• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪ್ಯಾನ್ ಕಾರ್ಡ್ ಪಡೆಯಲು ಆಧಾರ್ ಕಡ್ಡಾಯ: ನಾಳೆಯಿಂದ ಹೊಸ ರೂಲ್ಸ್ ಜಾರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 30, 2025 - 11:04 pm
in ದೇಶ
0 0
0
1111 (2)

ನವದೆಹಲಿ: ಕೇಂದ್ರ ಸರ್ಕಾರವು ಪ್ಯಾನ್ ಕಾರ್ಡ್‌ಗೆ ಸಂಬಂಧಿಸಿದಂತೆ ಒಂದು ಪ್ರಮುಖ ನಿಯಮವನ್ನು ಜಾರಿಗೆ ತರುತ್ತಿದೆ. ಇದು ತೆರಿಗೆ ವಂಚನೆಯನ್ನು ತಡೆಯುವ ಗುರಿಯನ್ನು ಹೊಂದಿದೆ. ಈ ಹೊಸ ಕ್ರಮದಿಂದ ಹಣಕಾಸಿನ ವಹಿವಾಟುಗಳು ಇನ್ನಷ್ಟು ಪಾರದರ್ಶಕವಾಗಲಿವೆ ಮತ್ತು ತೆರಿಗೆ ವಂಚಕರಿಗೆ ಕಡಿವಾಣ ಬೀಳಲಿದೆ. ಜುಲೈ 1 ರಿಂದ ಯಾರು ಹೊಸದಾಗಿ ಪ್ಯಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವವರಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ. ಇದುವರೆಗೆ ವೋಟರ್ ಐಡಿ, ಪಾಸ್‌ಪೋರ್ಟ್ ಅಥವಾ ಜನ್ಮ ಪ್ರಮಾಣಪತ್ರದಂತಹ ದಾಖಲೆಗಳನ್ನು ನೀಡಿ ಪ್ಯಾನ್ ಕಾರ್ಡ್ ಪಡೆಯಬಹುದಿತ್ತು. ಆದರೆ, ಇನ್ಮುಂದೆ ಆಧಾರ್ ಕಾರ್ಡ್ ಇಲ್ಲದೆ ಪ್ಯಾನ್ ಕಾರ್ಡ್ ಸಿಗುವುದಿಲ್ಲ.

ಕೇಂದ್ರ ಸರ್ಕಾರವು ಈ ಕಠಿಣ ಕ್ರಮವನ್ನು ತೆಗೆದುಕೊಂಡಿರುವುದು, ತೆರಿಗೆ ವಂಚಕರು ಬೇರೆಯವರ ಹೆಸರಿನಲ್ಲಿ ಅಥವಾ ನಕಲಿ ದಾಖಲೆಗಳನ್ನು ನೀಡಿ ಬಹುಸಂಖ್ಯೆಯ ಪ್ಯಾನ್ ಕಾರ್ಡ್‌ಗಳನ್ನು ಮಾಡಿಸಿ ವಂಚನೆ ಮಾಡುವುದನ್ನು ತಡೆಯಲು. ಈ ನಿಯಮವು ಹೊಸದಾಗಿ ಪ್ಯಾನ್ ಕಾರ್ಡ್ ಪಡೆಯುವವರಿಗೆ ಮಾತ್ರವಲ್ಲ, ಈಗಾಗಲೇ ಪ್ಯಾನ್ ಕಾರ್ಡ್ ಹೊಂದಿರುವವರಿಗೂ ಅನ್ವಯವಾಗುತ್ತದೆ. ದೇಶದ ಎಲ್ಲಾ ಪ್ಯಾನ್ ಕಾರ್ಡ್‌ದಾರರು ತಮ್ಮ ಪ್ಯಾನ್‌ನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲೇಬೇಕು. ಇದಕ್ಕಾಗಿ ಸರ್ಕಾರವು ಡಿಸೆಂಬರ್ 31, 2025 ರ ಗಡುವನ್ನು ನಿಗದಿಪಡಿಸಿದೆ. ಒಂದು ವೇಳೆ ಈ ಗಡುವಿನೊಳಗೆ ಲಿಂಕ್ ಮಾಡದಿದ್ದರೆ, ಜನವರಿ 1, 2026 ರಿಂದ ಲಿಂಕ್ ಆಗದ ಪ್ಯಾನ್ ಕಾರ್ಡ್‌ಗಳು ನಿಷ್ಕ್ರಿಯವಾಗುತ್ತವೆ.

RelatedPosts

ಹೆಂಡತಿ ಮಾಯಾಜಾಲಕ್ಕೆ ಸಿಲುಕಿ ಭಾವನ ಕಂಪನಿಗೆ ಸರ್ಕಾರಿ ಹಣ ಹಾಕಿದ IDFC ಬ್ಯಾಂಕ್ ಮ್ಯಾನೇಜರ್

ಡಾ.ರಾಜ್‌ ಕುಮಾರ್‌ ಕಿಡ್ನಾಪ್ ಕೇಸ್‌: 25 ವರ್ಷಗಳ ಬಳಿಕ ಕೋರ್ಟ್‌ನಲ್ಲಿ ನಡೆದಿದ್ದೇನು..?

