• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಿಮಗೆ ನಾಚಿಕೆ ಆಗಲ್ವಾ? ಲೋಕಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ರಣಾರ್ಭಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 11, 2026 - 2:05 pm
in Flash News, ದೇಶ
0 0
0
Untitled design 2026 02 11T140429.140

RelatedPosts

ಟಿ20 ವಿಶ್ವಕಪ್: ಎರಡನೇ ಸೂಪರ್ ಓವರ್‌ನಲ್ಲಿ ದಕ್ಷಿಣ ಆಫ್ರಿಕಾಗೆ ರೋಚಕ ಗೆಲುವು

ಬಾಯಲ್ಲೇ ಫೋನ್ ಬ್ಯಾಟರಿ ಸ್ಫೋಟ: ಬಾಲಕನಿಗೆ ಗಂಭೀರ ಗಾಯ..ವಿಡಿಯೋ ವೈರಲ್

ಮಾಜಿ ಪ್ರೇಯಸಿ ಜೊತೆ ವಿಜಯ್..ಮದುವೆ ವೇಳೆ ಫಜೀತಿ

ಸೊಮಾಲಿಯಾ: ರನ್‌ವೇಯಿಂದ ಜಾರಿ ಬೀಚ್‌ಗೆ ಬಿದ್ದ ವಿಮಾನ, 55 ಜನರಿದ್ದರೂ ಯಾರಿಗೂ ಗಾಯವಿಲ್ಲ!

ADVERTISEMENT
ADVERTISEMENT

ನವದೆಹಲಿ: ಕೇಂದ್ರ ಬಜೆಟ್ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇಂಧನ ಭದ್ರತೆ ಹಾಗೂ ಆರ್ಥಿಕ ಸ್ವಾವಲಂಬನೆ ಕುರಿತ ಮಾಹಿತಿ ಬಜೆಟ್‌ನಲ್ಲಿ ಕಾಣಿಸಿಲ್ಲ ಎಂದು ಆರೋಪಿಸಿದ್ದಾರೆ. ಜಾಗತಿಕ ರಾಜಕೀಯ ಮತ್ತು ಆರ್ಥಿಕ ಸನ್ನಿವೇಶಕ್ಕೆ ಪೂರಕವಾಗುವಂತೆ ಬಜೆಟ್ ಮಂಡನೆಯಾಗಿಲ್ಲ ಎಂಬುದಾಗಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಅಮೆರಿಕದೊಂದಿಗೆ ಕೇಂದ್ರ ಸರ್ಕಾರ ಮಾಡಿಕೊಂಡಿರುವ ಒಪ್ಪಂದಗಳು ದೇಶದ ಹಿತಾಸಕ್ತಿಗೆ ಧಕ್ಕೆ ತರುತ್ತಿವೆ. “ಅಮೆರಿಕ ಸೂಪರ್ ಪವರ್ ಆಗಿ ಉಳಿಯಲು ಭಾರತದ 1.4 ಬಿಲಿಯನ್ ಜನರ ಡೇಟಾವನ್ನು ಬಳಸುತ್ತಿದೆ. ಚೀನಾ ಬಳಿ ಕೂಡ ಇದೇ ಪ್ರಮಾಣದ ಡೇಟಾ ಶಕ್ತಿ ಇದೆ. ಚೀನಾವನ್ನು ಎದುರಿಸಲು ಅಮೆರಿಕಕ್ಕೆ ಭಾರತದ ಡೇಟಾ ಅಗತ್ಯವಿದೆ. ಆದರೆ ನಮ್ಮ ಜನರ ಮಾಹಿತಿಯನ್ನು ರಕ್ಷಿಸುವ ವ್ಯವಸ್ಥೆ ಇಲ್ಲ,” ಎಂದು ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾರತದ ಜನಸಂಖ್ಯೆಯೇ ನಮ್ಮ ದೊಡ್ಡ ಶಕ್ತಿ. ಈ ಡೇಟಾ ಶಕ್ತಿಯನ್ನು ರಕ್ಷಿಸುವ ಕೆಲಸ ಸರ್ಕಾರದ ಮೊದಲ ಆದ್ಯತೆ ಆಗಬೇಕು ಎಂದು ಒತ್ತಾಯಿಸಿದರು. “ಭಾರತ ಅಮೆರಿಕಕ್ಕೆ ಉಚಿತವಾಗಿ ಡೇಟಾ ಒದಗಿಸುತ್ತಿದೆಯೇ?” ಎಂಬ ಪ್ರಶ್ನೆಯನ್ನೂ ಅವರು ಎತ್ತಿದರು.

