• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವೈಷ್ಣೋದೇವಿ ದೇಣಿಗೆಯಲ್ಲಿ ಹಗರಣ ಆರೋಪ: ತನಿಖೆ ಆರಂಭ

ಕವಿತಾ by ಕವಿತಾ
July 18, 2026 - 2:17 pm
in ದೇಶ
0 0
0
ಜ್ಞಾನಪೀಠ ಪ್ರಶಸ್ತಿ (10)

ಜಮ್ಮು, ಜುಲೈ 18: ದೇಶದ ಅತ್ಯಂತ ಶ್ರೀಮಂತ ಹಾಗೂ ಕೋಟ್ಯಂತರ ಭಕ್ತರು ಭೇಟಿ ನೀಡುವ ಶ್ರೀ ಮಾತಾ ವೈಷ್ಣೋದೇವಿ ದೇವಸ್ಥಾನ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಭಕ್ತರು ವರ್ಷಗಳ ಕಾಲ ಅರ್ಪಿಸಿದ ಸುಮಾರು ₹500 ರಿಂದ ₹550 ಕೋಟಿ ಮೌಲ್ಯದ ಬೆಳ್ಳಿ ದೇಣಿಗೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣ ಇದೀಗ ನ್ಯಾಯಾಲಯದ ಮೆಟ್ಟಿಲೇರಿದೆ.

ಲಭ್ಯ ಇರುವ ಮಾಹಿತಿಯ ಪ್ರಕಾರ, ಕಳೆದ 5–6 ವರ್ಷಗಳಲ್ಲಿ ಭಕ್ತರು ಅರ್ಪಿಸಿದ್ದ ಸುಮಾರು 20 ಟನ್ ಬೆಳ್ಳಿಯ ಆಭರಣಗಳು, ನಾಣ್ಯಗಳು ಹಾಗೂ ಬೆಳ್ಳಿ ಛತ್ರಿಗಳನ್ನು ಶುದ್ಧೀಕರಣಕ್ಕಾಗಿ ಜಮ್ಮು-ಕಾಶ್ಮೀರದ ಹೊರಗಿನ ಸರ್ಕಾರಿ ಟಂಕಸಾಲೆಗೆ ಕಳುಹಿಸಲಾಗಿತ್ತು. ಆದರೆ ಅಲ್ಲಿ ಲೋಹದ ಗುಣಮಟ್ಟ ಪರೀಕ್ಷಿಸಿದ ವೇಳೆ ಅಚ್ಚರಿಯ ಸಂಗತಿ ಬೆಳಕಿಗೆ ಬಂದಿದೆ.

RelatedPosts

LPG ಸಬ್ಸಿಡಿಗೆ ಹೊಸ ರೂಲ್ಸ್: ಅಕ್ಟೋಬರ್ 1ರಿಂದ ಆಧಾರ್ ಬಯೋಮೆಟ್ರಿಕ್ ಕಡ್ಡಾಯ

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ

ADVERTISEMENT
ADVERTISEMENT

ಕೇವಲ ಶೇ.5ರಿಂದ 6ರಷ್ಟು ಮಾತ್ರ ಅಸಲಿ ಬೆಳ್ಳಿ!

ಪರೀಕ್ಷೆಯಲ್ಲಿ ಕರಗಿಸಲಾದ ಒಟ್ಟು ಲೋಹದಲ್ಲಿ ಕೇವಲ ಶೇಕಡಾ 5–6ರಷ್ಟು ಮಾತ್ರ ಶುದ್ಧ ಬೆಳ್ಳಿ ಇರುವುದು ಪತ್ತೆಯಾಗಿದೆ. ಉಳಿದ ಭಾಗದಲ್ಲಿ ಕಬ್ಬಿಣ, ಕ್ಯಾಡ್ಮಿಯಮ್ ಸೇರಿದಂತೆ ವಿವಿಧ ಅಗ್ಗದ ಲೋಹಗಳು ಮಿಶ್ರಣವಾಗಿರುವುದು ಅಧಿಕಾರಿಗಳ ಆತಂಕಕ್ಕೆ ಕಾರಣವಾಗಿದೆ.

