• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದಾವೂದ್‌ ಡಿ-ಕಂಪನಿಯಿಂದ ಕೊ*ಲೆ ಬೆದರಿಕೆ: ಐಪಿಲ್‌ ತೊರೆದ ಬಗ್ಗೆ ರಹಸ್ಯ ಬಿಚ್ಚಿಟ್ಟ ಲಲಿತ್ ಮೋದಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 4, 2026 - 8:40 pm
in Flash News, ದೇಶ
0 0
0
Untitled design 2026 06 04T203952.916

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಸಂಸ್ಥಾಪಕ ಹಾಗೂ ಮಾಜಿ ಆಯುಕ್ತ ಲಲಿತ್ ಮೋದಿ ಹಲವು ವರ್ಷಗಳ ಬಳಿಕ ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ. ಕ್ರಿಕೆಟ್ ಆಡಳಿತದಿಂದ ಶಾಶ್ವತವಾಗಿ ದೂರ ಸರಿಯಲು ಅಂಡರ್‌ವರ್ಲ್ಡ್ ಡಾನ್ ದಾವೂದ್ ಇಬ್ರಾಹಿಂ ಮತ್ತು ಆತನ ಡಿ-ಕಂಪನಿಯಿಂದ ಬಂದಿದ್ದ ನಿರಂತರ ಜೀವ ಬೆದರಿಕೆಗಳೇ ಪ್ರಮುಖ ಕಾರಣ ಎಂದು ಅವರು ತಿಳಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಲಲಿತ್ ಮೋದಿ, ಐಪಿಎಲ್‌ನಲ್ಲಿ ಅಕ್ರಮ ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ವಿರುದ್ಧ ತಾವು ಕೈಗೊಂಡ ಕಠಿಣ ಕ್ರಮಗಳೇ ಅಂಡರ್‌ವರ್ಲ್ಡ್ ಕೋಪಕ್ಕೆ ಕಾರಣವಾಗಿದ್ದವು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಮೇಲೆ ಹಲವು ಬಾರಿ ಹತ್ಯೆ ಸಂಚು ರೂಪಿಸಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

RelatedPosts

ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಪ್ರಹ್ಲಾದ್ ಜೋಶಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ

ಸಿಜೆಪಿ ಪ್ರತಿಭಟನೆ ಅಂತ್ಯ: ಜಂತರ್‌ ಮಂತರ್‌ನಲ್ಲಿ 500ಕ್ಕೂ ಹೆಚ್ಚು ಕಾರ್ಮಿಕರಿಂದ ಸ್ವಚ್ಛತಾ ಕಾರ್ಯ

ಕಾರ್ಗಿಲ್ ವಿಜಯ ದಿನ: ವೀರ ಯೋಧರಿಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಭಾವಪೂರ್ಣ ನಮನ

ADVERTISEMENT
ADVERTISEMENT

ಲಲಿತ್ ಮೋದಿ ಅವರ ಪ್ರಕಾರ, 2012ರಲ್ಲಿ ಲಂಡನ್‌ನಲ್ಲಿ ನಡೆದ ಘಟನೆಯೊಂದು ತಮ್ಮ ಜೀವನದ ಅತ್ಯಂತ ಭಯಾನಕ ಅನುಭವವಾಗಿತ್ತು. ಮಧ್ಯರಾತ್ರಿ ವೇಳೆ ಲಂಡನ್ ಮೂಲದ ಫಿಕ್ಸರ್ ಒಬ್ಬರಿಂದ ಕರೆ ಬಂದಿದ್ದು, ಪ್ರಭಾವಿ ಮಧ್ಯವರ್ತಿಯೊಬ್ಬರ ಪೆಂಟ್‌ಹೌಸ್‌ಗೆ ಬರಲು ಒತ್ತಡ ಹೇರಲಾಗಿತ್ತು. ಅಲ್ಲಿಗೆ ತೆರಳಿದ ಬಳಿಕ ಆ ವ್ಯಕ್ತಿ ಸ್ಯಾಟಲೈಟ್ ಫೋನ್ ಮೂಲಕ ದಾವೂದ್ ಇಬ್ರಾಹಿಂಗೆ ಕರೆ ಮಾಡಿ, ಸ್ಪೀಕರ್‌ನಲ್ಲಿ ಮಾತುಕತೆ ಕೇಳುವಂತೆ ಮಾಡಿದ್ದ ಎಂದು ಮೋದಿ ಹೇಳಿದ್ದಾರೆ.

