ಅಮರಾವತಿ: ಆಂಧ್ರಪ್ರದೇಶದ ವಿಶಾಖಪಟ್ಟಣಂನ ಸಿಂಹಾಚಲಂನಲ್ಲಿರುವ ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದ ಗೋಡೆ ಕುಸಿದು ಎಂಟು ಜನರು ಸಾವನ್ನಪ್ಪಿರುವ ದುರಂತ ಘಟನೆ ನಡೆದಿದೆ.
ಈ ಅವಘಡವು ದೇವಸ್ಥಾನದಲ್ಲಿ ನಡೆಯುತ್ತಿದ್ದ ಚಂದನೋತ್ಸವಂ ಸಮಾರಂಭದ ವೇಳೆ ಸಂಭವಿಸಿದೆ. ಇಂದು ಬೆಳಿಗ್ಗೆ, ವರಾಹ ಲಕ್ಷ್ಮೀ ನರಸಿಂಹಸ್ವಾಮಿಯ ನಿಜರೂಪ ದರ್ಶನಕ್ಕಾಗಿ ಭಕ್ತರು ಸಾಲಿನಲ್ಲಿ ನಿಂತಿದ್ದ ಸಂದರ್ಭದಲ್ಲಿ, ಇತ್ತೀಚೆಗೆ ನಿರ್ಮಿಸಲಾಗಿದ್ದ 20 ಅಡಿ ಉದ್ದದ ಗೋಡೆಯೊಂದು ಕುಸಿದಿದೆ.
ಈ ಘಟನೆಯಲ್ಲಿ ಎಂಟು ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ತಕ್ಷಣವೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿತು. ಅವಶೇಷಗಳಡಿಯಲ್ಲಿ ಸಿಲುಕಿದವರನ್ನು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಕಿಂಗ್ ಜಾರ್ಜ್ ಆಸ್ಪತ್ರೆಗೆ ರವಾನಿಸಲಾಗಿದೆ.
ವರದಿಗಳ ಪ್ರಕಾರ, ಇಂದು ಬೆಳಗ್ಗೆ 2:30 ರಿಂದ 3:30 ರವರೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಭಾರೀ ಗಾಳಿಯಿಂದ ದೇವಸ್ಥಾನದ ಬಳಿಯ ನೀರಿನ ಹರಿವು ಮತ್ತು ಮಣ್ಣಿನ ಹೊದಿಕೆಯಿಂದ ಗೋಡೆ ಸಡಿಲಗೊಂಡಿರಬಹುದು. ಇದರ ಜೊತೆಗೆ, ಗಾಳಿಯಿಂದ ಪೆಂಡಾಲ್ಗಳು ಕುಸಿಯಿತು. ಈ ಗೋಡೆಯನ್ನು ಕೇವಲ 20 ದಿನಗಳ ಹಿಂದೆ ನಿರ್ಮಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.