ಟ್ಯಾರಿಫ್ ವಿವಾದ: 3%ರಿಂದ 18%ಕ್ಕೆ ಏರಿಕೆ?

ವಾಣಿಜ್ಯ ಸಂಬಂಧಗಳ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ಅಮೆರಿಕದ ಟ್ಯಾರಿಫ್ ನೀತಿಯಲ್ಲಿ ಭಾರತಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. “ಮೊದಲು 3% ಇದ್ದ ಟ್ಯಾರಿಫ್ ಈಗ 18% ಆಗಿದೆ. ಆದರೆ ಬಾಂಗ್ಲಾದೇಶಕ್ಕೆ 0% ಟ್ಯಾರಿಫ್ ನೀಡಲಾಗಿದೆ. ಭಾರತಕ್ಕೆ ಮಾತ್ರ ಹೆಚ್ಚುವರಿ ಭಾರ ಏಕೆ?” ಎಂದು ಅವರು ಪ್ರಶ್ನಿಸಿದರು.

ಅಮೆರಿಕದ ಕೃಷಿ ಸರಕುಗಳಿಗೆ ಭಾರತ ಬಾಗಿಲು ತೆರೆದಿರುವುದು ರೈತರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. “ಇದುವರೆಗೆ ಯಾವ ಸರ್ಕಾರವೂ ರೈತರ ಹಿತವನ್ನು ಈ ರೀತಿ ಬಲಿ ಕೊಡಲಿಲ್ಲ. ಅಮೆರಿಕ ಸರಕುಗಳಿಂದ ನಮ್ಮ ರೈತರನ್ನು ರಕ್ಷಿಸಬೇಕಿದೆ,” ಎಂದು ಅವರು ಅಭಿಪ್ರಾಯಪಟ್ಟರು.

ಇಂಧನ ಖರೀದಿ ಮತ್ತು ವಿದೇಶಾಂಗ ನೀತಿ

ಇಂಧನ ಖರೀದಿಯ ವಿಚಾರದಲ್ಲೂ ಕೇಂದ್ರ ಸರ್ಕಾರವನ್ನು ಟೀಕಿಸಿದ ರಾಹುಲ್‌ ಗಾಂಧಿ, “ನಾವು ಯಾರಿಂದ ತೈಲ ಖರೀದಿಸಬೇಕೆಂದು ಅಮೆರಿಕ ಆಜ್ಞೆ ಮಾಡುತ್ತಿದೆ. ಇದು ಸ್ವತಂತ್ರ ದೇಶದ ನೀತಿಯೇ?” ಎಂದು ಪ್ರಶ್ನಿಸಿದರು. ಭಾರತದ ವಿದೇಶಾಂಗ ನೀತಿ ಸ್ವಾಯತ್ತತೆಯನ್ನು ಕಾಪಾಡಬೇಕಾದರೆ ಇಂತಹ ಒತ್ತಡಗಳಿಗೆ ತಲೆಬಾಗಬಾರದು ಎಂದು ಹೇಳಿದರು.

ಪಾಕಿಸ್ತಾನ ಮತ್ತು ಜಾಗತಿಕ ರಾಜಕೀಯ

“ಭಾರತ ಪಾಕಿಸ್ತಾನಕ್ಕೆ ಸಮವಲ್ಲ, ಪಾಕಿಸ್ತಾನಕ್ಕಿಂತ ಎತ್ತರದಲ್ಲಿದೆ. ಆದರೆ ಪಾಕಿಸ್ತಾನದ ಸೇನಾ ಮುಖ್ಯಸ್ಥನ ಜೊತೆ ಅಮೆರಿಕ ಅಧ್ಯಕ್ಷ ಔತಣ ಕೂಟ ನಡೆಸುತ್ತಾರೆ. ಇದು ಭಾರತದ ಗೌರವಕ್ಕೆ ಧಕ್ಕೆ ತರುವ ವಿಷಯ,” ಎಂದು ರಾಹುಲ್ ಗಾಂಧಿ ತಿಳಿಸಿದರು.

