ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

Untitled design 2026 02 24T154641.950

ನವದೆಹಲಿ: ದೆಹಲಿಯ ಉತ್ತಮ್ ನಗರ ಪೂರ್ವ (Uttam Nagar East) ಮೆಟ್ರೋ ನಿಲ್ದಾಣದಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಚಲಿಸುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೇವಲ ಐದು ದಿನಗಳ ಅಂತರದಲ್ಲಿ ಇದೇ ನಿಲ್ದಾಣದಲ್ಲಿ ನಡೆದ ಎರಡನೇ ಆತ್ಮಹತ್ಯೆ ಪ್ರಕರಣ ಇದಾಗಿದ್ದು, ಸಾರ್ವಜನಿಕರಲ್ಲಿ ಭೀತಿ ಹೆಚ್ಚಿಸಿದೆ.

ಘಟನೆಯ ಹಿನ್ನೆಲೆ

ಮೃತರನ್ನು ರಾಜಸ್ಥಾನದ ಕರೋಲಿ ಜಿಲ್ಲೆಯ ನಿವಾಸಿ ಮಹಾರಾಜ್ ಸಿಂಗ್ (45) ಎಂದು ಗುರುತಿಸಲಾಗಿದೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಮಹಾರಾಜ್ ಸಿಂಗ್ ತಮ್ಮ ಅಣ್ಣನ ಮಗಳ ಮದುವೆ ಸಮಾರಂಭದಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿದ್ದರು. ಸಂಭ್ರಮದ ಮನೆಯಲ್ಲಿರಬೇಕಿದ್ದ ವ್ಯಕ್ತಿ, ಏಕಾಏಕಿ ಮೆಟ್ರೋ ನಿಲ್ದಾಣಕ್ಕೆ ಬಂದು ಈ ನಿರ್ಧಾರ ಕೈಗೊಂಡಿರುವುದು ಕುಟುಂಬಸ್ಥರಲ್ಲಿ

ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆಯೇ ಮಹಾರಾಜ್ ಸಿಂಗ್ ಹಳಿಗೆ ಜಿಗಿದಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಮೆಟ್ರೋ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹಳಿಯಿಂದ ಹೊರತೆಗೆದಿದ್ದಾರೆ. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಡಿಡಿಯು (DDU) ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಮಹಾರಾಜ್ ಸಿಂಗ್ ಅವರು ಕಳೆದ ಹಲವು ವರ್ಷಗಳಿಂದ ತೀವ್ರವಾದ ಖಿನ್ನತೆಯಿಂದ (Depression) ಬಳಲುತ್ತಿದ್ದರು ಎನ್ನಲಾಗಿದೆ. ಇದಕ್ಕಾಗಿ ಅವರು ದೆಹಲಿಯ ಪ್ರತಿಷ್ಠಿತ ಆರ್.ಎಂ.ಎಲ್ (RML) ಆಸ್ಪತ್ರೆಯಲ್ಲಿ ಸುದೀರ್ಘ ಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಖಿನ್ನತೆಯಿಂದಲೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ದೆಹಲಿ ಮೆಟ್ರೋ ಜಾಲದಲ್ಲಿ ಭದ್ರತೆ ಮತ್ತು ತಡೆಗೋಡೆಗಳಿದ್ದರೂ ಇಂತಹ ಘಟನೆಗಳು ಮರುಕಳಿಸುತ್ತಿವೆ. ಕಳೆದ ಐದು ದಿನಗಳ ಹಿಂದಷ್ಟೇ ಇದೇ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ. ಸತತವಾಗಿ ನಡೆಯುತ್ತಿರುವ ಈ ಘಟನೆಗಳು ಮೆಟ್ರೋ ನಿಲ್ದಾಣಗಳಲ್ಲಿನ ಪ್ರಯಾಣಿಕರ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿವೆ.

ಜೀವನದಲ್ಲಿ ಎದುರಾಗುವ ಸೋಲು, ನೋವು ಅಥವಾ ಮಾನಸಿಕ ಒತ್ತಡಗಳಿಗೆ ಸಾವು ಎಂದಿಗೂ ಪರಿಹಾರವಲ್ಲ. ಖಿನ್ನತೆ ಎಂಬುದು ಚಿಕಿತ್ಸೆಯಿಂದ ಗುಣಪಡಿಸಬಹುದಾದ ಕಾಯಿಲೆ. ಮನಸ್ಸಿನಲ್ಲಿ ಆತ್ಮಹತ್ಯೆಯ ಆಲೋಚನೆಗಳು ಬಂದಾಗ ಅಥವಾ ತೀವ್ರ ಮಾನಸಿಕ ಸಂಕಟ ಅನುಭವಿಸುತ್ತಿರುವಾಗ ತಕ್ಷಣವೇ ತಜ್ಞರ ಅಥವಾ ಸಹಾಯವಾಣಿಯ ನೆರವು ಪಡೆಯುವುದು ಮುಖ್ಯ.

Exit mobile version