ವಾರಣಾಸಿ ಗ್ಯಾಂಗ್ ರೇ*ಪ್ ಕುರಿತು ಮಾಹಿತಿ ಪಡೆದ ಮೋದಿ

Siddu stalin kcr (87)

ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ವಾರಣಾಸಿಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ವಾರಣಾಸಿ ಏರ್ಪೋರ್ಟ್ನಲ್ಲೇ ಇತ್ತೀಚೆಗೆ ನಡೆದ ಗ್ಯಾಂಗ್ ರೇಪ್ ಪ್ರಕರಣದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

19 ವರ್ಷದ ಯುವತಿಯನ್ನ ಅಪಹರಿಸಿ 23 ಮಂದಿ 1 ವಾರಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ್ದ ಘಟನೆ ಸಂಬಂಧ ವಾರಣಾಸಿಯ ಪೊಲೀಸ್ ಆಯುಕ್ತರು, ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಂದ ವಾರಣಾಸಿ ಏರ್ಪೋರ್ಟ್ನಲ್ಲೇ ಮಾಹಿತಿ ಪಡೆದುಕೊಂಡಿರುವ ನರೇಂದ್ರ ಮೋದಿಯವರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಸಿದ್ದಾರೆ. ಜೊತೆಗೆ ಇಂತಹ ಘಟನೆಗಳು ಮತ್ತೆ ನಡೆಯದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಲಾಲ್ಪುರ ಪಾಂಡೆಪುರ ಪೊಲೀಸರು ಈವರೆಗೆ 9 ಮಂದಿಯನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಲಾಲ್ಪುರ ಪಾಂಡೆಪುರ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಘಟನೆ?
ಉತ್ತರ ವಾರಣಾಸಿಯ ಲಾಲ್ಪುರ್ ಪ್ರದೇಶದ ನಿವಾಸಿಯಾಗಿದ್ದ ಸಂತ್ರಸ್ತ ಯುವತಿ ಕಳೆದ ಮಾರ್ಚ್ 29ರಂದು ತನ್ನ ಸ್ನೇಹಿತರನ್ನ ಭೇಟಿಯಾಗಲು ಮನೆಯಿಂದ ಹೊರಟಿದ್ದಳು. ಇದೇ ರೀತಿ ಆಗಾಗ್ಗೆ ತನ್ನ ಸ್ನೇಹಿತರನ್ನ ಭೇಟಿಯಾಗಿ ಯಾವುದೇ ತೊಂದರೆ ಇಲ್ಲದೇ ಮನೆಗೆ ಬರುತ್ತಿದ್ದಳು. ಆದರೆ ಅದೊಂದು ದಿನ (ಮಾ.29) ಮನೆಗೆ ಮರಳಲು ಸಾಧ್ಯವಾಗಲಿಲ್ಲ. ಕೊನೆಗೆ ಊರೆಲ್ಲ ಹುಡುಕಾಡಿದರೂ ಸಿಗದಿದ್ದ ಕಾರಣ ಪೋಷಕರು ಏಪ್ರಿಲ್ 4ರಂದು ಪೊಲೀಸರಿಗೆ ದೂರು ನೀಡಿದ್ದರು.

ದೂರು ನೀಡಿದ ಅದೇ ದಿನ ಕಿಡ್ನ್ಯಾಪ್ ಮಾಡಿದ್ದ ಕಾಮುಕರು ಆಕೆಗೆ ಡ್ರಗ್ಸ್ ನೀಡಿ ಕಳುಹಿಸಿದ್ದರು. ಬಳಿಕ ತನ್ನ ಸ್ನೇಹಿತೆಯನ್ನು ಭೇಟಿಯಾದ ಸಂತ್ರಸ್ತೆ ಮೆನೆಗೆ ಬಂದು ಪೋಷಕರ ಬಳಿ ತನಗಾದ ಅನ್ಯಾಯದ ಬಗ್ಗೆ ತಿಳಿಸಿದ್ದಳು. ಬಳಿಕ ಪೋಷಕರು ಪೊಲೀಸರಿಗೆ ಏಪ್ರಿಲ್ 6ರಂದು ದೂರು ನೀಡಿದ್ದರು. ದೂರಿನಲ್ಲಿ ತನ್ನ ಮೇಲೆ ಒಂದು ವಾರಗಳ ಕಾಲ 23 ಜನ ಅತ್ಯಾಚಾರ ಎಸಗಿದ್ದಾರೆಂದು ಸಂತ್ರಸ್ತೆ ಹೇಳಿಕೊಂಡಿದ್ದಳು.

ಘಟನೆ ಬಳಿಕ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಹ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಈ ಕುರಿತು ಕೂಡಲೆ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version