• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

CJP ಪ್ರತಿಭಟನೆಯಿಂದ ರಣಾಂಗಣವಾಯ್ತು ದೆಹಲಿ: ಸಂಸತ್‌ ಭವನ ಸುತ್ತ ಇಂಟರ್‌ನೆಟ್‌ ಸ್ಥಗಿತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 20, 2026 - 3:45 pm
in Flash News, ದೇಶ
0 0
0

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ‘ಚಲೋ ಸಂಸತ್’ ಮೆರವಣಿಗೆ ದೆಹಲಿಯಲ್ಲಿ ಉದ್ವಿಗ್ನತೆ ಸೃಷ್ಟಿಸಿದೆ.. NEET ಪರೀಕ್ಷೆಯಲ್ಲಿನ ಅಕ್ರಮ ಆರೋಪಗಳನ್ನು ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಆಯೋಜಿಸಲಾದ ‘ಚಲೋ ಸಂಸತ್’ ಪ್ರತಿಭಟನೆ ಭುಗಿಲೆದ್ದಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಭದ್ರತಾ ಕಾರಣಗಳಿಂದ ಸಂಸತ್ ಭವನದ ಸುತ್ತಮುತ್ತ ಹಾಗೂ ಕೆಲವು ಪ್ರದೇಶಗಳಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಜಂತರ್ ಮಂತರ್‌ನಿಂದ ಸಂಸತ್ ಭವನದತ್ತ ಮೆರವಣಿಗೆ ನಡೆಸಲು CJP ಕರೆ ನೀಡಿತ್ತು. ಈ ಹಿನ್ನೆಲೆ ಸಾವಿರಾರು ಕಾರ್ಯಕರ್ತರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಜಂತರ್ ಮಂತರ್‌ನಲ್ಲಿ ಸೇರಿದ್ದರು. ಮೆರವಣಿಗೆ ಆರಂಭವಾಗುತ್ತಿದ್ದಂತೆ ಪೊಲೀಸರು ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ಪ್ರತಿಭಟನಾಕಾರರನ್ನು ತಡೆದರು. ಕೆಲವರು ಬ್ಯಾರಿಕೇಡ್‌ಗಳನ್ನು ದಾಟಲು ಯತ್ನಿಸಿದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತು.

RelatedPosts

ಆಸ್ಪತ್ರೆಗೆ ದಾಖಲಾದ ಸೋನಮ್ ವಾಂಗ್ಚುಕ್ ಆರೋಗ್ಯ ವಿಚಾರಿಸಿದ ಜೆ.ಪಿ. ನಡ್ಡಾ, ಜಿತೇಂದ್ರ ಸಿಂಗ್

ವಿದ್ಯಾರ್ಥಿಗಳನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದ್ದಾರೆ: ರಾಹುಲ್ ಗಾಂಧಿ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

ಜಮ್ಮು-ಕಾಶ್ಮೀರದಲ್ಲಿ ಮಳೆ ಆರ್ಭಟ: ಸಾವಿನ ಸಂಖ್ಯೆ 27ಕ್ಕೆ ಏರಿಕೆ

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ADVERTISEMENT
ADVERTISEMENT

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಮೊದಲು ಎಚ್ಚರಿಕೆ ನೀಡಿದರೂ, ಪರಿಸ್ಥಿತಿ ಹದಗೆಟ್ಟ ಹಿನ್ನೆಲೆ  ಲಾಠಿಚಾರ್ಜ್ ನಡೆಸಿ ಹಲವರನ್ನು ವಶಕ್ಕೆ ಪಡೆದರು. ಕೆಲವು ಸ್ಥಳಗಳಲ್ಲಿ ಅಶ್ರುವಾಯು ಹಾಗೂ ಜಲಪ್ರಯೋಗ ಕೂಡ ನಡೆದಿರುವ ಮಾಹಿತಿ ಲಭ್ಯವಾಗಿದೆ. ಇದೇ ವೇಳೆ ಕೆಲವು ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಿದ್ದಾರೆ ಎನ್ನಲಾಗಿದ್ದು, ಘಟನೆಯಲ್ಲಿ ಒಬ್ಬ ದೆಹಲಿ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ಗಾಯಗೊಂಡಿದ್ದಾರೆ.

ಸಂಸತ್ ಅಧಿವೇಶನ ಹಿನ್ನೆಲೆ ಈಗಾಗಲೇ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿತ್ತು. ಈ ಮೆರವಣಿಗೆಗೆ ಯಾವುದೇ ಅಧಿಕೃತ ಅನುಮತಿ ನೀಡಲಾಗಿರಲಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದು, ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರತಿಭಟನೆಯ ನಡುವೆ CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಆದರೆ ಈ ಕುರಿತು ಪೊಲೀಸರು ಅಧಿಕೃತ ಮಾಹಿತಿ ನೀಡಿಲ್ಲ. ತಮ್ಮ ನಾಯಕನನ್ನು ವಶಕ್ಕೆ ಪಡೆದಿರುವುದನ್ನು ವಿರೋಧಿಸಿ ಪ್ರತಿಭಟನಾಕಾರರು ಮತ್ತಷ್ಟು ಆಕ್ರೋಶ ವ್ಯಕ್ತಪಡಿಸಿದ್ದು, ಕೆಲವೆಡೆ ಪೊಲೀಸರೊಂದಿಗೆ ವಾಗ್ವಾದವೂ ನಡೆದಿದೆ.

