• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನೀಟ್ ಪೇಪರ್ ಲೀಕ್‌ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ: ಪ್ರಧಾನಿ ಮೋದಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 21, 2026 - 2:42 pm
in ದೇಶ
0 0
0
ಸ್ವ (24)

ನವದೆಹಲಿ, ಜುಲೈ 21: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಗಂಭೀರ ಕಳವಳ ವ್ಯಕ್ತಪಡಿಸಿದ್ದು, ಪರೀಕ್ಷಾ ಅಕ್ರಮ ಎಸಗಿದವರ ವಿರುದ್ಧ ಕಠಿಣಾತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ. ಎನ್‌ಡಿಎ ಸಂಸದೀಯ ಪಕ್ಷದ ‘ಮಂಗಲ್ ಮಿಲನ್’ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಪ್ರಧಾನಿ, ದೇಶದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ತರುವ ಯಾವುದೇ ಅಕ್ರಮವನ್ನು ಸರ್ಕಾರ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಪ್ರಧಾನಿಯವರ ಹೇಳಿಕೆಯನ್ನು ಬಳಿಕ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಧ್ಯಮಗಳಿಗೆ ವಿವರಿಸಿದರು. ನೀಟ್ ಪೇಪರ್ ಲೀಕ್ ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಕೇಂದ್ರ ಸರ್ಕಾರ ವಿಳಂಬವಿಲ್ಲದೆ ಕ್ರಮ ಕೈಗೊಂಡಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಲಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಯಾವುದೇ ಅನ್ಯಾಯವಾಗದಂತೆ ತ್ವರಿತವಾಗಿ ಮರುಪರೀಕ್ಷೆ ನಡೆಸಲಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

RelatedPosts

ಹನಿಮೂನ್ ಮರ್ಡ*ರ್‌‌‌ ಕೇಸ್: ಆರೋಪಿ ಸೋನಮ್‌ಗೆ ಶರಣಾಗುವಂತೆ ಸುಪ್ರೀಂ ಸಲಹೆ

ಪ್ರಧಾನಿ ಮೋದಿ ನಿವಾಸದ ಎದುರು ರಾಹುಲ್ ಗಾಂಧಿ-ಪ್ರಿಯಾಂಕಾ ಧರಣಿ

ದೆಹಲಿ ಪ್ರತಿಭಟನೆ ಚರ್ಚೆಗೆ ವಿಪಕ್ಷಗಳ ಆಗ್ರಹ: ಸ್ಪೀಕರ್‌‌ ಭೇಟಿಯಾಗಿ ಮನವಿ ಸಲ್ಲಿಸಿದ ವಿಪಕ್ಷ ನಾಯಕರು

ದೆಹಲಿಯಲ್ಲಿ ಮುಂದುವರೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ: ಬಿಗಿ ಪೊಲೀಸ್ ಬಂದೋಬಸ್ತ್

ADVERTISEMENT
ADVERTISEMENT

ಪರೀಕ್ಷಾ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಉಳಿಸಿಕೊಳ್ಳುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ದೇಶದಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳು ಸಂಪೂರ್ಣ ಪಾರದರ್ಶಕ, ನ್ಯಾಯಸಮ್ಮತ ಹಾಗೂ ವಿಶ್ವಾಸಾರ್ಹವಾಗಿರಬೇಕು. ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮ ಮತ್ತು ವಂಚನೆಗೆ ಅವಕಾಶವೇ ಇಲ್ಲದಂತಹ ಬಲಿಷ್ಠ ವ್ಯವಸ್ಥೆ ನಿರ್ಮಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿದಂತೆ ಎಲ್ಲರ ಜವಾಬ್ದಾರಿಯಾಗಿದೆ.

ಈ ನಿಟ್ಟಿನಲ್ಲಿ ಪರೀಕ್ಷಾ ಅಕ್ರಮಗಳನ್ನು ತಡೆಯಲು ಅಗತ್ಯವಿರುವ ಕಾನೂನು ಹಾಗೂ ಆಡಳಿತಾತ್ಮಕ ಕ್ರಮಗಳಿಗೆ ಎನ್‌ಡಿಎ ಮೈತ್ರಿಕೂಟದ ಎಲ್ಲ ಪಾಲುದಾರರು ಒಗ್ಗಟ್ಟಿನಿಂದ ಬೆಂಬಲ ನೀಡಬೇಕು ಎಂದು ಪ್ರಧಾನಿ ಕರೆ ನೀಡಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡುವ ಉದ್ದೇಶದಿಂದ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರುವಲ್ಲಿ ಯಾವುದೇ ರಾಜಿ ಇರಬಾರದು ಎಂಬ ನಿಲುವನ್ನು ಅವರು ಪುನರುಚ್ಚರಿಸಿದ್ದಾರೆ.