ಆ ಸಂದರ್ಭದಲ್ಲಿ ದಾವೂದ್ ನೇರವಾಗಿ “ಇಂದಿನಿಂದ ನಿನ್ನ ಆಟ ಮುಗಿಯಿತು” ಎಂಬ ಎಚ್ಚರಿಕೆಯ ಮಾತು ಹೇಳಿದ್ದಾನೆ ಎಂದು ಲಲಿತ್‌ ಮೋದಿ ನೆನಪಿಸಿಕೊಂಡಿದ್ದಾರೆ. ಈ ಘಟನೆಯ ಬಳಿಕ ತಮ್ಮ ಮೇಲೆ ಒತ್ತಡ ಮತ್ತಷ್ಟು ಹೆಚ್ಚಾಗಿದ್ದು, ಐಪಿಎಲ್ ಫ್ರಾಂಚೈಸಿಯೊಂದರ ನಿಯಂತ್ರಣ ನೀಡುವಂತೆ ಹಾಗೂ ಬೆಟ್ಟಿಂಗ್ ಜಾಲಕ್ಕೆ ಉಂಟಾದ ನಷ್ಟವನ್ನು ಭರಿಸುವಂತೆ ಅಂಡರ್‌ವರ್ಲ್ಡ್ ಒತ್ತಾಯಿಸಿತ್ತು ಎಂದು ಅವರು ಹೇಳಿದ್ದಾರೆ.

2009ರಲ್ಲಿ ಭಾರತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಐಪಿಎಲ್ ಟೂರ್ನಿಯನ್ನು ದಕ್ಷಿಣ ಆಫ್ರಿಕಾಕ್ಕೆ ಸ್ಥಳಾಂತರಿಸುವ ನಿರ್ಧಾರವೂ ಅಂಡರ್‌ವರ್ಲ್ಡ್ ಅಸಮಾಧಾನಕ್ಕೆ ಕಾರಣವಾಗಿತ್ತು ಎಂದು ಮೋದಿ ತಿಳಿಸಿದ್ದಾರೆ. ಚುನಾವಣೆ ಕಾರಣದಿಂದ ಟೂರ್ನಿ ರದ್ದಾಗಬಹುದು ಎಂದು ಭಾವಿಸಿ ಬುಕ್ಕಿಗಳು ಕೋಟ್ಯಂತರ ರೂಪಾಯಿಗಳ ಬೆಟ್ಟಿಂಗ್ ನಡೆಸಿದ್ದರು. ಆದರೆ ಟೂರ್ನಿ ಯಶಸ್ವಿಯಾಗಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಪರಿಣಾಮ ಅವರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿತ್ತು.

ಇದಕ್ಕೂ ಮೊದಲು 2008ರಿಂದ 2010ರವರೆಗೆ ಐಪಿಎಲ್ ಮುಖ್ಯಸ್ಥರಾಗಿದ್ದ ಅವಧಿಯಲ್ಲಿ ಸ್ಪಾಟ್ ಫಿಕ್ಸಿಂಗ್ ಹಾಗೂ ಅಕ್ರಮ ಬೆಟ್ಟಿಂಗ್ ವಿರುದ್ಧ ಮೋದಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರು. ಈ ಹಿನ್ನೆಲೆ ಅಂಡರ್‌ವರ್ಲ್ಡ್‌ನಿಂದ ಬಂದಿದ್ದ ಕೋಟ್ಯಂತರ ಡಾಲರ್‌ಗಳ ಆಮಿಷವನ್ನೂ ತಿರಸ್ಕರಿಸಿದ್ದಾಗಿ ಅವರು ಹೇಳಿದ್ದಾರೆ.

ತಮ್ಮ ಹೇಳಿಕೆಯ ಪ್ರಕಾರ, ಮುಂಬೈನಲ್ಲಿ ತಮ್ಮ ನಿವಾಸದ ಹೊರಗೆ ಗುಂಡಿನ ದಾಳಿ ನಡೆದಿತ್ತು. ಜೊತೆಗೆ ದಕ್ಷಿಣ ಆಫ್ರಿಕಾ ಹಾಗೂ ಲಂಡನ್‌ನಲ್ಲಿ ತಮ್ಮ ಹತ್ಯೆಗೆ ಸಂಚು ರೂಪಿಸಲಾಗಿತ್ತು. ತಮ್ಮ ಮಗನನ್ನು ಅಪಹರಿಸುವ ಯತ್ನವೂ ನಡೆದಿತ್ತು ಎಂದು ಮೋದಿ ಆರೋಪಿಸಿದ್ದಾರೆ.

