ವಕ್ಫ್ ತಿದ್ದುಪಡಿ ಮಸೂದೆ ಪ್ರಶ್ನಿಸಿ ಸುಪ್ರೀಂಗೆ ತಮಿಳುನಾಡು ಸರ್ಕಾರ

ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ: ಡಿಎಂಕೆ

Siddu stalin kcr (6)

ನೆನ್ನೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಅಂಗೀಕರಿಸಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ತಮಿಳುನಾಡು ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ತಿಳಿಸಿದೆ. ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸುವ ಮೂಲಕ ದೇಶದಲ್ಲಿ ಜನಾಂಗೀಯ ವಿಭಜನೆಯ ನೀತಿಗಳನ್ನು ಅನುಸರಿಸುತ್ತಿರುವ ಕೇಂದ್ರ ಸರ್ಕಾರ, ವಕ್ಫ್ ಆಸ್ತಿಗಳನ್ನು ಸೀಮಿತಗೊಳಿಸಲು ಈ ಮಸೂದೆ ತರಲಾಗುತ್ತಿದೆ. ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಿರುವುದನ್ನು ವಿರೋಧಿಸಿ ಮುಖ್ಯಮಂತ್ರಿ ಸ್ಟಾಲಿನ್ ಸೇರಿದಂತೆ ಡಿಎಂಕೆ ಶಾಸಕರು ಕಪ್ಪುಪಟ್ಟಿ ಧರಿಸಿ ಗುರುವಾರ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದೆ. ನಂತರ ಸದನವನ್ನು ಉದ್ದೇಶಿಸಿ ಮಾತನಾಡಿದ ಸ್ಟಾಲಿನ್, ವಕ್ಫ್ ಆಸ್ತಿ ವಿಚಾರವಾಗಿ ಡಿಎಂಕೆ ಹೋರಾಟ ಮಾಡಲಿದೆ.

ತಮಿಳುನಾಡು ವಿಧಾನಸಭೆಯು ಮಾರ್ಚ್ 27 ರಂದು ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ನಿರ್ಣಯವನ್ನು ಅಂಗೀಕರಿಸಿತ್ತು. ಈ ಮಸೂದೆ ಧಾರ್ಮಿಕ ಸಾಮರಸ್ಯವನ್ನು ಕಲಕುವುದಲ್ಲದೆ, ಮುಸ್ಲಿಂ ಸಮುದಾಯದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ದೇಶದ ಹಲವು ರಾಜಕೀಯ ಪಕ್ಷಗಳು ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದವು. ಆದರೂ, ಇದನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಮಸೂದೆ ಅಂಗೀಕಾರವಾದರೂ ಮಸೂದೆ ವಿರುದ್ಧ ಚಲಾವಣೆಯಾದ ಮತಗಳನ್ನು ನಿರ್ಲಕ್ಷಿಸಬಾರದು ಎಂದು ಅವರು ಹೇಳಿದ್ದಾರೆ.

ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ: ವಕ್ಫ್  ವಿರುದ್ಧ ಕೋರ್ಟ್‌ಗೆ

ವಕ್ಫ್ ತಿದ್ದುಪಡಿ ಕಾಯ್ದೆಯು ಮುಸ್ಲಿಮರ ಹಕ್ಕನ್ನು ಕಬಳಿಸುವ ‘ಕರಾಳ’ ಕಾನೂನು ಎಂದು ಟೀಕಿಸಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಇದನ್ನು ಪ್ರಶ್ನಿಸುವುದಾಗಿ ಹೇಳಿದೆ.

ಆತ್ಮಸಾಕ್ಷಿಇರುವ ಎಲ್ಲಾ ನಾಗರಿಕರು ಈ ಮಸೂದೆಯನ್ನು ವಿರೋಧಿಸಬೇಕೆಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಕೋರಿದೆ.

 

Exit mobile version