ರಾಜಕೀಯ ಭಿನ್ನಾಭಿಪ್ರಾಯಗಳು ಸಹಜವಾದರೂ, ದೇಶದ ಯುವಜನರ ಭವಿಷ್ಯದ ವಿಚಾರದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಕೆಲಸ ಮಾಡಬೇಕು. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ, ಪರೀಕ್ಷಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ರಚನಾತ್ಮಕ ಚರ್ಚೆ ಹಾಗೂ ಸಹಕಾರ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ನೀಟ್ ಪೇಪರ್ ಲೀಕ್ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದು, ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಸರ್ಕಾರ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವ ಸೂಚನೆ ನೀಡಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವ ಜೊತೆಗೆ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಾಂತ್ರಿಕ ಮತ್ತು ಕಾನೂನುಬದ್ಧ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂಬ ಸಂದೇಶವನ್ನು ಪ್ರಧಾನಿ ಮೋದಿ ಈ ಸಭೆಯ ಮೂಲಕ ನೀಡಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 07 21T191011.060

ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ

by ಶಾಲಿನಿ ಕೆ. ಡಿ
July 21, 2026 - 7:11 pm
0

Untitled design 2026 07 21T184330.990

ಹನಿಮೂನ್ ಮರ್ಡ*ರ್‌‌‌ ಕೇಸ್: ಆರೋಪಿ ಸೋನಮ್‌ಗೆ ಶರಣಾಗುವಂತೆ ಸುಪ್ರೀಂ ಸಲಹೆ

by ಶಾಲಿನಿ ಕೆ. ಡಿ
July 21, 2026 - 6:48 pm
0

Untitled design 2026 07 21T180844.972

ಸಿಟ್ರನ್‌ನಿಂದ ‘ಬಸಾಲ್ಟ್ ಎಕ್ಸ್ ಕಂಫರ್ಟ್ ಎಡಿಷನ್’ ಕಾರು ಬಿಡುಗಡೆ: ಕೇವಲ ₹8.75 ಲಕ್ಷಕ್ಕೆ ಪ್ರೀಮಿಯಂ ಫೀಚರ್ಸ್!

by ಶಾಲಿನಿ ಕೆ. ಡಿ
July 21, 2026 - 6:09 pm
0

Untitled design 2026 07 21T174631.947

ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ

by ಶಾಲಿನಿ ಕೆ. ಡಿ
July 21, 2026 - 5:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T184330.990
    ಹನಿಮೂನ್ ಮರ್ಡ*ರ್‌‌‌ ಕೇಸ್: ಆರೋಪಿ ಸೋನಮ್‌ಗೆ ಶರಣಾಗುವಂತೆ ಸುಪ್ರೀಂ ಸಲಹೆ
    July 21, 2026 | 0
  • Untitled design 2026 07 21T170501.940
    ಪ್ರಧಾನಿ ಮೋದಿ ನಿವಾಸದ ಎದುರು ರಾಹುಲ್ ಗಾಂಧಿ-ಪ್ರಿಯಾಂಕಾ ಧರಣಿ
    July 21, 2026 | 0
  • ಸ್ವ (18)
    ದೆಹಲಿ ಪ್ರತಿಭಟನೆ ಚರ್ಚೆಗೆ ವಿಪಕ್ಷಗಳ ಆಗ್ರಹ: ಸ್ಪೀಕರ್‌‌ ಭೇಟಿಯಾಗಿ ಮನವಿ ಸಲ್ಲಿಸಿದ ವಿಪಕ್ಷ ನಾಯಕರು
    July 21, 2026 | 0
  • ಸ್ವ (13)
    ದೆಹಲಿಯಲ್ಲಿ ಮುಂದುವರೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ: ಬಿಗಿ ಪೊಲೀಸ್ ಬಂದೋಬಸ್ತ್
    July 21, 2026 | 0
  • ಸ್ವ (10)
    ಸಿಕ್ಕಿಂನಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ: ಏಳು ಮಂದಿ ಸಾವು, ಹಲವರು ಸಿಲುಕಿರುವ ಶಂಕೆ
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version