• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹರಿಯಾಣದಲ್ಲೂ 25 ಲಕ್ಷ ಮತಗಳ್ಳತನ ಆಗಿದೆ: ರಾಹುಲ್‌ ಗಾಂಧಿ ಹೊಸ ಬಾಂಬ್‌‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 5, 2025 - 2:24 pm
in Flash News, ದೇಶ
0 0
0
Untitled design 2025 11 05t141436.167

ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು 2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಹುಲ್ ಈ ಆರೋಪಗಳನ್ನು ದಾಖಲೆಗಳೊಂದಿಗೆ ಮಂಡಿಸಿದರು.

ಹರಿಯಾಣ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ರಾಹುಲ್ ಹೇಳಿದರು. ಬಿಜೆಪಿ ಗೆದ್ದಿರುವುದು ನಕಲಿ ಮತಗಳಿಂದಲೇ ಸಾಧ್ಯವಾಗಿದೆ ಎಂಬುದು ಖಚಿತವಾಗಿದೆ. ಮಹಾದೇವಪುರ ಮತ್ತು ಆಳಂದ್‌ನಂತಹ ಘಟನೆಗಳ ನಂತರ ಇದು ಕೆಲವು ಕ್ಷೇತ್ರಗಳಿಗೆ ಮಾತ್ರ ಸೀಮಿತವಲ್ಲ. ಇದು ಇಡೀ ರಾಜ್ಯ ಮತ್ತು ದೇಶವನ್ನೇ ಆವರಿಸಿಕೊಂಡಿದೆ. ಹರಿಯಾಣದ ಜೊತೆಗೆ ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದಲ್ಲೂ ಇದೇ ರೀತಿಯ ದೂರುಗಳು ಬಂದಿವೆ. ಆದರೆ ಈಗ ನಾವು ಹರಿಯಾಣವನ್ನೇ ಕೇಂದ್ರೀಕರಿಸಿ ಪ್ರಕರಣವನ್ನು ಪರಿಶೀಲಿಸುತ್ತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.

RelatedPosts

ಬಾಗಲಕೋಟೆಯಲ್ಲಿ ರೈತರ ಉಗ್ರ ಪ್ರತಿಭಟನೆ: ಎಸ್‌ಪಿಗೆ ಗಂಭೀರ ಗಾಯ, ನಿಷೇಧಾಜ್ಞೆ ಜಾರಿ

ಪತ್ನಿಗೆ ಬೀದಿ ನಾಯಿ ಮೇಲೆ ಅತಿಯಾದ ಪ್ರೀತಿ: ವಿಚ್ಛೇದನ ಕೋರಿದ ಪತಿ..!

ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಐವರು ಸಾವು

ಮುಧೋಳದಲ್ಲಿ ವಿಕೋಪಕ್ಕೆ ತಿರುಗಿದ ಕಬ್ಬು ಬೆಳೆಗಾರರ ಹೋರಾಟ: 100ಕ್ಕೂ ಹೆಚ್ಚು ಟ್ರಾಕ್ಟರ್‌ಗಳಿಗೆ ಬೆಂಕಿ

ADVERTISEMENT
ADVERTISEMENT

ಚುನಾವಣೆಗೂ ಮುನ್ನ ನಡೆದ ಎಲ್ಲಾ ಸಮೀಕ್ಷೆಯಲ್ಲಿ ಕಾಂಗ್ರೆಸ್ 52ರಿಂದ 62 ಸ್ಥಾನಗಳವರೆಗೆ ಗೆಲ್ಲಲಿದೆ ಎಂದು ನಿರೀಕ್ಷಿಸಲಾಗಿತ್ತು. ಪೂರ್ವ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಸ್ವೀಪ್ ಮಾಡಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಫಲಿತಾಂಶಗಳು ಸಂಪೂರ್ಣ ವಿರುದ್ಧವಾಗಿ ಬಂದವು. ಆದರೆ ಬಿಜೆಪಿ ಬಹುಮತ ಪಡೆದು ಸರ್ಕಾರ ರಚಿಸಿತು. ಇದರ ಹಿಂದೆ ಏನಿದೆ ಎಂಬ ಪ್ರಶ್ನೆಗೆ ರಾಹುಲ್ ಉತ್ತರ ನೀಡಿದರು. ಹರಿಯಾಣದಲ್ಲಿ ಮೊದಲ ಬಾರಿಗೆ ಅಂಚೆ ಮತಗಳು ಮತ್ತು ಸಾಮಾನ್ಯ ಮತಗಳ ನಡುವೆ ದೊಡ್ಡ ವ್ಯತ್ಯಾಸ ಕಂಡುಬಂದಿದೆ ಎಂದರು.

