• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 17, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

₹ ಚಿಹ್ನೆಗೆ ತಮಿಳುನಾಡು ಟಾಟಾ..!

ತಮ್ಮದೇ ವಿನ್ಯಾಸಕ್ಕೆ ಗುಡ್‌‌ ಬೈ ಹೇಳಿದ ಸ್ಟಾಲಿನ್‌..! ಬಜೆಟ್ ಪ್ರತಿಯಲ್ಲಿ ರೂಪಾಯಿ ಚಿಹ್ನೆಗೆ ಬೈ..!

ಚಂದ್ರಮೋಹನ್ ಕೋಲಾರ by ಚಂದ್ರಮೋಹನ್ ಕೋಲಾರ
March 13, 2025 - 3:56 pm
in Flash News, ದೇಶ
0 0
0
Untitled design (39)

ಕೇಂದ್ರ ಸರ್ಕಾರದ ಜೊತೆಗೆ ಪದೇಪದೆ ಕಿರಿಕ್ ಮಾಡಿಕೊಳ್ಳುವ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಈಗ ಹೊಸ ತಗಾದೆ ತೆಗೆದಿದ್ದಾರೆ. ತಮಿಳುನಾಡಿನಲ್ಲಿ ಶುಕ್ರವಾರ ಬಜೆಟ್ ಮಂಡನೆಯಾಗಲಿದೆ. ಬಜೆಟ್ ಪುಸ್ತಕದಲ್ಲಿ ₹ ಚಿಹ್ನೆ ಬದಲಿಗೆ ತಮಿಳಿನಲ್ಲಿ ‘ರೂ’ ಎಂದು ಮುದ್ರಿಸಲಾಗಿದೆ. ಈ ಹಿಂದಿನ ಬಜೆಟ್‌ ಪುಸ್ತಕಗಳಲ್ಲಿ ₹ ಚಿಹ್ನೆಯನ್ನು ಮುದ್ರಿಸಲಾಗಿತ್ತು. ತ್ರಿಭಾಷಾ ಸೂತ್ರ ಜಾರಿಗೆ, ಲೋಕಸಭೆ ಕ್ಷೇತ್ರಗಳ ಮರುವಿಂಗಡಣೆಗೆ ಸ್ಟಾಲಿನ್ ವಿರೋಧ ವ್ಯಕ್ತಪಡಿಸಿದ್ದರು. ಈಗ ₹ ಚಿಹ್ನೆ ಕೈ ಬಿಡುವ ಮೂಲಕ ಹೊಸ ಕ್ಯಾತೆ ತೆಗೆದಿದ್ದಾರೆ. ವಿಪರ್ಯಾಸ ಎಂದರೆ ಸ್ಟಾಲಿನ್ ಪ್ರತಿನಿಧಿಸುವ ಡಿಎಂಕೆಯ ಮಾಜಿ ಶಾಸಕರ ಮಗ ₹ ಚಿಹ್ನೆಯನ್ನು ವಿನ್ಯಾಸ ಮಾಡಿದ್ದರು.