ಇಂದಿರಾ-ನೆಹರೂ ಆಡಳಿತದಲ್ಲಿ ವಿದೇಶೀ ಗುಪ್ತಚರರ ಹಿಡಿತದಲ್ಲಿತ್ತು ಭಾರತ: ಸುಧಾಂಶು ತ್ರಿವೇದಿ

2026ರ ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 3ರಂದು ಗೋಚರ

ADVERTISEMENT
ADVERTISEMENT
ಆಧಾರ್-ಪ್ಯಾನ್ ಲಿಂಕ್ ಮಾಡುವುದು ಹೇಗೆ?

ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ತುಂಬಾ ಸರಳವಾಗಿದೆ. ಸರ್ಕಾರವು ಈ ಪ್ರಕ್ರಿಯೆಯನ್ನು ಸುಗಮಗೊಳಿಸಲು ಎರಡು ಸುಲಭ ವಿಧಾನಗಳನ್ನು ಒದಗಿಸಿದೆ. ಆನ್‌ಲೈನ್ ವಿಧಾನ ಮತ್ತು SMS ವಿಧಾನ.

ಆನ್‌ಲೈನ್ ವಿಧಾನ:
  1. ಆದಾಯ ತೆರಿಗೆ ಇ-ಫೈಲಿಂಗ್ ವೆಬ್‌ಸೈಟ್‌ಗೆ (www.incometax.gov.in) ಭೇಟಿ ನೀಡಿ.

  2. ‘ಲಿಂಕ್ ಆಧಾರ್’ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ.

  3. ನಿಮ್ಮ ಪ್ಯಾನ್ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ಇತರ ಅಗತ್ಯ ವಿವರಗಳನ್ನು ಭರ್ತಿ ಮಾಡಿ.

  4. ನಿಮ್ಮ ಆಧಾರ್‌ನೊಂದಿಗೆ ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ OTP ಯನ್ನು ನಮೂದಿಸಿ.

  5. ‘ಸಬ್ಮಿಟ್’ ಕ್ಲಿಕ್ ಮಾಡಿದರೆ, ನಿಮ್ಮ ಆಧಾರ್ ಮತ್ತು ಪ್ಯಾನ್ ಯಶಸ್ವಿಯಾಗಿ ಲಿಂಕ್ ಆಗುತ್ತದೆ.

SMS ವಿಧಾನ:

ಇಂಟರ್ನೆಟ್ ಸೌಲಭ್ಯ ಇಲ್ಲದವರಿಗೂ ಸರ್ಕಾರವು SMS ಮೂಲಕ ಲಿಂಕ್ ಮಾಡುವ ಸೌಲಭ್ಯವನ್ನು ಕಲ್ಪಿಸಿದೆ.

  1. ನಿಮ್ಮ ಮೊಬೈಲ್‌ನ ಮೆಸೇಜ್ ಬಾಕ್ಸ್‌ನಲ್ಲಿ ಈ ಫಾರ್ಮ್ಯಾಟ್‌ನಲ್ಲಿ ಟೈಪ್ ಮಾಡಿ.
    UIDPAN <12-ಅಂಕಿಯ ಆಧಾರ್ ಸಂಖ್ಯೆ> <10-ಅಂಕಿಯ ಪ್ಯಾನ್ ಸಂಖ್ಯೆ>

  2. ಉದಾಹರಣೆಗೆ, ನಿಮ್ಮ ಆಧಾರ್ ಸಂಖ್ಯೆ 987654321012 ಮತ್ತು ಪ್ಯಾನ್ ಸಂಖ್ಯೆ ABCDE1234F ಆಗಿದ್ದರೆ, UIDPAN 987654321012 ABCDE1234F ಎಂದು ಟೈಪ್ ಮಾಡಿ.

  3. ಈ ಸಂದೇಶವನ್ನು 567678 ಅಥವಾ 56161 ಸಂಖ್ಯೆಗೆ ಕಳುಹಿಸಿ.

  4. ನಿಮ್ಮ ಆಧಾರ್ ಮತ್ತು ಪ್ಯಾನ್ ಲಿಂಕ್ ಆಗುವುದು ದೃಢೀಕರಣ ಸಂದೇಶದ ಮೂಲಕ ತಿಳಿಯುತ್ತದೆ.

ಈ ನಿಯಮದಿಂದ ಏನು ಪ್ರಯೋಜನ?

ಈ ಕ್ರಮವು ತೆರಿಗೆ ವಂಚನೆಯನ್ನು ತಡೆಗಟ್ಟುವ ಜೊತೆಗೆ, ಹಣಕಾಸಿನ ವಹಿವಾಟುಗಳನ್ನು ಇನ್ನಷ್ಟು ಸುರಕ್ಷಿತವಾಗಿಸುತ್ತದೆ. ಆಧಾರ್-ಪ್ಯಾನ್ ಲಿಂಕ್‌ನಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್‌ಗಳನ್ನು ದುರ್ಬಳಕೆ ಮಾಡುವ ಸಾಧ್ಯತೆ ಕಡಿಮೆಯಾಗುತ್ತದೆ.

