ಬೆಂಗಳೂರು ಕಾಲ್ತುಳಿತ: 11 ಮಂದಿ ಸಾವು, ವಿರುದ್ದವೂ ದೂರು ದಾಖಲು..

Web 2025 06 06t185831.064

ಐಪಿಎಲ್ 2025ರ 18ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಮೊದಲ ಬಾರಿಗೆ ಚಾಂಪಿಯನ್ ಆಗಿತ್ತು. ಈ ಸಂಭ್ರಮವನ್ನು ಆಚರಿಸಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿಜಯೋತ್ಸವ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತದಿಂದ 11 ಅಭಿಮಾನಿಗಳು ದಾರುಣವಾಗಿ ಜೀವ ಕಳೆದುಕೊಂಡಿದ್ದಾರೆ. ಈ ಘಟನೆಯ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರ್‌ಸಿಬಿ ತಂಡದ ಮ್ಯಾನೇಜ್‌ಮೆಂಟ್, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಮತ್ತು ಕೆಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ.

ಈ ದುರಂತದ ಬೆನ್ನಲ್ಲೇ, ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವಿರುದ್ಧವೂ ಎಫ್‌ಐಆರ್ ದಾಖಲಿಸುವಂತೆ ನೈಜ ಹೋರಾಟಗಾರರ ವೇದಿಕೆ ಒತ್ತಾಯಿಸಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದ್ದು, ಆರಂಭದಲ್ಲಿ ಪೊಲೀಸರು ದೂರು ಸ್ವೀಕರಿಸಲು ಹಿಂದೇಟು ಹಾಕಿದರೂ, ಕೊನೆಗೆ ನೈಜ ಹೋರಾಟಗಾರರ ವೇದಿಕೆಯ ಎಚ್.ಎಂ. ವೆಂಕಟೇಶ್ ಅವರಿಂದ ದೂರನ್ನು ಸ್ವೀಕರಿಸಿ, ಕೊಹ್ಲಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ADVERTISEMENT
ADVERTISEMENT

ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಆರ್‌ಸಿಬಿ ತಂಡದ ವಿಜಯೋತ್ಸವವನ್ನು ಕಾಣಲು 2-3 ಲಕ್ಷ ಅಭಿಮಾನಿಗಳು ಜಮಾಯಿಸಿದ್ದರು. ಊಹೆಗೂ ಮೀರಿದ ಜನಸಂದಣಿಯಿಂದಾಗಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆ ಸಂಭವಿಸಿದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಕೂಡ ಉಪಸ್ಥಿತರಿದ್ದರು ಎಂದು ವರದಿಯಾಗಿದೆ.

ಆರ್‌ಸಿಬಿಯ ಸಂತಾಪ ಸಂದೇಶ ಮತ್ತು ವಿರಾಟ್‌ನ ಪ್ರತಿಕ್ರಿಯೆ
ಈ ದುರಂತದ ಬಗ್ಗೆ ಆರ್‌ಸಿಬಿ ತಂಡವು ಸಂತಾಪ ಸೂಚಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿತ್ತು. ವಿರಾಟ್ ಕೊಹ್ಲಿ ಈ ಪೋಸ್ಟ್ ಅನ್ನು ಮರುಹಂಚಿಕೊಂಡಿದ್ದಾರೆಯೇ ಹೊರತು, ಪ್ರತ್ಯೇಕವಾಗಿ ಯಾವುದೇ ಸಂದೇಶ ಹಾಕಿಲ್ಲ. ಇದಕ್ಕೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದರೆ, ಇನ್ನು ಕೆಲವರು ಕೊಹ್ಲಿ ಆರ್‌ಸಿಬಿ ತಂಡವನ್ನು ಪ್ರತಿನಿಧಿಸುವವರಾಗಿ ಈ ರೀತಿಯಲ್ಲಿ ಸಂತಾಪ ಸೂಚಿಸಿದ್ದಾರೆ ಎಂದು ಸಮರ್ಥಿಸಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಲಂಡನ್‌ಗೆ ತೆರಳಿದ್ದಾರೆ ಎಂಬ ವದಂತಿಯಿಂದ ಸಾಮಾಜಿಕ ಜಾಲತಾಣಗಳಲ್ಲಿ “ಅರೆಸ್ಟ್ ವಿರಾಟ್ ಕೊಹ್ಲಿ” ಟ್ರೆಂಡ್ ಆಗಿದೆ. ಇಂತಹ ದುಃಖದ ಸಮಯದಲ್ಲಿ ವಿದೇಶ ಪ್ರವಾಸ ಕೈಗೊಂಡಿರುವುದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಆರ್‌ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಕೊಹ್ಲಿ ವಿರುದ್ಧ ಯಾಕೆ ಕ್ರಮ ಕೈಗೊಳ್ಳಿಲ್ಲ ಎಂದು ಕೆಲವರು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಆರ್‌ಸಿಬಿ, ಕೆಎಸ್‌ಸಿಎ ಮತ್ತು ಡಿಎನ್‌ಎ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೆಲವರನ್ನು ಬಂಧನಕ್ಕೂ ಒಳಪಡಿಸಲಾಗಿದೆ. ಗಾಯಗೊಂಡ ಒಬ್ಬ ವ್ಯಕ್ತಿಯು ಆರ್‌ಸಿಬಿ ಫ್ರಾಂಚೈಸಿ ವಿರುದ್ಧ ದೂರು ನೀಡಿದ್ದಾರೆ. ತನಿಖೆಯು ತೀವ್ರಗೊಂಡಿದ್ದು, ಈ ದುರಂತದ ಸಂಪೂರ್ಣ ವಿವರಗಳು ಶೀಘ್ರದಲ್ಲೇ ಬಹಿರಂಗಗೊಳ್ಳುವ ಸಾಧ್ಯತೆ ಇದೆ.

Exit mobile version