ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಪ್ರದೇಶದ ಭದ್ರತೆ ವಿಚಾರದಲ್ಲಿ ಮತ್ತೆ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಉಗ್ರರ ಮನೆಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದ ಬೆನ್ನಲ್ಲೇ, ಪ್ರತ್ಯುತ್ತರದ ಭಾಗವಾಗಿ ಉಗ್ರರು ಮತ್ತೆ ದಾಳಿಗೆ ಯೋಜನೆ ರೂಪಿಸುತ್ತಿರುವ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಈ ಹಿನ್ನಲೆಯಲ್ಲಿ, ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದ 84 ಪ್ರಮುಖ ಪ್ರವಾಸಿ ತಾಣಗಳಲ್ಲಿ 48 ತಾಣಗಳಿಗೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಪ್ರವಾಸಿಗರ ಸುರಕ್ಷತೆಯನ್ನು ಪರಿಗಣಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಗುಪ್ತಚರ ಮೂಲಗಳ ಪ್ರಕಾರ, ಉಗ್ರರು ಪ್ರವಾಸಿ ಪ್ರದೇಶಗಳನ್ನು ಗುರಿಯಾಗಿಸಿ ದಾಳಿಗೆ ಸಂಚು ರೂಪಿಸುತ್ತಿದ್ದಾರೆ. ಸ್ವೀಪರ್ ಸೆಲ್ ಮೂಲಕ ಅವರು ಆಂತರಿಕ ಮಾಹಿತಿ ಸಂಗ್ರಹಿಸಿದ್ದು, ಮುಂದಿನ ಹಂತದ ದಾಳಿಗೆ ಸಿದ್ಧತೆ ನಡೆಸುತ್ತಿರುವುದು ತಿಳಿದುಬಂದಿದೆ.
ಭದ್ರತಾ ಪಡೆಗಳು ಈಗಾಗಲೇ ಈ ಪ್ರದೇಶಗಳಲ್ಲಿ ಜಾಗರೂಕತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕೆಂದು ಸೂಚಿಸಲಾಗಿದೆ. ಪ್ರವಾಸಿಗರ ಓಡಾಟವನ್ನು ನಿಯಂತ್ರಿಸುವ ಮೂಲಕ ಭದ್ರತೆಯನ್ನು ಬಲಪಡಿಸಲು ಉದ್ದೇಶಿಸಲಾಗಿದೆ.