ತಮಿಳುನಾಡಿನಲ್ಲಿ ಯಾವುದೇ ಕಾರಣಕ್ಕೂ ಹೊಸ ಶಿಕ್ಷಣ ನೀತಿ ಜಾರಿಯಾಗಲು ಬಿಡುವುದಿಲ್ಲ. ಈ ಮೂಲಕ ತಮಿಳುನಾಡಿನಲ್ಲಿ ತ್ರಿಭಾಷಾ ಸೂತ್ರ ಹೇರಿಕೆಗೆ ಆಸ್ಪದ ಮಾಡಿಕೊಡುವುದಿಲ್ಲ ಎಂದು ಹೇಳುವ ಮೂಲಕ ತಮಿಳುನಾಡು ಸಿಎಂ ಮುತ್ತುವೇಲ್ ಕರುಣಾನಿಧಿ ಸ್ಟಾಲಿನ್ ಕೇಂದ್ರದ ವಿರುದ್ಧ ಕ್ಯಾತೆ ತೆಗೆದಿದ್ದರು. ಇದು ಸಾಲದು ಎಂಬ ರೀತಿ ಜನಸಂಖ್ಯೆ ಆಧರಿಸಿ ಲೋಕಸಭೆ ಕ್ಷೇತ್ರಗಳ ಮರು ವಿಂಗಡಣೆಗೆ ವಿರೋಧ ವ್ಯಕ್ತಪಡಿಸಿದ್ದರು. ಮುಂದಿನ 30 ವರ್ಷ ಈಗಿರುವ ರೀತಿಯೇ ಲೋಕಸಭಾ ಕ್ಷೇತ್ರಗಳನ್ನು ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದರು. ಇದಾಗಿ ಕೆಲವೇ ದಿನಗಳಲ್ಲಿ ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದವರು ಹೆಚ್ಚು ಹೆಚ್ಚು ಮಕ್ಕಳನ್ನು ಹೆರಬೇಕು ಎಂಬ ಸಲಹೆ ನೀಡಿ ವಿವಾದಕ್ಕೆ ಕಾರಣವಾಗಿದ್ದರು.
ದಕ್ಷಿಣ ಭಾರತಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ. ತೆರಿಗೆ ಹಂಚಿಕೆ, ಅನುದಾನ ಹಂಚಿಕೆ ಸೇರಿ ಹಲವು ವಿಚಾರಗಳಲ್ಲಿ ತಮಿಳುನಾಡಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ. ತಮ್ಮ ರಾಜ್ಯದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಸ್ಟಾಲಿನ್‌ ಆರೋಪಿಸಿದ್ದರು. ಒಂದು ವೇಳೆ ಕೇಂದ್ರ ಸರ್ಕಾರ ಇದೇ ರೀತಿಯ ಧೋರಣೆ ಮುಂದುವರಿಸಿದರೆ, ದಕ್ಷಿಣ ಭಾರತೀಯರು ಪ್ರತ್ಯೇಕ ದೇಶಕ್ಕಾಗಿ ಹೋರಾಟ ಆರಂಭಿಸುವ ದಿನಗಳು ದೂರವಿಲ್ಲ ಎಂದು ಎಚ್ಚರಿಕೆ ನೀಡಿದ್ದರು. ಇದಕ್ಕೆ ಮಾಜಿ ಸಂಸದ ಡಿ.ಕೆ.ಸುರೇಶ್ ಕೂಡ ದನಿಗೂಡಿಸಿದ್ದರು. ಇಷ್ಟೆಲ್ಲಾ ವಿವಾದಗಳು ತೆರೆಮರೆಗೆ ಸರಿಯುವ ಮುನ್ನವೇ ಮತ್ತೊಂದು ವಿವಾದ ಹುಟ್ಟು ಹಾಕಿದ್ದಾರೆ. ಶುಕ್ರವಾರ ಮಂಡನೆಯಾಗಲಿರುವ ತಮಿಳುನಾಡು ಬಜೆಟ್ ಪ್ರತಿಯಲ್ಲಿ ರೂಪಾಯಿ ಚಿಹ್ನೆಯ ಬದಲು ತಮಿಳಿನಲ್ಲಿ ರೂ ಎಂದು ಮುದ್ರಿಸಲಾಗಿದೆ.

RelatedPosts

ಪತಿ ಮಾಡಿದ ಸಾಲಕ್ಕೆ ಪತ್ನಿಗೆ ಶಿಕ್ಷೆ: ಮರಕ್ಕೆ ಕಟ್ಟಿ ಚಿತ್ರಹಿಂಸೆ

ವಂಚನೆ ಕೇಸ್: ಐಶ್ವರ್ಯ ಗೌಡಗೆ ಜಾಮೀನು ಮಂಜೂರು

ಅಬಕಾರಿ ಹಗರಣ: ಆಂಧ್ರ ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಬಂಧನ

ಅಹಮದಾಬಾದ್ ವಿಮಾನ ದುರಂತ: ಏಕಕಾಲಕ್ಕೆ 2 ಎಂಜಿನ್‌‌ಗಳು ವಿಫಲವಾಗಲು ಕಾರಣ ಏನು?

ADVERTISEMENT
ADVERTISEMENT

ವಿರೋಧ ಮಾಡಲಿಕ್ಕಾಗಿಯೇ ವಿರೋಧ ಮಾಡಬೇಕು ಎಂದು ಹೊರಟರೆ ಕಾಮನ್ ಸೆನ್ಸ್‌ ಕೈ ಕೊಡುತ್ತದೆ ಎಂಬುದು ಹಳೆಯ ಮಾತು. ಸ್ಟಾಲಿನ್‌ ಮತ್ತು ತಮಿಳುನಾಡು ಸರ್ಕಾರದ ವಿಚಾರದಲ್ಲಿ ಇದು ನಿಜವಾಗಿದೆ. ಏಕೆಂದರೆ, ಬಜೆಟ್‌ನಲ್ಲಿ ಕೈ ಬಿಡಲಾಗಿರುವ ರೂಪಾಯಿ ಚಿಹ್ನೆಯನ್ನು ವಿನ್ಯಾಸ ಮಾಡಿದ್ದೇ ತಮಿಳುನಾಡಿನವರು. ತಮಿಳುನಾಡಿನ ಕಲ್ಲಕುರುಚ್ಚಿಯಲ್ಲಿ ಜನಿಸಿರುವ ಡಿ.ಉದಯ್‌ ಕುಮಾರ್‌. ಉದಯ್‌ ಕುಮಾರ್‌ ಅವರ ತಂದೆ ಧರ್ಮಲಿಂಗಂ ಡಿಎಂಕೆಯ ಮಾಜಿ ಶಾಸಕರಾಗಿದ್ದಾರೆ. ರಿಷಿವಂದಿಯಂ ಶಾಸಕರಾಗಿ ಧರ್ಮಲಿಂಗಂ ಆಯ್ಕೆಯಾಗಿದ್ದರು.

