಿನಲ್ಲಿ ದಾಖಲಾಗಿದ್ದು, ನಂತರ ಅವರು, ಕಾರನ್ನು ಜಮ್ಮು-ಕಾಶ್ಮೀರದ ಪುಲ್ವಾಮಾದ ತಾರೀಕ್ ಎಂಬಾತನಿಗೆ ಮಾರಾಟ ಮಾಡಿದ್ದರು. ಇಬ್ಬರನ್ನೂ ಈಗ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ದೆಹಲಿ ಪೊಲೀಸರು, ಎನ್‌ಐಎ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯ ಸಂಗ್ರಹ ಕೈಗೊಂಡಿವೆ. ವಿಧಿವಿಜ್ಞಾನ ತಜ್ಞರು ಕಾರಿನ ಅವಶೇಷಗಳು ಮತ್ತು ಸುತ್ತಮುತ್ತಲಿನ ಪ್ರದೇಶದಿಂದ ಸ್ಫೋಟಕದ ಗುರುತುಗಳನ್ನು ಸಂಗ್ರಹಿಸಿದ್ದಾರೆ.

ದೆಹಲಿ ಪೊಲೀಸರು ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಪ್ರಕರಣ ದಾಖಲಿಸಿದ್ದಾರೆ. ಇವು ಭಯೋತ್ಪಾದಕ ಕೃತ್ಯಗಳು ಹಾಗೂ ಭಯೋತ್ಪಾದನೆಯನ್ನು ಬೆಂಬಲಿಸುವ ಚಟುವಟಿಕೆಗಳಿಗೆ ಸಂಬಂಧಿಸಿವೆ. ಜೊತೆಗೆ, ಸ್ಫೋಟಕ ವಸ್ತುಗಳ ಕಾಯ್ದೆಯ ಅಡಿಯಲ್ಲಿ ಸಹ ಕೇಸ್ ದಾಖಲಾಗಿದೆ.

ಸ್ಫೋಟಕ್ಕೂ ಮೊದಲು i20 ಕಾರು ದೆಹಲಿಯ ವಿವಿಧ ಭಾಗಗಳಲ್ಲಿ ಸಂಚರಿಸಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ. ಕಾರು ಮಧ್ಯಾಹ್ನ 3:19ಕ್ಕೆ ಕೆಂಪುಕೋಟೆ ಪಾರ್ಕಿಂಗ್ ಬಳಿ ಪ್ರವೇಶಿಸಿದ್ದು, ಸುಮಾರು ಮೂರು ಗಂಟೆಗಳ ಕಾಲ ಅಲ್ಲಿ ನಿಂತಿತ್ತು. ಸಂಜೆ 6:48ಕ್ಕೆ ಕಾರು ಹೊರಟು ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ನಂ. 1 ತಲುಪಿದೆ. ಕೆಲವೇ ಕ್ಷಣಗಳಲ್ಲಿ ಭೀಕರ ಸ್ಫೋಟ ಸಂಭವಿಸಿದೆ.

ಆತ್ಮಹತ್ಯಾ ಬಾಂಬರ್ ದಾಳಿ ಶಂಕೆ

ಸ್ಫೋಟದ ತೀವ್ರತೆ ಮತ್ತು ಕಾರಿನ ಒಳಗಿದ್ದ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದು ಆತ್ಮಹತ್ಯಾ ಬಾಂಬರ್ ದಾಳಿಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನೆಯಲ್ಲಿ  ಸುತ್ತಮುತ್ತಲಿನ ನಾಲ್ಕು ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

ಎನ್‌ಐಎ, ದೆಹಲಿ ಪೊಲೀಸ್ ವಿಶೇಷ ಘಟಕ ಹಾಗೂ ಗುಪ್ತಚರ ಸಂಸ್ಥೆಗಳು ಈ ಪ್ರಕರಣವನ್ನು ತನಿಖೆ ಮಾಡುತ್ತಿವೆ. ಕಾರಿನ ಮೂಲ, ಬಳಸಲಾದ ಸ್ಫೋಟಕಗಳ ಬಗ್ಗೆ ಪತ್ತೆಹಚ್ಚಲು ಪ್ರಯತ್ನ ಆರಂಭಗೊಂಡಿವೆ. “ಘಟನೆಯು ಸಂಘಟಿತ ಭಯೋತ್ಪಾದಕ ಜಾಲದ ಭಾಗವಾಗಿರಬಹುದೆಂದು ಸಾಧ್ಯತೆ ಇದೆ. ತಾರೀಕ್ ಹಾಗೂ ಸಲ್ಮಾನ್ ಅವರ ಸಂಪರ್ಕ ವಲಯಗಳನ್ನು ವಿಶ್ಲೇಷಿಸಲಾಗುತ್ತಿದೆ,” ಎಂದು ಪೊಲೀಸ್ ಮೂಲಗಳು ತಿಳಿಸಲಾಗಿದೆ.

