ತಮಿಳುನಾಡು ಕಾಂಗ್ರೆಸ್ ಶಾಸಕರ ರೆಸಾರ್ಟ್ ಪಾಲಿಟಿಕ್ಸ್ ಕಂಟಿನ್ಯು.. ಕನ್ಫ್ಯೂಷನ್

493996786

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಬಹುಮತ ಸಾಬೀತುಪಡಿಸುವ ಕಸರತ್ತು ನಡೆಯುತ್ತಿರುವಾಗ ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್‌ಗಳಲ್ಲಿ ಅಡಗಿಸಿಡುವ “ರೆಸಾರ್ಟ್ ಪಾಲಿಟಿಕ್ಸ್” ಆರಂಭವಾಗಿದೆ.

ಟಿವಿಕೆ ನಾಯಕ ವಿಜಯ್ ಅವರ ಸರ್ಕಾರ ರಚನೆಗೆ ಬೆಂಬಲ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಶಾಸಕರ ಸ್ಥಾನ ತೀವ್ರ ಚರ್ಚೆಯಲ್ಲಿದ್ದು,ಕೆಲವು ವರದಿಗಳ ಪ್ರಕಾರ ತಮಿಳುನಾಡು ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಎಲ್ಲಾ ಸುಳ್ಳು ಅವರು ಎಲ್ಲಿಗೆ ಹೋಗಿದ್ದಾರೆ ಎಂದು ಗೊತ್ತಿಲ್ಲ. ಹೈದರಾಬಾದ್‌ಗೆ ಹೋಗಿರಬಹುದು” ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಶಾಸಕರ ಸ್ಥಳಾವಧಿ ಕುರಿತು ಸ್ಪಷ್ಟ ಮಾಹಿತಿ ಇಲ್ಲದೆ ರಾಜಕೀಯ ಗೊಂದಲ ಹೆಚ್ಚಾಗಿದೆ.

ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈ ಬಗ್ಗೆ ಪ್ರತಿಕ್ರಿಯಿಸುತ್ತಾ, “ಹೈಕಮಾಂಡ್ ಹೇಳಿದರೆ ನಾನು ಕೇಳುತ್ತೇನೆ. ಇದು ಪಕ್ಷದ ನಿರ್ಧಾರ. ಇದರ ಬಗ್ಗೆ ನನಗೆ ಏನೂ ಗೊತ್ತಿಲ್ಲ” ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಡಿಕೆಶಿ ಅವರ ಈ ಹೇಳಿಕೆಯು ಪರಿಸ್ಥಿತಿಯ ಗಂಭೀರತೆಯನ್ನು ಇನ್ನಷ್ಟು ಹೆಚ್ಚಿಸಿದೆ.ತಮಿಳುನಾಡು ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವು ಹಲವು ಶಾಸಕರನ್ನು ಹೊಂದಿದೆ. ವಿಜಯ್ ಅವರ ಟಿವಿಕೆಗೆ ಬೆಂಬಲ ನೀಡುವುದೇ ಅಥವಾ ಡಿಎಂಕೆ-ಎಐಎಡಿಎಂಕೆ ಜೊತೆಗೆ ಸೇರಿ ಬೇರೊಂದು ಸಮೀಕರಣ ರಚಿಸುವುದೇ ಎಂಬುದು ಮುಖ್ಯ ಪ್ರಶ್ನೆಯಾಗಿದೆ.

ಈ ನಡುವೆ ಶಾಸಕರನ್ನು ರೆಸಾರ್ಟ್‌ಗಳಲ್ಲಿ ಇರಿಸಿ, ಅವರನ್ನು ಸಂಪರ್ಕ ಕಡಿತಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬರುತ್ತಿವೆ. ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತಿರುವ ಕಾಂಗ್ರೆಸ್ ಶಾಸಕರು ಈಗ ಎಲ್ಲಿದ್ದಾರೆ ಎಂಬುದು ರಹಸ್ಯವಾಗಿ ಉಳಿದಿದೆ. ಕೆಲವರು ಹೈದರಾಬಾದ್‌ನತ್ತ ಸಾಗಿರಬಹುದು ಎಂಬ ಊಹಾಪೋಹಗಳು ಕೇಳಿಬರುತ್ತಿವೆ. ಇದರಿಂದಾಗಿ ತಮಿಳುನಾಡು ರಾಜಕೀಯವು ಇನ್ನಷ್ಟು ಜಟಿಲವಾಗುತ್ತಿದೆ.

ವಿಜಯ್ ಅವರ ಪ್ರಮಾಣ ವಚನ ಸಮಾರಂಭವು ಮುಂದೂಡಲ್ಪಟ್ಟಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿರ್ಧಾರವು ನಿರ್ಣಾಯಕವಾಗುವ ಸಾಧ್ಯತೆ ಇದೆ. ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳು ಕೂಡ ತಮ್ಮದೇ ಆದ ಕಸರತ್ತು ನಡೆಸುತ್ತಿರುವುದು ರಾಜಕೀಯ ಸಮೀಕರಣಗಳನ್ನು ಮತ್ತಷ್ಟು ತಿರುಗಿಸುವಂತಿದೆ. ರಾಜ್ಯದ ಜನರು ಈ ರೆಸಾರ್ಟ್ ರಾಜಕಾರಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಶಾಸಕರು ಜನರ ಆಶಯಕ್ಕೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದು ಸಾಮಾನ್ಯ ಅಭಿಪ್ರಾಯವಾಗಿದೆ. ಮುಂದಿನ ಎರಡು ದಿನಗಳಲ್ಲಿ ಸ್ಪಷ್ಟ ಚಿತ್ರಣ ಬರಲಿದೆ.

 

Exit mobile version