ಕಾಂಗ್ರೆಸ್ ಕೇವಲ 22,779 ಮತಗಳ ಅಂತರದಿಂದ ಸೋತಿದೆ ಎಂದು ಹೇಳಲಾಗುತ್ತಿದೆ. ಆದರೆ ಒಟ್ಟಾರೆಯಾಗಿ 1.18 ಲಕ್ಷ ಮತಗಳ ವ್ಯತ್ಯಾಸ ಇದೆ. ಇದಕ್ಕಿಂತ ಹೆಚ್ಚಾಗಿ, ಹರಿಯಾಣದಲ್ಲಿ 25 ಲಕ್ಷ ಮತಗಳ ಕಳ್ಳತನ ನಡೆದಿದೆ ಎಂಬುದು ದಾಖಲೆಗಳಿಂದ ಸಾಬೀತಾಗಿದೆ. ಶೇಕಡಾ 12.5ರಷ್ಟು ನಕಲಿ ಮತಗಳು ಚುನಾವಣೆಯಲ್ಲಿ ಬಳಕೆಯಾಗಿವೆ. ಇದಲ್ಲದೆ, 93,000ಕ್ಕೂ ಹೆಚ್ಚು ವಿಳಾಸಗಳು ಅಮಾನ್ಯವಾದವುಗಳು ಎಂದು ರಾಹುಲ್ ದಾಖಲೆಗಳನ್ನು ತೋರಿಸಿ ವಿವರಿಸಿದರು.

ಹರಿಯಾಣದಲ್ಲಿ ಬ್ರೆಜಿಲ್ ಮಾಡೆಲ್‌ 22 ಬಾರಿ ಮತ ಚಲಾಯಿಸಿದ್ದಾರೆ: ರಾಹುಲ್‌ ಗಾಂಧಿ

ನವದೆಹಲಿ (ನ.5): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹರಿಯಾಣ ಚುನಾವಣೆಯ ಮತದಾರರ ಪಟ್ಟಿಯಲ್ಲಿ “ಮತಗಳ್ಳತನ” ನಡೆದಿವೆ ಎಂದು ಆರೋಪಿಸಿದ್ದಾರೆ. ಬುಧವಾರ ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, “ಒಬ್ಬ ಬ್ರೆಜಿಲ್ ಮೂಲದ ಮಾಡೆಲ್ ಹರಿಯಾಣದ 10 ಮತಗಟ್ಟೆಗಳಲ್ಲಿ 22 ಬಾರಿ ಮತದಾರರಾಗಿ ನೋಂದಾಯಿಸಿಕೊಂಡಿದ್ದಾಳೆ” ಎಂದು ಆರೋಪ ಮಾಡಿದರು.

“ಈ ಮಹಿಳೆ ಯಾರು? ಆಕೆಯ ಹೆಸರೇನು? ಆಕೆ ಬ್ರೆಜಿಲ್‌ನವಳು, ಆದರೆ ಹರಿಯಾಣದಲ್ಲಿ ಸೀಮಾ, ಸ್ವೀಟಿ, ಸರಸ್ವತಿ, ರಶ್ಮಿ, ವಿಲ್ಮಾ ಎಂಬ ಹಲವು ಹೆಸರಿನಲ್ಲಿ ಮತದಾರಳಾಗಿ ದಾಖಲಾಗಿದ್ದಾಳೆ. ಒಂದೇ ವ್ಯಕ್ತಿ 10 ಬೂತ್‌ಗಳಲ್ಲಿ 22 ಬಾರಿ ನೋಂದಾಯಿಸಿಕೊಂಡಿರುವುದು ಹೇಗೆ ಸಾಧ್ಯ?” ಎಂದು ರಾಹುಲ್ ಪ್ರಶ್ನಿಸಿದರು.

