ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಯ ಭರ್ಜರಿ ಬೇಟೆ: ಪಾಕ್ ಮೂಲದ ಉಗ್ರ ಖತಂ

Untitled design 2026 04 01T111658.612

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್ ಜಿಲ್ಲೆಯಲ್ಲಿ ಭಯೋತ್ಪಾದಕರ ವಿರುದ್ಧ ಭಾರತೀಯ ಭದ್ರತಾ ಪಡೆಗಳು ನಡೆಸುತ್ತಿರುವ ಆಪರೇಷನ್ ಅರಹಮಾ ಕಾರ್ಯಾಚರಣೆಯು ಯಶಸ್ಸಿನ ಹಾದಿಯಲ್ಲಿದೆ. ರಾತ್ರಿಯಿಡೀ ನಡೆದ ತೀವ್ರ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ ಮೂಲದ ಓರ್ವ ಕುಖ್ಯಾತ ಉಗ್ರನನ್ನು ಭಾರತೀಯ ಸೇನೆಯು ಹೊಡೆದುರುಳಿಸಿದೆ. ಅರಹಮಾ ಪ್ರದೇಶದಲ್ಲಿ ಇನ್ನೂ ಕೆಲ ಉಗ್ರರು ಅಡಗಿರುವ ಶಂಕೆಯಿದ್ದು, ಕಾರ್ಯಾಚರಣೆ ತೀವ್ರಗೊಂಡಿದೆ.

ಕಾರ್ಯಾಚರಣೆಯ ಹಿನ್ನೆಲೆ

ಗಂಡೇಬಲ್ ಜಿಲ್ಲೆಯ ಅರಹಮಾ ಎಂಬಲ್ಲಿ ಉಗ್ರರು ಅಡಗಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಮಾರ್ಚ್ 31ರ ರಾತ್ರಿ ಭಾರತೀಯ ಸೇನೆಯ ಅಸ್ಸಾಂ ರೆಜಿಮೆಂಟ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಹಾಗೂ ಸಿಆರ್‌ಪಿಎಫ್ (CRPF) ಜಂಟಿಯಾಗಿ ಶೋಧ ಕಾರ್ಯ ಆರಂಭಿಸಿದವು. ಭದ್ರತಾ ಪಡೆಗಳು ಸುತ್ತುವರಿಯುತ್ತಿದ್ದಂತೆ ಅಡಗಿದ್ದ ಉಗ್ರರು ಏಕಾಏಕಿ ದಾಳಿ ಮಾಡಿದರು. ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ನಡೆಸಿದ ದಾಳಿಯಲ್ಲಿ ಓರ್ವ ಪಾಕ್ ಉಗ್ರ ಹತನಾಗಿದ್ದಾನೆ.

ಬುಧವಾರ (ಏಪ್ರಿಲ್ 1) ಎರಡನೇ ದಿನವೂ ಕಾರ್ಯಾಚರಣೆ ಮುಂದುವರಿದಿದೆ. ಶ್ರೀನಗರದ ಚಿನಾರ್ ಕಾರ್ಪ್ಸ್ ನೀಡಿರುವ ಮಾಹಿತಿಯ ಪ್ರಕಾರ, ಕನಿಷ್ಠ ಇಬ್ಬರು ಅಥವಾ ಮೂವರು ಉಗ್ರರು ಸೇನೆಯ ಸಿಲುಕಿಕೊಂಡಿದ್ದಾರೆ. ಉಗ್ರರು ಅಡಗಿರುವ ಸಂಭವವಿರುವ ಪ್ರದೇಶವನ್ನು ಸಂಪೂರ್ಣವಾಗಿ ಸೀಲ್ ಮಾಡಲಾಗಿದ್ದು, ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಹೈ ಅಲರ್ಟ್ ಮತ್ತು ನಾಗರಿಕರ ಸುರಕ್ಷತೆ

ಗಂಡೇಬಲ್ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಕಾರ್ಯಾಚರಣೆ ನಡೆಯುತ್ತಿರುವ ಅರಹಮಾ ಪ್ರದೇಶದ ಸುತ್ತಮುತ್ತಲಿನ ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಉಗ್ರರು ಅಡಗಿರುವ ಮನೆ ಅಥವಾ ಕಟ್ಟಡಗಳನ್ನು ಗುರುತಿಸಿರುವ ಸೇನೆ, ಅತ್ಯಾಧುನಿಕ ಡ್ರೋನ್ ಮತ್ತು ಸ್ನೈಪರ್‌ಗಳನ್ನು ಬಳಸಿ ನಿಗಾ ಇರಿಸಿದೆ. ನಿರೀಕ್ಷಿಸಲಾಗುತ್ತಿದೆ.

Exit mobile version