ಸ್ಫೋಟದ ನಂತರ ದೆಹಲಿಯ ಪ್ರಮುಖ ಸ್ಮಾರಕಗಳು, ಸರ್ಕಾರಿ ಕಚೇರಿಗಳು ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ.  ಸ್ಫೋಟದ ನಂತರ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೇಂದ್ರ ಸರ್ಕಾರ ತಕ್ಷಣದ ಕ್ರಮ ಕೈಗೊಂಡಿದೆ. ಗೃಹ ಸಚಿವ ಅಮಿತ್ ಶಾ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ವರದಿ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (15)

ಇಸ್ರೇಲ್‌ ಸೈನಿಕರಿಂದ ಅಮಾನವೀಯ ಕೃತ್ಯ: 18 ತಿಂಗಳ ಮಗುವಿಗೆ ಸಿಗರೇಟ್‌ನಿಂದ ಸುಟ್ಟು ಮೊಳೆಯಿಂದ ಚುಚ್ಚಿ ಚಿತ್ರಹಿಂಸೆ..!

by ಯಶಸ್ವಿನಿ ಎಂ
March 25, 2026 - 12:04 pm
0

Untitled design (14)

ಪೋಕ್ಸೊ ಪ್ರಕರಣದ ಬೆನ್ನಲ್ಲೇ ಆರ್‌ಸಿಬಿ ಆಟಗಾರ ಯಶ್ ದಯಾಳ್ ಐಪಿಲ್‌ನಿಂದ ಔಟ್‌

by ಯಶಸ್ವಿನಿ ಎಂ
March 25, 2026 - 11:42 am
0

Untitled design (12)

ಹಣಕಾಸು ವಹಿವಾಟು ನಡೆಸುವಾಗ ಎಚ್ಚರ..! ಯಾಮಾರಿದ್ರೆ ದಂಡ..!

by ಯಶಸ್ವಿನಿ ಎಂ
March 25, 2026 - 11:12 am
0

Untitled design (10)

ಆರ್‌ಸಿಬಿ ಕ್ರೇಜ್: ಕೇವಲ 4 ನಿಮಿಷಗಳಲ್ಲಿ ಎಲ್ಲಾ ಟಿಕೆಟ್‌ ಸೋಲ್ಡ್‌ಔಟ್

by ಯಶಸ್ವಿನಿ ಎಂ
March 25, 2026 - 10:56 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (15)
    ಇಸ್ರೇಲ್‌ ಸೈನಿಕರಿಂದ ಅಮಾನವೀಯ ಕೃತ್ಯ: 18 ತಿಂಗಳ ಮಗುವಿಗೆ ಸಿಗರೇಟ್‌ನಿಂದ ಸುಟ್ಟು ಮೊಳೆಯಿಂದ ಚುಚ್ಚಿ ಚಿತ್ರಹಿಂಸೆ..!
    March 25, 2026 | 0
  • Untitled design (14)
    ಪೋಕ್ಸೊ ಪ್ರಕರಣದ ಬೆನ್ನಲ್ಲೇ ಆರ್‌ಸಿಬಿ ಆಟಗಾರ ಯಶ್ ದಯಾಳ್ ಐಪಿಲ್‌ನಿಂದ ಔಟ್‌
    March 25, 2026 | 0
  • Untitled design (12)
    ಹಣಕಾಸು ವಹಿವಾಟು ನಡೆಸುವಾಗ ಎಚ್ಚರ..! ಯಾಮಾರಿದ್ರೆ ದಂಡ..!
    March 25, 2026 | 0
  • Untitled design (10)
    ಆರ್‌ಸಿಬಿ ಕ್ರೇಜ್: ಕೇವಲ 4 ನಿಮಿಷಗಳಲ್ಲಿ ಎಲ್ಲಾ ಟಿಕೆಟ್‌ ಸೋಲ್ಡ್‌ಔಟ್
    March 25, 2026 | 0
  • Untitled design (9)
    ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ
    March 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version