ಕಲ್ಲಕುರುಚ್ಚಿಯಲ್ಲಿ ಜನಿಸಿದ್ದ ಡಿ.ಉದಯ್‌ ಕುಮಾರ್‌, ಅಣ್ಣಾ ಯುನಿವರ್ಸಿಟಿಯಲ್ಲಿ ಆರ್ಕಿಟೆಕ್ಚರ್‌ ಪದವಿ ಪಡೆದಿದ್ದರು. ಐಐಟಿ ಬಾಂಬೆಯ ಕೈಗಾರಿಕಾ ವಿನ್ಯಾಸ ಕೇಂದ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದ ಉದಯ್ ಕುಮಾರ್‌, ಅಲ್ಲಿಯೇ ಪಿಎಚ್‌ಡಿ ಕೂಡ ಮಾಡಿದ್ದರು. ಅವರು ಪಿಎಚ್‌ಡಿ ಮಾಡುತ್ತಿದ್ದಾಗ ಕೇಂದ್ರ ಸರ್ಕಾರ ಮಾರ್ಚ್‌ 5, 2009ರಲ್ಲಿ ರೂಪಾಯಿ ಚಿಹ್ನೆ ರೂಪಿಸಲು ಸ್ಪರ್ಧೆ ಏರ್ಪಡಿಸಿತ್ತು. ಸ್ಪರ್ಧೆಯ ಮೂಲಕ ಸುಮಾರು 3,331 ವಿನ್ಯಾಸಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದವು. ಇದರಲ್ಲಿ 5 ವಿನ್ಯಾಸಗಳನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿತ್ತು. ನೊಂದಿತಾ ಕೊರಿಯಾ ಮೆಹ್ರೋತ್ರಾ, ಹಿತೇಶ್ ಪದ್ಮಶಾಲಿ, ಶಿಬಿನ್‌ ಕೆಕೆ, ಶಾರುಖ್ ಜೆ ಇರಾನಿ ಮತ್ತು ಡಿ.ಉದಯ್‌ ಕುಮಾರ್ ವಿನ್ಯಾಸಗೊಳಿಸಿದ್ದ ಐದು ವಿನ್ಯಾಸಗಳನ್ನು ಅಂತಿಮಗೊಳಿಸಲಾಗಿತ್ತು.

ಈ ಐದು ವಿನ್ಯಾಸಗಳಲ್ಲಿ ಡಿ.ಉದಯ್‌ ಕುಮಾರ್ ಮಾಡಿದ್ದ ವಿನ್ಯಾಸವನ್ನು ರೂಪಾಯಿ ಚಿಹ್ನೆಯಾಗಿ ಬಳಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಜುಲೈ 15, 2010ರಲ್ಲಿ ಕೇಂದ್ರ ಸರ್ಕಾರ ರೂಪಾಯಿ ಚಿಹ್ನೆಯನ್ನು ಬಳಸಲು ಆರಂಭಿಸಿತು. ಆಗ ಕೇಂದ್ರದಲ್ಲಿ ಯುಪಿಎ ಸರ್ಕಾರವಿತ್ತು. ಡಿಎಂಕೆ ಯುಪಿಎ ಸರ್ಕಾರದ ಭಾಗವಾಗಿತ್ತು. ಆಗ ಇಲ್ಲದ ವಿರೋಧ ಈಗ ಏಕೆ ಎಂಬ ಪ್ರಶ್ನೆ ಶುರುವಾಗಿದೆ. ಸ್ಟಾಲಿನ್ ಮಾಡಿರುವ ದೊಡ್ಡ ಎಡವಟ್ಟು ಪ್ರತಿಪಕ್ಷ ಬಿಜೆಪಿ ಪಾಲಿಗೆ ದೊಡ್ಡ ಅಸ್ತ್ರ ನೀಡಿದೆ. ಸ್ಟಾಲಿನ್ ಸರ್ಕಾರ ಮಾಡಿರುವ ಎಡವಟ್ಟಿನ ಕುರಿತು ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ವ್ಯಂಗ್ಯವಾಡಿದ್ದಾರೆ. ಎಕ್ಸ್‌‌ನಲ್ಲಿ ಪೋಸ್ಟ್‌ ಮಾಡಿರುವ ಅಣ್ಣಾಮಲೈ ಸ್ಟಾಲಿನ್‌ ಕುರಿತು ವ್ಯಂಗ್ಯವಾಡಿದ್ದು, ‘‘ಇನ್ನೆಷ್ಟು ಕೆಳಮಟ್ಟಕ್ಕೆ ಇಳಿಯುತ್ತೀರಿ’’ ಎಂದು ಪ್ರಶ್ನಿಸಿದ್ದಾರೆ.

