ಋಷಿಕೇಶ್‌ನಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್‌ಪ್ರೆಸ್ ರೈಲು

BeFunky collage (19)

ಉತ್ತರಾಖಂಡದ ಋಷಿಕೇಶ್‌ನ ಖಾಂಡ್ ಗಾಂವ್ ಪ್ರದೇಶದಲ್ಲಿ ಸೋಮವಾರ ರಾತ್ರಿ ಉಜ್ಜಯಿನಿ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು ಹಳಿತಪ್ಪಿದ ಘಟನೆ ನಡೆದಿದೆ. ಯೋಗ ನಗರಿ ರೈಲು ನಿಲ್ದಾಣದ ಸಮೀಪ ರಾತ್ರಿ 9.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಅದೃಷ್ಟವಶಾತ್, ಹಳಿತಪ್ಪಿದ ಸಮಯದಲ್ಲಿ ಆ ಬೋಗಿಗಳಲ್ಲಿ ಪ್ರಯಾಣಿಕರು ಇರಲಿಲ್ಲ. ಇದರಿಂದ ದೊಡ್ಡ ಅಪಘಾತ ತಪ್ಪಿದೆ. ರಕ್ಷಣಾ ಪಡೆಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ರೈಲು ಸಂಚಾರಕ್ಕೆ ಅಡ್ಡಿಯಾಗಿದ್ದು, ಪುನಃಸ್ಥಾಪನಾ ಕಾರ್ಯ ಚುರುಕುಗೊಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಉಜ್ಜಯಿನಿ ಎಕ್ಸ್‌ಪ್ರೆಸ್‌ನಲ್ಲಿ ತೊಂದರೆಗಳು :

ಈ ಘಟನೆಗೂ ಮುನ್ನ ಅದೇ ರೈಲಿನಲ್ಲಿ ಇನ್ನೊಂದು ಅಪಘಾತದ ಸಂಭವವಾಗಿತ್ತು. ಸೋಮವಾರ ಬೆಳಗ್ಗೆ ಸಸಾರಂನಲ್ಲಿ ಉಜ್ಜಯಿನಿ ಎಕ್ಸ್‌ಪ್ರೆಸ್‌ಗೆ ಬೆಂಕಿ ಹೊತ್ತಿಕೊಂಡಿತ್ತು. ಇದಕ್ಕೂ ಮುಂಚೆ, ಒಂದು ದಿನದ ಹಿಂದೆ ರತ್ಲಂ ರಾಜಧಾನಿ ಎಕ್ಸ್‌ಪ್ರೆಸ್ (12431) ರೈಲಿನ ಒಂದು ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ರೈಲ್ವೇ ಅಧಿಕಾರಿಗಳು ಎರಡು ಘಟನೆಗಳ ಕುರಿತು ಪ್ರತ್ಯೇಕ ತನಿಖೆಗೆ ಆದೇಶಿಸಿದ್ದಾರೆ. ತಾಂತ್ರಿಕ ದೋಷವೇ ಅಥವಾ ಬೇರೆ ಯಾವುದೇ ಕಾರಣವೇ ಎಂಬುದನ್ನು ತನಿಖೆಯಲ್ಲಿ ತಿಳಿಯಲಾಗುವುದು.

ಪ್ರಯಾಣಿಕರಿಗೆ ಸಲಹೆ

ಈ ಘಟನೆಯಿಂದ ರೈಲು ಪ್ರಯಾಣಿಕರಲ್ಲಿ ಆತಂಕ ಹೆಚ್ಚಾಗಿದೆ. ರೈಲ್ವೇ ಸುರಕ್ಷತೆಯನ್ನು ಇನ್ನಷ್ಟು ಬಲಪಡಿಸಬೇಕು ಎಂಬುದು ಪ್ರಯಾಣಿಕರ ಮತ್ತು ಸಾರ್ವಜನಿಕರ ಬೇಡಿಕೆಯಾಗಿದೆ.

Exit mobile version