• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಇಂದು ಪ್ರಮಾಣವಚನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 20, 2025 - 8:28 am
in ದೇಶ
0 0
0
Untitled design 2025 11 20T082450.818

ಪಾಟ್ನಾ, ನವೆಂಬರ್ 20: ಬಿಹಾರದ ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯ ಬರೆಯಲಾಗುತ್ತಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದೆ. 243 ಸ್ಥಾನಗಳ ವಿಧಾನಸಭೆಯಲ್ಲಿ NDA ಗುರುತು 200ಕ್ಕೂ ಹೆಚ್ಚು ಸೀಟು ಗಳಿಸಿ ಸ್ಪಷ್ಟ ಬಹುಮತ ಪಡೆದಿದೆ. ಈ ಗೆಲುವಿನ ಫಲವಾಗಿ ಜನತಾದಳ (ಯುನೈಟೆಡ್) ಮುಖಂಡ ನಿತೀಶ್ ಕುಮಾರ್ ಇಂದು ಬೆಳಗ್ಗೆ 11:30ಕ್ಕೆ ಬಿಹಾರದ ಮುಖ್ಯಮಂತ್ರಿಯಾಗಿ 10ನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನವನ್ನು ಈ ಕಾರ್ಯಕ್ರಮಕ್ಕಾಗಿ ಅದ್ಧೂರಿಯಾಗಿ ಸಿಂಗರಿಸಲಾಗಿದೆ. ಸಾವಿರಾರು NDA ಕಾರ್ಯಕರ್ತರು, ಜೆಡಿ(ಯು) ಮತ್ತು ಬಿಜೆಪಿ ನಾಯಕರು, ಜನಸಾಮಾನ್ಯರು ಈ ಸಮಾರಂಭಕ್ಕೆ ಆಗಮಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಸೇರಿದಂತೆ ಕೇಂದ್ರದ ಹಲವು ಗಣ್ಯರು ಆಗಮಿಸಲಿದ್ದಾರೆ.

RelatedPosts

ಗುರುಗ್ರಾಮ್‌ನಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಬೆಂಕಿ ಹಾಕಿದ ಪ್ರಿಯಕರ

ಆರ್ಥಿಕ ಒತ್ತಡಕ್ಕೆ ಒಂದೇ ಮನೆಯಲ್ಲಿ ಕುಟುಂಬದ ಐವರು ದುರ್ಮರಣ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಅಬ್ಬರ: 55 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯು ಪಡೆ ಏರ್ ಸ್ಟ್ರೈಕ್ : 12ಕ್ಕೂ ಹೆಚ್ಚು ಜನರ ದುರ್ಮರಣ

ADVERTISEMENT
ADVERTISEMENT

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶದ ಡಾ. ಮೋಹನ್ ಯಾದವ್, ಅಸ್ಸಾಂನ ಹಿಮಂತ ಬಿಸ್ವ ಶರ್ಮ, ಗುಜರಾತ್‌ನ ಭೂಪೇಂದ್ರ ಪಟೇಲ್, ಒಡಿಶಾದ ಮೋಹನ್ ಚರಣ ಮಾಝಿ ಸೇರಿದಂತೆ ಕನಿಷ್ಠ 7 ರಾಜ್ಯಗಳ ಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ನಿನ್ನೆ ನಡೆದ ಸಮಾಲೋಚನಾ ಸಭೆಯ ನಂತರ, ನಿತೀಶ್ ಕುಮಾರ್ ಅವರು ತಮ್ಮ ಹಳೆಯ ಸರ್ಕಾರದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಸಲ್ಲಿಸಿದರು. ಅದೇ ವೇಳೆ NDA ಘಟಕಪಕ್ಷಗಳ ಬೆಂಬಲ ಪತ್ರಗಳನ್ನೂ ರಾಜ್ಯಪಾಲರಿಗೆ ಒಪ್ಪಿಸಿದರು. ರಾಜ್ಯಪಾಲರು ಅವರ ಈ ಮನವಿಯನ್ನು ಅಂಗೀಕರಿಸಿ, ಸರ್ಕಾರ ರಚನೆಗೆ ಆಹ್ವಾನ ನೀಡಿದರು.

ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್: ನ.20 ರಂದು 10 ನೇ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

ಪಾಟ್ನಾ, ನವೆಂಬರ್ 17: ಬಿಹಾರದ ರಾಜಕೀಯದಲ್ಲಿ ಮತ್ತೊಮ್ಮೆ ನಿತೀಶ್ ಮ್ಯಾಜಿಕ್ ಪುನರಾವರ್ತನೆಯಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ಸಂಜೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ರಾಜೀನಾಮೆ ಸಲ್ಲಿಸಿ, ತಮ್ಮ ಸಂಪುಟದೊಂದಿಗೆ ಕೊನೆಯ ಸಭೆ ನಡೆಸಿದರು. ಆದರೆ ಇದು ಕೇವಲ ಔಪಚಾರಿಕತೆ ಮಾತ್ರ ! ಇದೇ ನವೆಂಬರ್ 20ರಂದು ಗುರುವಾರ ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಅದ್ಧೂರಿ ಸಮಾರಂಭದಲ್ಲಿ ನಿತೀಶ್ ಕುಮಾರ್ ಅವರು 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ. 243 ಸ್ಥಾನಗಳಲ್ಲಿ ಬೃಹತ್ ಬಹುಮತದೊಂದಿಗೆ 202 ಸ್ಥಾನಗಳನ್ನು ಪಡೆದುಕೊಂದಿದೆ. ಬಿಜೆಪಿ 89 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ, ಜೆಡಿಯು 85 ಸ್ಥಾನಗಳನ್ನು ಗಳಿಸಿ ಎರಡನೇ ಸ್ಥಾನ ಪಡೆದಿದೆ. ಇತರ ಸಣ್ಣ ಪಕ್ಷಗಳು ಉಳಿದ ಸ್ಥಾನಗಳನ್ನು ಹಂಚಿಕೊಂಡಿದ್ದಾರೆ.

ಇನ್ನು ವಿರೋಧ ಪಕ್ಷಗಳ ಮಹಾಘಟಬಂಧನ್ (ಆರ್‌ಜೆಡಿ + ಕಾಂಗ್ರೆಸ್ + ಇತರರು) ಕೇವಲ 35 ಸ್ಥಾನಗಳಿಗೆ ಸೀಮಿತವಾಗಿ ಭಾರೀ ಸೋಲು ಕಂಡಿದೆ. ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ ಕೂಡ ದೊಡ್ಡ ಹಿನ್ನಡೆ ಅನುಭವಿಸಿದೆ. ಈ ಐತಿಹಾಸಿಕ ಗೆಲುವಿನ ನಂತರ ಎನ್‌ಡಿಎಯಲ್ಲಿ ಯಾರು ಮುಖ್ಯಮಂತ್ರಿ ಎಂಬ ಪ್ರಶ್ನೆಗೆ ತಕ್ಷಣ ಉತ್ತರ ಸಿಕ್ಕಿದೆ. ಅದೇ ನಿತೀಶ್‌ ಕುಮಾರ್‌..!

ಹೊಸ ಸರ್ಕಾರ ರಚನೆಗೆ ಈಗ ತೀವ್ರ ಚಟುವಟಿಕೆ ಆರಂಭವಾಗಿದೆ. ಬಿಜೆಪಿ ಮತ್ತು ಜೆಡಿಯು ನಾಯಕರು ಈಗಾಗಲೇ ಸಂಪುಟದ ಆಕಾರ, ಖಾತೆ ಹಂಚಿಕೆ ಕುರಿತು ಚರ್ಚೆ ನಡೆಸುತ್ತಿದ್ದಾರೆ. ನಿತೀಶ್ ಅವರ 10ನೇ ಪ್ರಮಾಣವಚನ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಎನ್‌ಡಿಎಯ ಎಲ್ಲ ಪ್ರಮುಖ ಮಿತ್ರಪಕ್ಷಗಳ ನಾಯಕರು ಆಗಮಿಸುವ ಸಾಧ್ಯತೆ ಇದೆ.

ಇತ್ತ ಚುನಾವಣೆಯಲ್ಲಿ ಸೋತು ನಿರಾಶೆಗೊಳಗಾದ ಕಾಂಗ್ರೆಸ್ ಇನ್ನೂ ಆ ಆಘಾತದಿಂದ ಹೊರಬಂದಿಲ್ಲ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರು ಬಿಹಾರದಲ್ಲಿ ಮರುಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಎನ್‌ಡಿಎ ನಾಯಕರು ಮತ್ತು ಪ್ರಧಾನಿ ಮೋದಿ ಅವರು ಒಂದು ಮತಕ್ಕೆ ಮಹಿಳೆಯರಿಗೆ ₹10,000 ನೀಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಆದರೆ ಈ ಆರೋಪಕ್ಕೆ ಯಾವುದೇ ಪುರಾವೆ ನೀಡದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನಿತೀಶ್ ಕುಮಾರ್ ಅವರ ರಾಜಕೀಯ ಜೀವನವೇ ಒಂದು ಅದ್ಭುತ ಕಥೆ. 2005ರಿಂದ ಇಲ್ಲಿಯವರೆಗೆ ಹಲವು ಬಾರಿ ಮೈತ್ರಿಕೂಟ ಬದಲಾಯಿಸಿ, ಎನ್‌ಡಿಎ-ಮಹಾಘಟಬಂಧನ್-ಮತ್ತೆ ಎನ್‌ಡಿಎ ಎಂದು ತಿರುಗುವ ಪ್ರಯಾಣದಲ್ಲಿ ಯಾವಾಗಲೂ ಸಿಎಂ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಈ ಬಾರಿ ಎನ್‌ಡಿಎಯ ಭರ್ಜರಿ ಗೆಲುವಿನೊಂದಿಗೆ ಅವರ 10ನೇ ಅವಧಿಯ ಸಿಎಂ ಆಗಿ ಪ್ರಮಾಣವಚನ ಇತಿಹಾಸದ ಪುಟ ಸೇರಲಿದೆ.