ShareSendShareTweetShare
ಚಂದ್ರಮೋಹನ್ ಕೋಲಾರ

ಚಂದ್ರಮೋಹನ್ ಕೋಲಾರ

ಗ್ಯಾರಂಟಿ ನ್ಯೂಸ್ ಸಂಸ್ಥೆಯಲ್ಲಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಹಲವಾರು ಸುದ್ದಿವಾಹಿನಿಗಳಲ್ಲಿ ವಿವಿಧ ಹುದ್ದೆಗಳಲ್ಲಿ 13 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ಪ್ರಚಲಿತ ವಿದ್ಯಮಾನಗಳು, ವಿಜ್ಞಾನ - ತಂತ್ರಜ್ಞಾನ ರಂಗಗಳು ಇವರು ಆಸಕ್ತಿಯ ವಿಚಾರಗಳು. ಇದಲ್ಲದೆ ಇತಿಹಾಸ, ಆರ್ಥಿಕತೆ, ಬಾಹ್ಯಾಕಾಶ, ಕ್ರೀಡಾ ಸುದ್ದಿಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಮೋಟರ್ ಸ್ಪೋರ್ಟ್ ರೇಸಿಂಗ್ ವೀಕ್ಷಣೆ, ಬೈಕಿಂಗ್, ಪ್ರವಾಸ ಮಾಡುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 06 17t194731.550

ನಟಿ ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ: ನಿರ್ದೇಶಕ ನಾಗಶೇಖರ್

by ಶಾಲಿನಿ ಕೆ. ಡಿ
June 17, 2025 - 7:51 pm
0

Untitled design 2025 06 17t191751.258

ಕಮಲ್ ಕಿರಿಕ್ ನಡುವೆ ಅನೌನ್ಸ್ ಆಯ್ತು ‘ಕಮಲ್ ಶ್ರೀದೇವಿ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2025 - 7:22 pm
0

Untitled design 2025 06 17t185255.937

ಮೇಡ್‌ ಇನ್‌ ಯುಎಸ್‌ಎ: ಟ್ರಂಪ್‌ನ ಹೊಸ 5G ಫೋನ್‌ ಮಾರುಕಟ್ಟೆಗೆ ಎಂಟ್ರಿ

by ಶಾಲಿನಿ ಕೆ. ಡಿ
June 17, 2025 - 7:07 pm
0

Untitled design 2025 06 17t182102.632

ಪತಿ ಮಾಡಿದ ಸಾಲಕ್ಕೆ ಪತ್ನಿಗೆ ಶಿಕ್ಷೆ: ಮರಕ್ಕೆ ಕಟ್ಟಿ ಚಿತ್ರಹಿಂಸೆ

by ಶಾಲಿನಿ ಕೆ. ಡಿ
June 17, 2025 - 6:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 17t180341.456
    ವಂಚನೆ ಕೇಸ್: ಐಶ್ವರ್ಯ ಗೌಡಗೆ ಜಾಮೀನು ಮಂಜೂರು
    June 17, 2025 | 0
  • Untitled design 2025 06 17t165549.661
    ಅಬಕಾರಿ ಹಗರಣ: ಆಂಧ್ರ ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಬಂಧನ
    June 17, 2025 | 0
  • Untitled design 2025 06 17t161205.884
    ಜೀವ ಉಳಿಸಿಕೊಳ್ಳಲು ವಿದ್ಯಾರ್ಥಿಗಳ ಹರಸಾಹಸ: ವಿಮಾನ ಪತನದ ನಂತರದ ವಿಡಿಯೋ ವೈರಲ್
    June 17, 2025 | 0
  • 1444 (5)
    ನ್ಯೂಸ್ ಓದುವಾಗಲೇ ಬಾಂಬ್ ದಾಳಿ: ಲೈವ್ ಶೋ ಬಿಟ್ಟು ಓಡಿದ ಸುದ್ದಿ ನಿರೂಪಕಿ!
    June 16, 2025 | 0
  • Untitled design 2025 06 16t165112.420
    ‘ವೃಕ್ಷಮಾತೆ’ ಸಿನಿಮಾ ತಂಡಕ್ಕೆ ಸಂಕಷ್ಟ: ಚಿತ್ರತಂಡದ ವಿರುದ್ಧ ದೂರು ನೀಡಿದ ಸಾಲುಮರದ ತಿಮ್ಮಕ್ಕ
    June 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version