ಪ್ರಧಾನಿ ವಿರುದ್ಧ ತೀವ್ರ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರ ದಾಳಿ ನಡೆಸಿದ ರಾಹುಲ್ ಗಾಂಧಿ, “ದೇಶ ಮಾರಿರೋದಕ್ಕೆ ನಾಚಿಕೆ ಆಗೋದಿಲ್ಲವೇ? ಭಾರತ ಮಾತೆಯನ್ನು ಮಾರಿದ್ದಕ್ಕೆ ಪ್ರಧಾನಿ ನಾಚಿಕೆ ಪಡಬೇಕಲ್ಲವೇ?” ಎಂದು ಕಿಡಿಕಾರಿದರು. “ಅಮೆರಿಕ, ಪ್ರಧಾನಿ ಮೋದಿ ಅವರ ಕುತ್ತಿಗೆ ಹಿಡಿದು ಕೆಲಸ ಮಾಡಿಸುತ್ತಿದೆ,” ಎಂಬ ಗಂಭೀರ ಆರೋಪವನ್ನೂ ಮಾಡಿದರು.

ಎಪ್‌ಸ್ಟೀನ್ ಫೈಲ್ಸ್ ವಿಚಾರವನ್ನೂ ಪ್ರಸ್ತಾಪಿಸಿದ ಅವರು, ಜಾಗತಿಕ ರಾಜಕೀಯ ಒತ್ತಡಗಳ ನಡುವೆ ಭಾರತ ತನ್ನ ಸ್ವಾಭಿಮಾನ ಮತ್ತು ಡೇಟಾ ಭದ್ರತೆಯನ್ನು ಕಾಪಾಡಿಕೊಳ್ಳಬೇಕಿದೆ ಎಂದು ಒತ್ತಾಯಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 11T153832.458

ಟಿ20 ವಿಶ್ವಕಪ್: ಎರಡನೇ ಸೂಪರ್ ಓವರ್‌ನಲ್ಲಿ ದಕ್ಷಿಣ ಆಫ್ರಿಕಾಗೆ ರೋಚಕ ಗೆಲುವು

by ಯಶಸ್ವಿನಿ ಎಂ
February 11, 2026 - 3:40 pm
0

BeFunky collage 2026 02 11T150714.307

ಶಾಸಕ ಭೈರತಿ ಬಸವರಾಜ್‌ಗೆ ದೊಡ್ಡ ಶಾಕ್: ಲುಕ್‌ಔಟ್ ನೋಟಿಸ್ ಜಾರಿ

by ಶ್ರೀದೇವಿ ಬಿ. ವೈ
February 11, 2026 - 3:08 pm
0

BeFunky collage 2026 02 11T143204.761

ಹಯಗ್ರೀವ ಅಡ್ಡಾದಿಂದ ಸೆಕೆಂಡ್ ಸಾಂಗ್ ರಿವೀಲ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 11, 2026 - 2:35 pm
0

Untitled design 2026 02 11T142321.779

ಬಾಯಲ್ಲೇ ಫೋನ್ ಬ್ಯಾಟರಿ ಸ್ಫೋಟ: ಬಾಲಕನಿಗೆ ಗಂಭೀರ ಗಾಯ..ವಿಡಿಯೋ ವೈರಲ್

by ಶಾಲಿನಿ ಕೆ. ಡಿ
February 11, 2026 - 2:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 11T153832.458
    ಟಿ20 ವಿಶ್ವಕಪ್: ಎರಡನೇ ಸೂಪರ್ ಓವರ್‌ನಲ್ಲಿ ದಕ್ಷಿಣ ಆಫ್ರಿಕಾಗೆ ರೋಚಕ ಗೆಲುವು
    February 11, 2026 | 0
  • Untitled design 2026 02 11T142321.779
    ಬಾಯಲ್ಲೇ ಫೋನ್ ಬ್ಯಾಟರಿ ಸ್ಫೋಟ: ಬಾಲಕನಿಗೆ ಗಂಭೀರ ಗಾಯ..ವಿಡಿಯೋ ವೈರಲ್
    February 11, 2026 | 0
  • BeFunky collage 2026 02 11T142155.614
    ಮಾಜಿ ಪ್ರೇಯಸಿ ಜೊತೆ ವಿಜಯ್..ಮದುವೆ ವೇಳೆ ಫಜೀತಿ
    February 11, 2026 | 0
  • BeFunky collage 2026 02 11T123332.482
    ಸರಿಗಮಪ Little Champs Audition: ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್, ಎಲ್ಲಿ? ಯಾವಾಗ?
    February 11, 2026 | 0
  • Untitled design 2026 02 11T124458.270
    ಮೂವರು ಮಕ್ಕಳನ್ನು ಕೊಂದು ಆತ್ಮಹ*ತ್ಯೆ ಮಾಡಿಕೊಂಡ ದಂಪತಿ
    February 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version