ಪಾಕ್‌ಗೆ ಭಾರತ ತಿರುಗೇಟು: ಪಾಕಿಸ್ತಾನದ ಡ್ರೋನ್ ಧ್ವಂಸ

ಐಶ್ವರ್ಯ (14)

ಪಾಕಿಸ್ತಾನದಿಂದ ಭಾರತದ ಗಡಿ ಜಿಲ್ಲೆಗಳ ಮೇಲೆ ನಡೆಯುತ್ತಿರುವ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳು ಉದ್ವಿಗ್ನತೆಯನ್ನು ಹೆಚ್ಚಿಸಿವೆ. ಪಹಲ್ಗಾಮ್ ದಾಳಿಯ ಸೇಡನ್ನು ಭಾರತ ‘ಆಪರೇಷನ್ ಸಿಂಧೂರ್’ ಮೂಲಕ ತೀರಿಸಿಕೊಂಡರೂ, ಪಾಕಿಸ್ತಾನ ಗುರುವಾರ ಮತ್ತು ಶುಕ್ರವಾರ ರಾತ್ರಿ ಜಮ್ಮು, ಪಂಜಾಬ್, ರಾಜಸ್ಥಾನದಲ್ಲಿ ಮತ್ತೆ ದಾಳಿ ನಡೆಸಿದೆ. ಭಾರತದ ವಾಯು ರಕ್ಷಣಾ ವ್ಯವಸ್ಥೆ ಈ ದಾಳಿಗಳನ್ನು ವಿಫಲಗೊಳಿಸಿದರೂ, ಪಾಕಿಸ್ತಾನ ತನ್ನ ಆಕ್ರಮಣವನ್ನು ಮುಂದುವರೆಸಿದೆ.

ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಸೇರಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಇತ್ತೀಚಿನ ಬೆಳವಣಿಗೆಗಳಿಗೆ ತಕ್ಕ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ADVERTISEMENT
ADVERTISEMENT

ಪಾಕಿಸ್ತಾನಕ್ಕೆ IMFನಿಂದ 1 ಬಿಲಿಯನ್ ಡಾಲರ್ ಸಾಲ ಮಂಜೂರಾಗಿದ್ದು, ದಾಳಿಗಳು ತೀವ್ರಗೊಂಡಿವೆ. ಜಮ್ಮು ಕಾಶ್ಮೀರ, ರಾಜಸ್ಥಾನದ ಗಡಿ ಜಿಲ್ಲೆಗಳಲ್ಲಿ ನಾಗರಿಕರನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆದಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ. ಜಮ್ಮು ಕಾಶ್ಮೀರ ಆಡಳಿತ ಸೇವೆಯ ಅಧಿಕಾರಿ ಶ್ರೀ ರಾಜ್ ಕುಮಾರ್ ಥಪ್ಪಾ ಶೆಲ್ ದಾಳಿಯಲ್ಲಿ ಬಲಿಯಾಗಿದ್ದಾರೆ.

ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ವಿಮಾನ ನಿಲ್ದಾಣಗಳನ್ನು ಮುಚ್ಚಲಾಗಿದೆ. ಸೈರನ್ ಎಚ್ಚರಿಕೆಯೊಂದಿಗೆ ನಾಗರಿಕರ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗಿದೆ. ಭಾರತ ಈ ದಾಳಿಗಳಿಗೆ ತಕ್ಕ ಉತ್ತರ ನೀಡುವ ತಯಾರಿಯಲ್ಲಿದೆ.

Exit mobile version