ಆಪರೇಷನ್ ಸಿಂಧೂರ್‌ನಲ್ಲಿ ಭಾರತೀಯ ಜೆಟ್‌ಗಳ ಧ್ವಂಸ: ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

Untitled design (65)

ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ನಂತರ ಭಾರತೀಯ ಸೇನೆಯ ಸಾಮರ್ಥ್ಯವನ್ನು ಕಾಂಗ್ರೆಸ್ ಪ್ರಶ್ನಿಸಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಧೋರಣೆ ಹೆಚ್ಚಾಗಿದೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಘರ್ಷಣೆಗೆ ಕಾರಣವಾಯಿತು. ಇದೀಗ ಕಾಂಗ್ರೆಸ್ ನಾಯಕ ಜೈ ರಾಮ್ ರಮೇಶ್ ಸಾಮಾಜಿಕ ಜಾಲತಾಣದಲ್ಲಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀಕ್ಷ್ಣವಾಗಿ ಕಿಡಿಕಾರಿದ್ದಾರೆ.

ಆಪರೇಷನ್ ಸಿಂಧೂರ್ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಜೆಟ್ ಯುದ್ಧ ವಿಮಾನಗಳನ್ನು ಪಾಕಿಸ್ತಾನ ಧ್ವಂಸಗೊಳಿಸಿತ್ತು ಎಂದು ಇಂಡೋನೇಷ್ಯಾದಲ್ಲಿ ಭಾರತೀಯ ವಾಯುಸೇನೆಯ ಅಧಿಕಾರಿಯೊಬ್ಬರು ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ, ಕೇಂದ್ರ ಸರ್ಕಾರದ ಮೇಲೆ ಜೈ ರಾಮ್ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಡೋನೇಷ್ಯಾದಲ್ಲಿ ಇತ್ತೀಚೆಗೆ ನಡೆದ ಸೆಮಿನಾರ್‌ವೊಂದರಲ್ಲಿ ಮಾತನಾಡಿದ ಭಾರತೀಯ ವಾಯುಸೇನೆಯ ಕ್ಯಾಪ್ಟನ್ ಶಿವಕುಮಾರ್, ಮೇ 7ರ ರಾತ್ರಿ ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ನಡೆದ ಯುದ್ಧ ವಿಮಾನಗಳ ದಾಳಿಯ ಸಂದರ್ಭದಲ್ಲಿ ಭಾರತೀಯ ವಿಮಾನಗಳನ್ನು ಪಾಕಿಸ್ತಾನ ಹೊಡೆದುರುಳಿಸಿತ್ತು ಎಂದು ತಿಳಿಸಿದ್ದರು. ರಾಜಕೀಯ ನಾಯಕತ್ವದಿಂದ ಹೇರಲಾದ ನಿರ್ಬಂಧಗಳಿಂದಾಗಿ ಭಾರತೀಯ ವಾಯುಪಡೆಗೆ ತೀವ್ರ ನಷ್ಟವಾಯಿತು ಎಂದು ಅವರು ಆರೋಪಿಸಿದ್ದಾರೆ. ಈ ಹೇಳಿಕೆಯನ್ನು ಆಧರಿಸಿ, ಕಾಂಗ್ರೆಸ್ ನಾಯಕ ಜೈ ರಾಮ್ ರಮೇಶ್ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಲು ಏಕೆ ನಿರಾಕರಿಸುತ್ತಿದ್ದಾರೆ? ಸಂಸತ್ತಿನ ವಿಶೇಷ ಅಧಿವೇಶನದ ಬೇಡಿಕೆಯನ್ನು ಏಕೆ ತಿರಸ್ಕರಿಸಲಾಗಿದೆ?” ಎಂದು ಅವರು ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯು ಭಾರತದ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷವು ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಸರ್ಕಾರದ ನಿರ್ಧಾರಗಳನ್ನು ಪ್ರಶ್ನಿಸಿದ್ದು, ವಿಶೇಷವಾಗಿ ರಾಜಕೀಯ ಹಸ್ತಕ್ಷೇಪದಿಂದಾಗಿ ಸೇನೆಯ ಸಾಮರ್ಥ್ಯಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿದೆ. ಜೈ ರಾಮ್ ರಮೇಶ್ ಅವರ ಪೋಸ್ಟ್‌ನಲ್ಲಿ, ಕೇಂದ್ರ ಸರ್ಕಾರವು ಈ ವಿಷಯದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ವಿಫಲವಾಗಿದೆ ಎಂದು ಟೀಕಿಸಲಾಗಿದೆ.

Exit mobile version