• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 20, 2026 - 3:45 pm
in ದೇಶ
0 0
0
Untitled design 2026 08 20T154201.596

1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ (80) ಗುರುವಾರ ನಿಧನರಾಗಿದ್ದಾರೆ. ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಅವರನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

1984ರ ಅಕ್ಟೋಬರ್ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ ಬಳಿಕ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಸಿಖ್ ಸಮುದಾಯದ ವಿರುದ್ಧ ಭೀಕರ ಹಿಂಸಾಚಾರ ಭುಗಿಲೆದ್ದಿತ್ತು. ದೆಹಲಿಯೊಂದರಲ್ಲೇ ಸುಮಾರು 3,000ಕ್ಕೂ ಹೆಚ್ಚು ಮಂದಿ ಈ ದಂಗೆಯಲ್ಲಿ ಮೃತಪಟ್ಟಿದ್ದರು. ಹಿಂಸಾಚಾರದ ಸಂದರ್ಭದಲ್ಲಿ ಹಲವು ಪ್ರದೇಶಗಳಲ್ಲಿ ಕೊಲೆ, ಲೂಟಿ, ಬೆಂಕಿ ಹಚ್ಚುವಿಕೆ ಮತ್ತು ಆಸ್ತಿಪಾಸ್ತಿಗಳ ನಾಶದಂತಹ ಘಟನೆಗಳು ನಡೆದಿದ್ದವು.

RelatedPosts

ವಂದೇ ಮಾತರಂನ 2 ಚರಣ ಹಾಡುವ ಕಾಂಗ್ರೆಸ್​ನ ನಿರ್ಧಾರ ಕಾನೂನಿಗೆ ವಿರುದ್ಧ: ಕೇಂದ್ರ ಗೃಹ ಸಚಿವ ಅಮಿತ್​ ಶಾ

ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕಿಚ್ಚು; ಕೇಂದ್ರದ 7ನೇ ಕರಡು ಅಧಿಸೂಚನೆಗೆ ವಿರೋಧ

5 ಸಾವಿರ ಕಿ.ಮೀ ರಸ್ತೆ ನಿರ್ಮಾಣಕ್ಕೆ ಮುಂದಾದ ಭಾರತ: ಚೀನಾ-ಪಾಕ್‌‌ಗೆ ಶುರುವಾಯ್ತು ನಡುಕ

ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!

ADVERTISEMENT
ADVERTISEMENT

ದೆಹಲಿ ಪೊಲೀಸರ ತನಿಖೆಯ ಪ್ರಕಾರ, ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಪ್ರಮುಖರಲ್ಲಿ ಸಜ್ಜನ್ ಕುಮಾರ್ ಕೂಡ ಒಬ್ಬರಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಆದರೆ ದಂಗೆಯ ನಂತರದ ಆರಂಭಿಕ ಹಲವು ವರ್ಷಗಳಲ್ಲಿ ನಡೆದ ತನಿಖೆ ಹಾಗೂ ವಿಚಾರಣೆಗಳಲ್ಲಿ ಅವರ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳಲಾಗಿರಲಿಲ್ಲ. ಜಸ್ಟಿಸ್ ರಂಗನಾಥ್ ಮಿಶ್ರಾ ಆಯೋಗ ಸೇರಿದಂತೆ ಹಲವು ತನಿಖಾ ಸಮಿತಿಗಳ ವರದಿಗಳಲ್ಲೂ ಅವರ ಹೆಸರು ನೇರವಾಗಿ ಪ್ರಮುಖವಾಗಿ ಪ್ರಸ್ತಾಪವಾಗಿರಲಿಲ್ಲ.

2015ರಲ್ಲಿ ಕೇಂದ್ರ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿ, ಹಿಂದೆ ಮುಚ್ಚಲಾಗಿದ್ದ ಪ್ರಕರಣಗಳನ್ನು ಮರುಪರಿಶೀಲಿಸಲು ಮುಂದಾದ ಬಳಿಕ ಸಜ್ಜನ್ ಕುಮಾರ್ ವಿರುದ್ಧದ ಪ್ರಕರಣಗಳು ಮತ್ತೊಮ್ಮೆ ಚುರುಕುಗೊಂಡವು. ಪಾಲಂ ಕಾಲೋನಿ ಪ್ರದೇಶದಲ್ಲಿ ಐವರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ 2018ರಲ್ಲಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತು. ಬಳಿಕ ಸರಸ್ವತಿ ವಿಹಾರ್‌ನಲ್ಲಿ ಇಬ್ಬರು ಸಿಖ್ ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲೂ 2025ರಲ್ಲಿ ದೆಹಲಿ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಆದರೆ ಜನಕಪುರಿ ಮತ್ತು ವಿಕಾಸಪುರಿ ಪ್ರದೇಶಗಳಲ್ಲಿನ ಹಿಂಸಾಚಾರ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಈ ವರ್ಷದ ಆರಂಭದಲ್ಲಿ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು.

ದೆಹಲಿ ರಾಜಕಾರಣದಲ್ಲಿ ಪ್ರಭಾವಿ ಜಾಟ್ ನಾಯಕರಾಗಿ ಗುರುತಿಸಿಕೊಂಡಿದ್ದ ಸಜ್ಜನ್ ಕುಮಾರ್ 1977ರಲ್ಲಿ ಕೌನ್ಸಿಲರ್ ಆಗುವ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು. 1980ರಿಂದ ಮೂರು ಬಾರಿ ಹೊರ ದೆಹಲಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಆದರೆ 1984ರ ದಂಗೆಗೆ ಸಂಬಂಧಿಸಿದ ಆರೋಪಗಳು ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ 2009ರಲ್ಲಿ ಕಾಂಗ್ರೆಸ್ ಪಕ್ಷ ಅವರಿಗೆ ಲೋಕಸಭಾ ಟಿಕೆಟ್ ನೀಡಿರಲಿಲ್ಲ. ನಂತರ ಅವರು ರಾಜಕೀಯವಾಗಿ ಮೂಲೆಗುಂಪಾದರು.

