ವಕ್ಫ್ ತಿದ್ದುಪಡಿ ಮಸೂದೆಗೆ ಆಂಧ್ರಪದೇಶ ಕಾಂಗ್ರೆಸ್ ಅಧ್ಯಕ್ಷೆ ವೈ. ಎಸ್. ಶರ್ಮಿಳಾ ವಿರೋಧ

ವಕ್ಫ್ ತಿದ್ದುಪಡಿಗೆ ವಿರೋಧ

Siddu stalin kcr (2)

ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮರಿಗೆ ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುವ ಉದ್ದೇಶ ಹೊಂದಿದೆ ಎಂದು ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈ. ಎಸ್. ಶರ್ಮಿಳಾ ಆಕ್ರೋಶ ಹೊರಹಾಕಿದ್ದಾರೆ.

ತಮ್ಮ ಎಕ್ಸ್‌‌‌ನಲ್ಲಿ ಪ್ರತಿಕ್ರಿಯಿಸಿರುವ ಅವರು ಸಂಸತ್ತಿನಲ್ಲಿ ತಿದ್ದುಪಡಿ ಮಸೂದೆ ಮಂಡನೆಯಾಗುತ್ತಿರುವುದು ದೇಶಕ್ಕೆ ಕರಾಳ ದಿನವಾಗಿದೆ. ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸುತ್ತಿದೆ. ಧಾರ್ಮಿಕ ದ್ವೇಷವನ್ನು ಪ್ರಚೋದಿಸುವ ಸಾಧನವಾಗಿ ಬಳಸಲಾಗುತ್ತಿದೆ . ಅಲ್ಪಸಂಖ್ಯಾತರ ಹಕ್ಕುಗಳನ್ನು ಹತ್ತಿಕ್ಕುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಸೂಚಿಯ ಭಾಗವಾಗಿದೆ ಎಂದು ಕಿಡಿಕಾರಿದ್ದಾರೆ.

ದೇಶದಲ್ಲಿ 20 ಕೋಟಿ ಮುಸ್ಲಿಮರು ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಅಹವಾಲು ಆಲಿಸದೆ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸುವ ಮೂಲಕ ಮೋದಿ ನೇತೃತ್ವದ ಸರ್ಕಾರ ಪ್ರಜಾಪ್ರಭುತ್ವಕ್ಕೆ ಅಪಪ್ರಚಾರ ಎಸಗಿದೆ. ಅವರ ಅಸಮಾಧಾನವನ್ನು ಪರಿಗಣಿಸದಿರುವುದು ಮೋದಿಯವರ ಸರ್ಕಾರ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿಯಾಗಿದೆ. ವಕ್ಫ್ ಆಸ್ತಿಗಳ ಉಸ್ತುವಾರಿಯನ್ನು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಿರುವುದು, ವಕ್ಫ್ ಮಂಡಳಿಯಲ್ಲಿ ಅನ್ಯಧರ್ಮಿಯ ಸದಸ್ಯರನ್ನು ನೇಮಿಸುವುದು,12 ವರ್ಷಗಳಿಂದ ವಕ್ಫ್ ಆಸ್ತಿಗಳು ಯಾರ ಹಿಡಿತದಲ್ಲಿವೆ ಎಂದು ಹೇಳುವುದು, 300 ವರ್ಷಗಳ ಹಿಂದಿನ ಆಸ್ತಿಗಳಿಗೆ ದಾಖಲೆಗಳನ್ನು ಕೇಳುವುದು ಎಷ್ಟು ಸರಿ ಎಂದು ಶರ್ಮಿಳಾ ಆಕ್ರೋಶ ಹೊರಹಾಕಿದ್ದಾರೆ.

ಅಲ್ಪಸಂಖ್ಯಾತರ ಹಿತಾಸಕ್ತಿಗೆ ಧಕ್ಕೆ ತರುವ ಮಸೂದೆಗೆ ಟಿಡಿಪಿ ಮತ್ತು ಜನಸೇನಾ ಪಕ್ಷಗಳು ಬೆಂಬಲ ಸೂಚಿಸಿರುವುದು ನಿಜಕ್ಕೂ ಕುಚೋದ್ಯ. ಟಿಡಿಪಿ ತನ್ನ ಜಾತ್ಯಾತೀತ ಮುಸುಕನ್ನು ತೆಗೆದುಹಾಕಿದೆ. ಒಂದು ಕಡೆ ಮುಸ್ಲಿಮರಿಗೆ ಇಫ್ತಾರ್ ಕೂಟ ಏರ್ಪಡಿಸಿದ್ದ ವಕ್ಫ್ ಆಸ್ತಿಗಳನ್ನು ರಕ್ಷಿಸುವ ಭರವಸೆ ನೀಡಿ ಮತ್ತೊಂದು ಕಡೆ ಸಂಸತ್ತಿನಲ್ಲಿ ತಿದ್ದುಪಡಿ ಮಸೂದೆಗೆ ಬೆಂಬಲ ನೀಡುತ್ತಿರುವುದು ಘೋರ ವಂಚನೆಯಾಗಿದೆ. ಈ ಮಸೂದೆಯನ್ನು ಕಾಂಗ್ರೆಸ್ ಬಲವಾಗಿ ವಿರೋಧಿಸುತ್ತಿದ್ದು, ಮುಸ್ಲಿಮರ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ಶರ್ಮಿಳಾ ತಿಳಿಸಿದ್ದಾರೆ.

 

 

Exit mobile version