“ನಕಲಿ ಮತಗಳು ಮತ್ತು ಅಂಚೆ ಮತಪತ್ರಗಳ ದುರ್ಬಳಕೆ ಮೂಲಕ ಬಿಜೆಪಿ ತನ್ನ ಗೆಲುವು ಖಚಿತಪಡಿಸಿಕೊಂಡಿದೆ. ಇದು ಭಾರತದ ಚುನಾವಣಾ ವ್ಯವಸ್ಥೆಯ ನಂಬಿಕೆಯನ್ನು ಹಾಳು ಮಾಡುವಂತಹ ಮಹಾ ಪಿತೂರಿ,” ಎಂದು ಗಾಂಧಿ ಹೇಳಿದರು.

25 ಲಕ್ಷ ಮತಗಳ ಕಳ್ಳತನದ ಆರೋಪ

ರಾಹುಲ್ ಗಾಂಧಿಯವರ ಪ್ರಕಾರ, ಹರಿಯಾಣದಲ್ಲಿ ನಡೆದ 2024ರ ಚುನಾವಣೆಯಲ್ಲಿ ಸುಮಾರು 25 ಲಕ್ಷ ಮತಗಳು ಕಳುವಾಗಿವೆ.
ಅಂಕಿ-ಅಂಶಗಳ ಪ್ರಕಾರ

  • 5.21 ಲಕ್ಷ ನಕಲಿ ಮತದಾರರು

  • 93,174 ಅಮಾನ್ಯ ಮತದಾರರು

  • 19.26 ಲಕ್ಷ ಬಲ್ಕ್ ವೋಟರ್ಸ್ (ಒಟ್ಟಾಗಿ ಮತ ಹಾಕಿದವರು)

“ಹರಿಯಾಣದ ಮತದಾರರ ಪಟ್ಟಿಯಲ್ಲಿ ಎಂಟು ಜನರಲ್ಲಿ ಒಬ್ಬರು ನಕಲಿ ಮತದಾರರಾಗಿದ್ದಾರೆ. ಈ ಅಂಕಿ-ಅಂಶಗಳು ಕೇವಲ ಒಂದು ಜಿಲ್ಲೆ ಅಥವಾ ಕ್ಷೇತ್ರದ ವಿಷಯವಲ್ಲ, ಇಡೀ ರಾಜ್ಯದ ಮಟ್ಟದಲ್ಲಿ ನಡೆಯುತ್ತಿರುವ ರಾಜಕೀಯ ಯಂತ್ರದ ಭಾಗವಾಗಿದೆ” ಎಂದು ರಾಹುಲ್ ಆರೋಪಿಸಿದರು.

ಅವರು, ಈ ವಿಷಯಕ್ಕೆ “ಎಚ್ ಫೈಲ್ಸ್ (H-Files)” ಎಂಬ ಹೆಸರನ್ನು ನೀಡಿದ್ದು, “ಈ ಫೈಲ್‌ನಲ್ಲಿ ಮತದಾರರ ಪಟ್ಟಿಯ ಹಗರಣದ ಸಂಪೂರ್ಣ ಪುರಾವೆಗಳಿವೆ. ಇದು ಕೇವಲ ಹರಿಯಾಣದಲ್ಲಲ್ಲ, ರಾಷ್ಟ್ರಮಟ್ಟದಲ್ಲಿಯೂ ನಡೆಯುತ್ತಿವೆ ಎಂದರು.

“ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲುವನ್ನು ಸೋಲಾಗಿ ಪರಿವರ್ತಿಸಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಿತೂರಿ ನಡೆಸುತ್ತಿವೆ,” ಎಂದು ರಾಹುಲ್ ಗಾಂಧಿ ಆರೋಪಿಸಿದರು. “ಈ ಹಗರಣ ಭಾರತದ ಯುವಜನತೆ, ವಿಶೇಷವಾಗಿ ಜೆನ್‌ಜೀ ಪೀಳಿಗೆ, ಗಂಭೀರವಾಗಿ ಅರ್ಥಮಾಡಿಕೊಳ್ಳಬೇಕಾದ ವಿಷಯ. ಇದು ನಿಮ್ಮ ಪ್ರಜಾಪ್ರಭುತ್ವದ ಭವಿಷ್ಯಕ್ಕೆ ನೇರವಾಗಿ ಸಂಬಂಧಪಟ್ಟಿದೆ,” ಎಂದು ಅವರು ಎಚ್ಚರಿಸಿದರು.

