ಭಾರತ-ಪಾಕ್ ಗಡಿಯಲ್ಲಿ ಯುದ್ಧದ ಭೀತಿ: ಹೈ-ಅಲರ್ಟ್ ಘೋಷಣೆ

Untitled design (100)

ಶ್ರೀನಗರ: ಭಾರತದ ವಿರುದ್ಧ ಸೇಡಿನ ಕಾರ್ಯಾಚರಣೆಗೆ ಮುಂದಾದ ಪಾಕಿಸ್ತಾನ, ಜಮ್ಮು, ಪಂಜಾಬ್, ಮತ್ತು ರಾಜಸ್ಥಾನವನ್ನು ಗುರಿಯಾಗಿಸಿ ಕ್ಷಿಪಣಿ ದಾಳಿಗಳನ್ನು ಆರಂಭಿಸಿದೆ. ಇದಕ್ಕೆ ಪ್ರತಿಕಾರವಾಗಿ ಭಾರತವು ಪಾಕಿಸ್ತಾನದ ಲಾಹೋರ್ ಮತ್ತು ಇಸ್ಲಾಮಾಬಾದ್‌ನ ಮೇಲೆ ತೀವ್ರ ದಾಳಿಗಳನ್ನು ನಡೆಸಿದೆ. ಅರಬ್ಬೀ ಸಮುದ್ರದಲ್ಲಿ ಭಾರತದ ನೌಕಾಪಡೆಯೂ ದಾಳಿಯನ್ನು ತೀವ್ರಗೊಳಿಸಿದೆ. ಈ ಘಟನೆಯಿಂದ ಭಾರತ-ಪಾಕ್ ಗಡಿಯಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ.

ಭಾರತದ ಏರ್ ಡಿಫೆನ್ಸ್ ಯೂನಿಟ್‌ಗಳು ಪಾಕಿಸ್ತಾನದ ಕ್ಷಿಪಣಿಗಳನ್ನು ಯಶಸ್ವಿಯಾಗಿ ತಡೆಗಟ್ಟಿವೆ. ಪಾಕ್ ಸೇನೆಯ ದಾಳಿಯು ಇಸ್ರೇಲ್‌ನ ಮೇಲಿನ ಹಮಾಸ್ ದಾಳಿಯ ಮಾದರಿಯನ್ನು ಹೋಲುತ್ತಿದೆ ಎಂದು ತಿಳಿದುಬಂದಿದೆ. ಭಾರತದ ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದ್ದು, ಎರಡೂ ದೇಶಗಳ ಸೇನೆಗಳು ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿವೆ.

ADVERTISEMENT
ADVERTISEMENT

ಗಡಿಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಭಾರತ ಸರ್ಕಾರವು ಎಲ್ಲ ರಾಜ್ಯಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ಜನತೆಗೆ ಶಾಂತಿಯಿಂದಿರುವಂತೆ ಸೂಚಿಸಲಾಗಿದ್ದು, ಗಡಿ ಪ್ರದೇಶದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಅಂತಾರಾಷ್ಟ್ರೀಯ ಸಮುದಾಯವು ಈ ಘರ್ಷಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಶಾಂತಿ ಮಾತುಕತೆಗೆ ಮುಂದಾಗುವಂತೆ ಎರಡೂ ದೇಶಗಳಿಗೆ ಕರೆ ನೀಡಿದೆ.

Exit mobile version