ಇನ್ನು, ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲೂ ಸಜ್ಜನ್ ಕುಮಾರ್ ವಿರುದ್ಧ ಆರೋಪಗಳು ದಾಖಲಾಗಿದ್ದವು. ಜನಸಮೂಹವೊಂದು ಜಸ್ವಂತ್ ಸಿಂಗ್ ಹಾಗೂ ಅವರ ಮಗನ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ್ದಲ್ಲದೆ, ಅವರ ಮನೆಯಲ್ಲಿದ್ದ ವಸ್ತುಗಳನ್ನು ಲೂಟಿ ಮಾಡಿ ಮನೆಗೆ ಬೆಂಕಿ ಹಚ್ಚಿತ್ತು. ಈ ಪ್ರಕರಣವನ್ನು ವಿಶೇಷ ತನಿಖಾ ತಂಡ ತನಿಖೆಗೆ ಕೈಗೆತ್ತಿಕೊಂಡಿತ್ತು.

2021ರ ಡಿಸೆಂಬರ್ 16ರಂದು ಸಜ್ಜನ್ ಕುಮಾರ್ ವಿರುದ್ಧ ಆರೋಪಗಳನ್ನು ಹೊರಿಸಲಾಗಿತ್ತು. ತನಿಖಾ ತಂಡದ ಪ್ರಕಾರ, ಹಿಂಸಾಚಾರ ನಡೆಸಿದ ಗುಂಪಿಗೆ ಅವರು ನೇತೃತ್ವ ವಹಿಸಿದ್ದರು ಎಂಬುದಕ್ಕೆ ಸಾಕಷ್ಟು ಪುರಾವೆಗಳು ದೊರೆತಿದ್ದವು. 1984ರ ದಂಗೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಹಲವು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿದ್ದ ಸಜ್ಜನ್ ಕುಮಾರ್ ಇದೀಗ ನಿಧನರಾಗಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 20T173007.744

ವಂದೇ ಮಾತರಂನ 2 ಚರಣ ಹಾಡುವ ಕಾಂಗ್ರೆಸ್​ನ ನಿರ್ಧಾರ ಕಾನೂನಿಗೆ ವಿರುದ್ಧ: ಕೇಂದ್ರ ಗೃಹ ಸಚಿವ ಅಮಿತ್​ ಶಾ

by ದಿಶಾ ಕೆ. ಎಸ್.
August 20, 2026 - 5:32 pm
0

Untitled design 2026 08 20T172032.378

ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕಿಚ್ಚು; ಕೇಂದ್ರದ 7ನೇ ಕರಡು ಅಧಿಸೂಚನೆಗೆ ವಿರೋಧ

by ದಿಶಾ ಕೆ. ಎಸ್.
August 20, 2026 - 5:22 pm
0

ChatGPT Image Aug 20, 2026, 03 39 11 PM

ರೈಲ್ವೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 4,029 ಹುದ್ದೆಗಳಿಗೆ ನೇಮಕಾತಿ!

by ದಿಶಾ ಕೆ. ಎಸ್.
August 20, 2026 - 5:11 pm
0

Untitled design 2026 08 20T165916.585

ಕರ್ನಾಟಕ ಸೇರಿ ದೇಶಾದ್ಯಂತ ಮುಂಗಾರು ಅಬ್ಬರ: ಹಲವು ರಾಜ್ಯಗಳಿಗೆ ಭಾರಿ ಮಳೆ ಎಚ್ಚರಿಕೆ

by ದಿಶಾ ಕೆ. ಎಸ್.
August 20, 2026 - 5:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 20T173007.744
    ವಂದೇ ಮಾತರಂನ 2 ಚರಣ ಹಾಡುವ ಕಾಂಗ್ರೆಸ್​ನ ನಿರ್ಧಾರ ಕಾನೂನಿಗೆ ವಿರುದ್ಧ: ಕೇಂದ್ರ ಗೃಹ ಸಚಿವ ಅಮಿತ್​ ಶಾ
    August 20, 2026 | 0
  • Untitled design 2026 08 20T172032.378
    ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕಿಚ್ಚು; ಕೇಂದ್ರದ 7ನೇ ಕರಡು ಅಧಿಸೂಚನೆಗೆ ವಿರೋಧ
    August 20, 2026 | 0
  • ಡೀಸೆಲ್ ಬೆಲೆ (8)
    5 ಸಾವಿರ ಕಿ.ಮೀ ರಸ್ತೆ ನಿರ್ಮಾಣಕ್ಕೆ ಮುಂದಾದ ಭಾರತ: ಚೀನಾ-ಪಾಕ್‌‌ಗೆ ಶುರುವಾಯ್ತು ನಡುಕ
    August 20, 2026 | 0
  • ಡೀಸೆಲ್ ಬೆಲೆ (7)
    ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!
    August 20, 2026 | 0
  • Untitled design 2026 08 20T090444.072
    ಪ್ರಧಾನಿ ಮೋದಿ ರಾಜಕೀಯ ಜೀವನ ಅಂತ್ಯ ಕಂಡಿದೆ: ರಾಹುಲ್ ಗಾಂಧಿ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version