ಈ ಎಲ್ಲಾ ಘಟನೆಗಳ ಬಳಿಕ ಕ್ರಿಕೆಟ್ ಆಡಳಿತದಿಂದ ಸಂಪೂರ್ಣ ದೂರ ಸರಿಯುವುದೇ ಸುರಕ್ಷಿತ ಮಾರ್ಗ ಎಂದು ತೀರ್ಮಾನಿಸಿದ್ದಾಗಿ ಮೋದಿ ತಿಳಿಸಿದ್ದಾರೆ. ತಾವು ಯಾವುದೇ ರಾಜಿ ಮಾಡಿಕೊಂಡಿಲ್ಲ. ಬದಲಿಗೆ ಕ್ರಿಕೆಟ್ ಕ್ಷೇತ್ರದಿಂದ ಹಿಂದೆ ಸರಿಯುವುದಾಗಿ ಹೇಳಿದ ಬಳಿಕವೇ ತಮ್ಮ ವಿರುದ್ಧದ ಬೆದರಿಕೆಗಳು ಕಡಿಮೆಯಾದವು ಎಂದು ಅವರು ಹೇಳಿದ್ದಾರೆ.

“ದಾವೂದ್ ಇಬ್ರಾಹಿಂ ನನ್ನನ್ನು ಕ್ರಿಕೆಟ್‌ನಿಂದ ಹೊರದಬ್ಬಲು ಪ್ರಮುಖ ಕಾರಣವೇ?” ಎಂಬ ಪ್ರಶ್ನೆಗೆ ಉತ್ತರಿಸಿದ ಮೋದಿ, “ಹೌದು, ಅದುವೇ ಅತಿ ದೊಡ್ಡ ಕಾರಣ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಐಪಿಎಲ್ ಅನ್ನು ಜಾಗತಿಕ ಮಟ್ಟದಲ್ಲಿ ಬ್ರ್ಯಾಂಡ್ ಆಗಿ ಬೆಳೆಸಿದ ಲಲಿತ್ ಮೋದಿ ಅವರ ಕ್ರಿಕೆಟ್ ಆಡಳಿತದ ಪಯಣ 2010ರಲ್ಲಿ ಅಂತ್ಯಗೊಂಡಿತ್ತು. ಆರ್ಥಿಕ ಅಕ್ರಮಗಳ ಆರೋಪದ ಹಿನ್ನೆಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅವರನ್ನು ಅಮಾನತುಗೊಳಿಸಿತ್ತು. ಬಳಿಕ 2013ರಲ್ಲಿ ನಿಷೇಧ ಹೇರಲಾಗಿತ್ತು.

ಅಂದಿನಿಂದ ಲಂಡನ್‌ನಲ್ಲಿ ನೆಲೆಸಿರುವ ಮೋದಿ ವಿರುದ್ಧ ವಿವಿಧ ತನಿಖೆಗಳು ಮುಂದುವರಿದಿದ್ದರೂ, ಭಾರತ ತೊರೆಯಲು ಮತ್ತು ಕ್ರಿಕೆಟ್ ಜಗತ್ತಿನಿಂದ ದೂರ ಸರಿಯಲು ಜೀವ ಬೆದರಿಕೆಗಳೇ ಪ್ರಮುಖ ಕಾರಣವಾಗಿದ್ದವು ಎಂಬುದನ್ನು ಅವರು ಇದೀಗ ಮೊದಲ ಬಾರಿಗೆ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ಕ್ವಾಶ್ (14)

ಕೇಂದ್ರ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಪ್ರಹ್ಲಾದ್ ಜೋಶಿ

by ದಿಶಾ ಕೆ. ಎಸ್.
July 26, 2026 - 2:00 pm
0

ಸ್ಕ್ವಾಶ್ (13)

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಫೈನಲ್ ಕೌಂಟ್‌ಡೌನ್: ಇಂದು ಹೈಕಮಾಂಡ್ ಮಹತ್ವದ ಸಭೆ

by ದಿಶಾ ಕೆ. ಎಸ್.
July 26, 2026 - 1:35 pm
0

ಸ್ಕ್ವಾಶ್ (12)

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ

by ದಿಶಾ ಕೆ. ಎಸ್.
July 26, 2026 - 1:05 pm
0

ಸ್ಕ್ವಾಶ್ (11)

ಆಗಸ್ಟ್ 13ರಿಂದ ಮುಂಗಾರು ಅಧಿವೇಶನ ಆರಂಭ: ಸಿಎಂ ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
July 26, 2026 - 12:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    July 25, 2026 | 0
  • Untitled design 2026 07 25T225054.125
    ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ
    July 25, 2026 | 0
  • Untitled design 2026 07 25T215419.297
    ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್
    July 25, 2026 | 0
  • Untitled design 2026 07 25T212647.411
    ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    July 25, 2026 | 0
  • Untitled design 2026 07 25T203833.355
    ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version