“ನಾನು ಚುನಾವಣಾ ಆಯೋಗವನ್ನು ನೇರವಾಗಿ ಪ್ರಶ್ನಿಸುತ್ತಿದ್ದೇನೆ. ನಾವು 100% ಪುರಾವೆಗಳೊಂದಿಗೆ ಮಾತನಾಡುತ್ತಿದ್ದೇವೆ. ಕಾಂಗ್ರೆಸ್ ಪಕ್ಷದ ಗೆಲುವನ್ನು ಸೋಲಾಗಿ ತಿರುಗಿಸಲು ಯೋಜಿತ ಕೃತ್ಯ ನಡೆದಿದೆ,” ಎಂದು ಸ್ಪಷ್ಟವಾಗಿ ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 11 13T231322.086

BBK 12: ಈ ವಾರ ಕಾಕ್ರೋಚ್ ಸುಧಿ ಬಿಗ್‌ಬಾಸ್‌ ಮನೆಯಿಂದ ಹೊರ ಹೋಗ್ತಾರಾ..?

by ಶಾಲಿನಿ ಕೆ. ಡಿ
November 13, 2025 - 11:22 pm
0

Untitled design 2025 11 13T230314.700

ಬಾಗಲಕೋಟೆಯಲ್ಲಿ ರೈತರ ಉಗ್ರ ಪ್ರತಿಭಟನೆ: ಎಸ್‌ಪಿಗೆ ಗಂಭೀರ ಗಾಯ, ನಿಷೇಧಾಜ್ಞೆ ಜಾರಿ

by ಶಾಲಿನಿ ಕೆ. ಡಿ
November 13, 2025 - 11:10 pm
0

Untitled design 2025 11 13T224632.056

ಪತ್ನಿಗೆ ಬೀದಿ ನಾಯಿ ಮೇಲೆ ಅತಿಯಾದ ಪ್ರೀತಿ: ವಿಚ್ಛೇದನ ಕೋರಿದ ಪತಿ..!

by ಶಾಲಿನಿ ಕೆ. ಡಿ
November 13, 2025 - 10:57 pm
0

Untitled design 2025 11 13T212513.061

ಐಪಿಎಲ್ : ಲಕ್ನೋ ತೊರೆದು ಮುಂಬೈ ಇಂಡಿಯನ್ಸ್‌ಗೆ ಶಾರ್ದುಲ್ ಠಾಕೂರ್ ಸೇರ್ಪಡೆ

by ಶಾಲಿನಿ ಕೆ. ಡಿ
November 13, 2025 - 10:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 13T230314.700
    ಬಾಗಲಕೋಟೆಯಲ್ಲಿ ರೈತರ ಉಗ್ರ ಪ್ರತಿಭಟನೆ: ಎಸ್‌ಪಿಗೆ ಗಂಭೀರ ಗಾಯ, ನಿಷೇಧಾಜ್ಞೆ ಜಾರಿ
    November 13, 2025 | 0
  • Untitled design 2025 11 13T210406.431
    ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಐವರು ಸಾವು
    November 13, 2025 | 0
  • Untitled design 2025 11 13T192837.954
    ಮುಧೋಳದಲ್ಲಿ ವಿಕೋಪಕ್ಕೆ ತಿರುಗಿದ ಕಬ್ಬು ಬೆಳೆಗಾರರ ಹೋರಾಟ: 100ಕ್ಕೂ ಹೆಚ್ಚು ಟ್ರಾಕ್ಟರ್‌ಗಳಿಗೆ ಬೆಂಕಿ
    November 13, 2025 | 0
  • Untitled design 2025 11 13T181307.116
    ಮುಧೋಳದಲ್ಲಿ ಕಬ್ಬು ಬೆಳೆಗಾರರ ಹೋರಾಟ: ಕಬ್ಬು ತುಂಬಿದ್ದ ಟ್ರ್ಯಾಕ್ಟ‌ರ್‌ಗೆ ಬೆಂಕಿ ಹಚ್ಚಿದ ರೈತರು
    November 13, 2025 | 0
  • Untitled design 2025 11 13T170137.329
    ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್
    November 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version