ಗಡುವಿನೊಳಗೆ ಆಧಾರ್-ಪ್ಯಾನ್ ಲಿಂಕ್ ಮಾಡದಿದ್ದರೆ, ಬ್ಯಾಂಕ್ ಖಾತೆಗಳು, ಷೇರು ವಹಿವಾಟು, ಆಸ್ತಿ ಖರೀದಿ ಮುಂತಾದ ಹಣಕಾಸಿನ ಚಟುವಟಿಕೆಗಳಲ್ಲಿ ತೊಂದರೆ ಎದುರಾಗಬಹುದು. ಆದ್ದರಿಂದ, ಈಗಲೇ ಕ್ರಮ ಕೈಗೊಂಡು ಡಿಸೆಂಬರ್ 31, 2025 ರ ಒಳಗೆ ನಿಮ್ಮ ಪ್ಯಾನ್ ಕಾರ್ಡ್‌ನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 25T180934.218

ಹೆಂಡತಿ ಮಾಯಾಜಾಲಕ್ಕೆ ಸಿಲುಕಿ ಭಾವನ ಕಂಪನಿಗೆ ಸರ್ಕಾರಿ ಹಣ ಹಾಕಿದ IDFC ಬ್ಯಾಂಕ್ ಮ್ಯಾನೇಜರ್

by ಶಾಲಿನಿ ಕೆ. ಡಿ
February 25, 2026 - 6:11 pm
0

Untitled design 2026 02 25T180556.097

ಡಾ.ರಾಜ್‌ ಕುಮಾರ್‌ ಕಿಡ್ನಾಪ್ ಕೇಸ್‌: 25 ವರ್ಷಗಳ ಬಳಿಕ ಕೋರ್ಟ್‌ನಲ್ಲಿ ನಡೆದಿದ್ದೇನು..?

by ಯಶಸ್ವಿನಿ ಎಂ
February 25, 2026 - 6:08 pm
0

Untitled design 2026 02 25T173728.606

ಮಾರ್ಚ್‌ 3 ಚಂದ್ರ ಗ್ರಹಣ: ಭಕ್ತಾಧಿಗಳಿಗೆ ವಿಶೇಷ ವೇಳಾಪಟ್ಟಿ ಬಿಡುಗಡೆ ಮಾಡಿದ ಧರ್ಮಸ್ಥಳ

by ಯಶಸ್ವಿನಿ ಎಂ
February 25, 2026 - 5:38 pm
0

Untitled design 2026 02 25T171542.223

ರಣಜಿ ಫೈನಲ್‌ ಪಂದ್ಯದಲ್ಲಿ ಹೈಡ್ರಾಮಾ: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜೆಕೆ ನಾಯಕ

by ಶಾಲಿನಿ ಕೆ. ಡಿ
February 25, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T180934.218
    ಹೆಂಡತಿ ಮಾಯಾಜಾಲಕ್ಕೆ ಸಿಲುಕಿ ಭಾವನ ಕಂಪನಿಗೆ ಸರ್ಕಾರಿ ಹಣ ಹಾಕಿದ IDFC ಬ್ಯಾಂಕ್ ಮ್ಯಾನೇಜರ್
    February 25, 2026 | 0
  • Untitled design 2026 02 25T180556.097
    ಡಾ.ರಾಜ್‌ ಕುಮಾರ್‌ ಕಿಡ್ನಾಪ್ ಕೇಸ್‌: 25 ವರ್ಷಗಳ ಬಳಿಕ ಕೋರ್ಟ್‌ನಲ್ಲಿ ನಡೆದಿದ್ದೇನು..?
    February 25, 2026 | 0
  • Untitled design 2026 02 25T165228.164
    ಇಂದಿರಾ-ನೆಹರೂ ಆಡಳಿತದಲ್ಲಿ ವಿದೇಶೀ ಗುಪ್ತಚರರ ಹಿಡಿತದಲ್ಲಿತ್ತು ಭಾರತ: ಸುಧಾಂಶು ತ್ರಿವೇದಿ
    February 25, 2026 | 0
  • ಭಾರತದಲ್ಲಿ ಮಾರ್ಚ್ 3, ಮಂಗಳವಾರ ವರ್ಷದ ಮೊದಲ ಚಂದ್ರಗ್ರಹಣ
    2026ರ ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 3ರಂದು ಗೋಚರ
    February 25, 2026 | 0
  • 30 ಸಾವಿರ ಲಂಚದ ಹಣ ಹುಡುಕುತ್ತಾ ಹೊರಟವರಿಗೆ ಸಿಕ್ಕಿದ್ದು 4 ಕೋಟಿ..!
    30 ಸಾವಿರ ಲಂಚದ ಹಣ ಹುಡುಕುತ್ತಾ ಹೊರಟವರಿಗೆ ಸಿಕ್ಕಿದ್ದು 4 ಕೋಟಿ ನಗದು..!
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version