ಬಿಹಾರದ ಜನತೆಗೆ ಈಗ ನಿತೀಶ್ 4.0 ಸರ್ಕಾರದಿಂದ ಏನೆಲ್ಲಾ ನಿರೀಕ್ಷೆ? ಅಭಿವೃದ್ಧಿ, ಉದ್ಯೋಗ, ಮಹಿಳಾ ಸಬಲೀಕರಣ, ಗುಣಮಟ್ಟದ ಶಿಕ್ಷಣ-ಆರೋಗ್ಯ ಈ ಎಲ್ಲದಕ್ಕೂ ಹೊಸ ಸರ್ಕಾರ ಒತ್ತು ನೀಡುತ್ತದೆ ಎಂಬ ಭರವಸೆ ಎನ್‌ಡಿಎ ನಾಯಕರು ನೀಡಿದ್ದಾರೆ.ನವೆಂಬರ್ 20ರ ಸಮಾರಂಭದ ನಂತರ ಬಿಹಾರದ ಹೊಸ ಸಂಪುಟ ರೂಪುಗೊಳ್ಳಲಿದೆ. ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ನಿತೀಶ್ ಯುಗ ಆರಂಭವಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 22T183348.446

ಅಂಜನಾದ್ರಿ ಬೆಟ್ಟದಲ್ಲಿ ಸೆಟ್ಟೇರಿತು ‘ಜೈ ಹನುಮಾನ್’..ಹನುಮಾನ್ ಅವತಾರದಲ್ಲಿ ರಿಷಬ್ ಶೆಟ್ಟಿ

by ಶ್ರೀದೇವಿ ಬಿ. ವೈ
February 22, 2026 - 6:37 pm
0

BeFunky collage 2026 02 22T182719.690

ಮಾದಾವರ ಮೆಟ್ರೋ ಬಳಿ ಭಯಾನಕ ಸರಣಿ ಅಪಘಾತ: 4 ವಾಹನಗಳ ಡಿಕ್ಕಿ, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

by ಶ್ರೀದೇವಿ ಬಿ. ವೈ
February 22, 2026 - 6:29 pm
0

BeFunky collage 2026 02 22T175643.056

ಮಹಿಳಾ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026: ಬಾಂಗ್ಲಾವನ್ನು ಮಣಿಸಿದ ಭಾರತಕ್ಕೆ ಭರ್ಜರಿ ಗೆಲುವು

by ಶ್ರೀದೇವಿ ಬಿ. ವೈ
February 22, 2026 - 6:02 pm
0

BeFunky collage 2026 02 22T172903.412

ಬೆಂಗಳೂರಿನಲ್ಲಿ ಪ್ರೀತಿ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ನಡೀತಾ ಗ್ಯಾಂಗ್‌‌ ರೇಪ್‌..?

by ಶ್ರೀದೇವಿ ಬಿ. ವೈ
February 22, 2026 - 5:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 22T151730.662
    ಗುರುಗ್ರಾಮ್‌ನಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಬೆಂಕಿ ಹಾಕಿದ ಪ್ರಿಯಕರ
    February 22, 2026 | 0
  • BeFunky collage 2026 02 22T134748.193
    ಆರ್ಥಿಕ ಒತ್ತಡಕ್ಕೆ ಒಂದೇ ಮನೆಯಲ್ಲಿ ಕುಟುಂಬದ ಐವರು ದುರ್ಮರಣ
    February 22, 2026 | 0
  • BeFunky collage 2026 02 22T121147.041
    ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಅಬ್ಬರ: 55 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ
    February 22, 2026 | 0
  • BeFunky collage 2026 02 22T112135.569
    ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯು ಪಡೆ ಏರ್ ಸ್ಟ್ರೈಕ್ : 12ಕ್ಕೂ ಹೆಚ್ಚು ಜನರ ದುರ್ಮರಣ
    February 22, 2026 | 0
  • BeFunky collage 2026 02 22T104307.905
    ಭಾರತದಲ್ಲಿ ಉಗ್ರರ ಕೃತ್ಯ ಎಸಗಲು ಸಂಚು: 8 ಮಂದಿ ಬಂಧನ
    February 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version