ಆಪರೇಷನ್ ಸಿಂಧೂರ್: ಕಾರ್ಯಾಚರಣೆಯಲ್ಲಿ ಯಾವೊಬ್ಬ ನಾಗರಿಕನೂ ಮೃತಪಟ್ಟಿಲ್ಲ: ರಾಜನಾಥ್‌ಸಿಂಗ್

Befunky collage (87)

ಭಾರತೀಯ ಸಶಸ್ತ್ರ ಪಡೆಗಳು ಕೈಗೊಂಡ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಲ್ಲಿ ಒಬ್ಬರೇ ಒಬ್ಬ ನಾಗರಿಕನೂ ಮೃತಪಟ್ಟಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಈ ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಈ ದಾಳಿಯಲ್ಲಿ ಮೃತಪಟ್ಟ 26 ಅಮಾಯಕರಿಗೆ ನ್ಯಾಯ ಒದಗಿಸಲಾಗಿದೆ ಎಂದು ಅವರು ದೃಢಪಡಿಸಿದ್ದಾರೆ.

ADVERTISEMENT
ADVERTISEMENT

ಇಂದು ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್, “ನಾವು ಕೇವಲ ಭಯೋತ್ಪಾದಕರನ್ನು ಮತ್ತು ಅವರ ನೆಲೆಗಳನ್ನು ಗುರಿಯಾಗಿಸಿದ್ದೇವೆ. ಪಹಲ್ಗಾಮ್‌ನಲ್ಲಿ ನಮ್ಮ ನಾಗರಿಕರನ್ನು ಕೊಂದವರಿಗೆ ಈ ಕಾರ್ಯಾಚರಣೆಯ ಮೂಲಕ ತಕ್ಕ ಶಿಕ್ಷೆ ನೀಡಲಾಗಿದೆ,” ಎಂದು ಹೇಳಿದರು.

ಆಪರೇಷನ್ ಸಿಂಧೂರ್‌ನ ಸಂಕ್ಷಿಪ್ತ ವಿವರಣೆಯನ್ನು ನೀಡಿದ ಅವರು, “ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಈ ದಾಳಿಯನ್ನು ಯೋಜಿಸಿ, ನಿಖರವಾಗಿ ಜಾರಿಗೊಳಿಸಲಾಗಿದೆ. ರಾಮಾಯಣದಲ್ಲಿ ಹನುಮಾನ್ ಜೀ ಅಶೋಕವನವನ್ನು ಧ್ವಂಸಗೊಳಿಸಿದಂತೆ, ಈ ಕಾರ್ಯಾಚರಣೆಯೂ ಭಯೋತ್ಪಾದಕರ ನೆಲೆಗಳನ್ನು ಮಾತ್ರ ಗುರಿಯಾಗಿಸಿದೆ,” ಎಂದು ವಿವರಿಸಿದರು.

Exit mobile version