ಒಂದು ಉದಾಹರಣೆಯಲ್ಲಿ, ದೇವಾಲಯದ ದಾಖಲೆಗಳ ಪ್ರಕಾರ 70 ಕೆಜಿ ತೂಕದ ಬೆಳ್ಳಿಯ ವಸ್ತುವನ್ನು ಕರಗಿಸಿದಾಗ ಕೇವಲ 3 ಕೆಜಿ ಶುದ್ಧ ಬೆಳ್ಳಿ ಮಾತ್ರ ದೊರೆತಿದೆ ಎಂದು ವರದಿಗಳು ತಿಳಿಸಿವೆ. ಒಂದು ವೇಳೆ ಭಕ್ತರು ಅರ್ಪಿಸಿದ್ದ 20 ಟನ್ ಬೆಳ್ಳಿ ಸಂಪೂರ್ಣ ಶುದ್ಧವಾಗಿದ್ದರೆ, ಅದರ ಇಂದಿನ ಮೌಲ್ಯ ₹550 ಕೋಟಿಗೂ ಅಧಿಕವಾಗುತ್ತಿತ್ತು ಎಂದು ಅಂದಾಜಿಸಲಾಗಿದೆ.

ವಂಚನೆ ಎಲ್ಲಾಯಿತು?

ಪ್ರಕರಣದಲ್ಲಿ ಎರಡು ಪ್ರಮುಖ ಅನುಮಾನಗಳು ವ್ಯಕ್ತವಾಗಿವೆ. ಭಕ್ತರು ದೇವಸ್ಥಾನಕ್ಕೆ ಬರುವ ಮುನ್ನ ಸ್ಥಳೀಯ ವ್ಯಾಪಾರಿಗಳು ಅಥವಾ ಆಭರಣ ಅಂಗಡಿಗಳಿಂದಲೇ ನಕಲಿ ಅಥವಾ ಕಲಬೆರಕೆ ಬೆಳ್ಳಿ ಖರೀದಿಸಿ ದೇಣಿಗೆ ನೀಡಿದ್ದಾರೆಯೇ? ಅಥವಾ ದೇವಸ್ಥಾನದ ಭದ್ರತಾ ಕೊಠಡಿಯಲ್ಲಿ ದೇಣಿಗೆ ಸ್ವೀಕರಿಸಿದ ಬಳಿಕ ಅಸಲಿ ಬೆಳ್ಳಿಯನ್ನು ಬದಲಿಸಿ ನಕಲಿ ಲೋಹ ಇರಿಸಲಾಗಿದೆಯೇ? ಎಂಬ ಪ್ರಶ್ನೆಗಳು ತನಿಖೆಯ ಕೇಂದ್ರಬಿಂದುವಾಗಿವೆ.

ಈ ಸಂಬಂಧ ವಕೀಲ ದೀಪಕ್ ಶರ್ಮಾ ಸಲ್ಲಿಸಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಜಮ್ಮು ನ್ಯಾಯಾಲಯವು ಪ್ರಕರಣದ ಎಲ್ಲಾ ಮೂಲ ದಾಖಲೆಗಳೊಂದಿಗೆ ತನಿಖಾ ಅಧಿಕಾರಿಗಳು ಹಾಜರಾಗುವಂತೆ ಸೂಚಿಸಿದ್ದು, ಮುಂದಿನ ವಿಚಾರಣೆಯನ್ನು ಜುಲೈ 29, 2026ಕ್ಕೆ ನಿಗದಿಪಡಿಸಿದೆ.