ಪ್ರತಿಭಟನೆಯ ಪರಿಣಾಮ ಸಂಸತ್ ಭವನದ ಸುತ್ತಮುತ್ತ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಎಲ್ಲ ಪ್ರವೇಶ ದ್ವಾರಗಳನ್ನು ಬಂದ್ ಮಾಡಲಾಗಿದ್ದು, ಹೆಚ್ಚುವರಿ ಪೊಲೀಸ್ ಪಡೆ ಹಾಗೂ ರ್ಯಾಪಿಡ್ ಆಕ್ಷನ್ ಫೋರ್ಸ್ (RAF) ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮೆಟ್ರೋ ನಿಲ್ದಾಣಗಳಲ್ಲಿಯೂ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗಿದ್ದು, ಕೆಲವು ನಿಲ್ದಾಣಗಳಲ್ಲಿ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಜಂತರ್ ಮಂತರ್‌ನಿಂದ ಸುಮಾರು ನಾಲ್ಕು ಕಿಲೋಮೀಟರ್ ವ್ಯಾಪ್ತಿಯಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರು ಪರದಾಡಿದರು.

ಇದೇ ವೇಳೆ ಸಂಸತ್ ಒಳಗೂ NEET ಅಕ್ರಮ ವಿಚಾರ ಭಾರೀ ಚರ್ಚೆಗೆ ಗ್ರಾಸವಾಯಿತು. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದವು. ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ಗದ್ದಲ ಹೆಚ್ಚಾಗುತ್ತಿದ್ದಂತೆ ಕಲಾಪವನ್ನು ಪದೇಪದೇ ಮುಂದೂಡಲಾಯಿತು.

ಅಧಿವೇಶನ ಆರಂಭವಾದ ಕೆಲವೇ ಗಂಟೆಗಳಲ್ಲಿ ಹಲವು ಬಾರಿ ಕಲಾಪ ಸ್ಥಗಿತಗೊಂಡಿದ್ದು, ಕೊನೆಗೆ ಉಭಯ ಸದನಗಳ ಕಾರ್ಯಚಟುವಟಿಕೆಯನ್ನು ಮರುದಿನಕ್ಕೆ ಮುಂದೂಡಲಾಯಿತು. ಮುಂಗಾರು ಅಧಿವೇಶನದ ಮೊದಲ ದಿನವೇ ಸಂಸತ್ ಒಳಗೂ ಹೊರಗೂ ನಡೆದ ಬೆಳವಣಿಗೆಗಳು ದೇಶದ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿವೆ.

NEET ಪರೀಕ್ಷೆಯಲ್ಲಿನ ಅಕ್ರಮ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂಬುದು ಪ್ರತಿಭಟನಾಕಾರರು ಮತ್ತು ವಿಪಕ್ಷಗಳ ಪ್ರಮುಖ ಬೇಡಿಕೆಯಾಗಿದೆ. ಮುಂದಿನ ದಿನಗಳಲ್ಲಿ ಈ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ ದೆಹಲಿಯಲ್ಲಿ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (43)

ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

by ದಿಶಾ ಕೆ. ಎಸ್.
July 22, 2026 - 10:06 am
0

ಸ್ವ (41)

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

by ದಿಶಾ ಕೆ. ಎಸ್.
July 22, 2026 - 9:32 am
0

ಸ್ವ (40)

ಆಸ್ಪತ್ರೆಗೆ ದಾಖಲಾದ ಸೋನಮ್ ವಾಂಗ್ಚುಕ್ ಆರೋಗ್ಯ ವಿಚಾರಿಸಿದ ಜೆ.ಪಿ. ನಡ್ಡಾ, ಜಿತೇಂದ್ರ ಸಿಂಗ್

by ದಿಶಾ ಕೆ. ಎಸ್.
July 22, 2026 - 8:36 am
0

ಸ್ವ (37)

ವಿದ್ಯಾರ್ಥಿಗಳನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದ್ದಾರೆ: ರಾಹುಲ್ ಗಾಂಧಿ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

by ದಿಶಾ ಕೆ. ಎಸ್.
July 22, 2026 - 8:01 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T232501.609
    ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
    July 21, 2026 | 0
  • Untitled design 2026 07 21T230820.854
    ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?
    July 21, 2026 | 0
  • Untitled design 2026 07 21T224906.562
    ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ
    July 21, 2026 | 0
  • Untitled design 2026 07 21T223304.754
    ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್
    July 21, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version