ಆರೋಗ್ಯದ ಆತಂಕವೂ ಹೆಚ್ಚಳ

ಪತ್ತೆಯಾದ ಮಿಶ್ರಲೋಹಗಳಲ್ಲಿ ಕ್ಯಾಡ್ಮಿಯಮ್ ಇರುವುದರಿಂದ ಆರೋಗ್ಯದ ಆತಂಕವೂ ಎದುರಾಗಿದೆ. ಕ್ಯಾಡ್ಮಿಯಮ್ ಅನ್ನು ಜಾಗತಿಕ ಮಟ್ಟದಲ್ಲಿ ಕ್ಯಾನ್ಸರ್‌ಕಾರಕ ಲೋಹವೆಂದು ಗುರುತಿಸಲಾಗಿದೆ. ಇದನ್ನು ನಿರ್ವಹಿಸುವ ಸಿಬ್ಬಂದಿ ಹಾಗೂ ಟಂಕಸಾಲೆ ಕಾರ್ಮಿಕರ ಆರೋಗ್ಯದ ಮೇಲೂ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ.

ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ದೇವಾಲಯ ಮಂಡಳಿಯ ತುರ್ತು ಸಭೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ದೇವಸ್ಥಾನಕ್ಕೆ ಬರುವ ಪ್ರತಿಯೊಂದು ದೇಣಿಗೆಯನ್ನು RBI ಮಾರ್ಗಸೂಚಿಗಳು ಹಾಗೂ ತಂತ್ರಜ್ಞಾನದ ನೆರವಿನಿಂದ ಪಾರದರ್ಶಕವಾಗಿ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಡೈವರ್ಟ್ (9)

LPG ಸಬ್ಸಿಡಿಗೆ ಹೊಸ ರೂಲ್ಸ್: ಅಕ್ಟೋಬರ್ 1ರಿಂದ ಆಧಾರ್ ಬಯೋಮೆಟ್ರಿಕ್ ಕಡ್ಡಾಯ

by ದಿಶಾ ಕೆ. ಎಸ್.
September 20, 2026 - 11:37 am
0

ಡೈವರ್ಟ್ (7)

ಏಷ್ಯನ್ ಗೇಮ್ಸ್ 2026: ಮೊದಲ ದಿನವೇ ಭಾರತಕ್ಕೆ ಬೆಳ್ಳಿ ಪದಕ

by ದಿಶಾ ಕೆ. ಎಸ್.
September 20, 2026 - 11:11 am
0

ಡೈವರ್ಟ್ (6)

ಚಿನ್ನ ಖರೀದಿಸುವವರಿಗೆ ಶಾಕ್: ವಾರಾಂತ್ಯದಲ್ಲಿ ಮತ್ತೆ ಏರಿಕೆಯಾದ ಗೋಲ್ಡ್ ರೇಟ್

by ದಿಶಾ ಕೆ. ಎಸ್.
September 20, 2026 - 10:58 am
0

ಡೈವರ್ಟ್ (5)

ಬಿಗ್ ಬಾಸ್ ವೇದಿಕೆಯಲ್ಲಿ ಸಲ್ಮಾನ್ ಖಾನ್ ಕಿಡಿ: ಟ್ರೋಲಿಗರಿಗೆ ಖಡಕ್ ತಿರುಗೇಟು

by ದಿಶಾ ಕೆ. ಎಸ್.
September 20, 2026 - 10:48 am
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈವರ್ಟ್ (9)
    LPG ಸಬ್ಸಿಡಿಗೆ ಹೊಸ ರೂಲ್ಸ್: ಅಕ್ಟೋಬರ್ 1ರಿಂದ ಆಧಾರ್ ಬಯೋಮೆಟ್ರಿಕ್ ಕಡ್ಡಾಯ
    September 20, 2026 | 0
  • Untitled design 2026 09 19T174416.837
    ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (33)
    ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ
    September 19, 2026 | 0
  • ಹ್ಮೋ (47)
    ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ
    September 19, 2026 | 0
  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version