• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾಕಿ ವಿಶ್ವಕಪ್‌ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು; ಪಾಕಿಸ್ತಾನಕ್ಕೆ ಸೋಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 20, 2026 - 7:09 am
in Flash News, ಕ್ರೀಡೆ
0 0
0
Untitled design 2026 08 20T070851.127

ನವದೆಹಲಿ: ಹಾಕಿ ವಿಶ್ವಕಪ್‌ನ ಪೂಲ್ ‘ಡಿ’ಯಲ್ಲಿ ನಡೆದ ಅತ್ಯಂತ ರೋಚಕ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು 5-3 ಗೋಲುಗಳ ಅಂತರದಿಂದ ಮಣಿಸಿ ಮುಂದಿನ ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ. ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಭಾರತ, ಪಂದ್ಯದ ಬಹುತೇಕ ಅವಧಿಯಲ್ಲಿ ತನ್ನ ಹಿಡಿತವನ್ನು ಕಾಯ್ದುಕೊಂಡು ಎದುರಾಳಿ ಪಾಕಿಸ್ತಾನಕ್ಕೆ ಯಾವುದೇ ಅವಕಾಶ ನೀಡಲಿಲ್ಲ. ಈ ಗೆಲುವಿನೊಂದಿಗೆ ಭಾರತ ತನ್ನ ಗುಂಪಿನಲ್ಲಿ ಇಂಗ್ಲೆಂಡ್ ಬಳಿಕ ಎರಡನೇ ಸ್ಥಾನ ಪಡೆದು ಮುಂದಿನ ಸುತ್ತಿಗೆ ಪ್ರವೇಶಿಸಿದೆ.

ಪಂದ್ಯದ ಮೊದಲ ಕ್ವಾರ್ಟರ್‌ನಲ್ಲೇ ಭಾರತ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿತು. ನಾಯಕ ಹರ್ಮನ್‌ಪ್ರೀತ್ ಸಿಂಗ್ ಹಾಗೂ ಅಭಿಷೇಕ್ ತಲಾ ಒಂದೊಂದು ಗೋಲು ಬಾರಿಸುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಪರಿಣಾಮ ಮೊದಲ ಕ್ವಾರ್ಟರ್ ಮುಕ್ತಾಯದ ವೇಳೆಗೆ ಭಾರತ 2-0 ಮುನ್ನಡೆ ಸಾಧಿಸಿತ್ತು.

RelatedPosts

ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ

ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!

ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ

ADVERTISEMENT
ADVERTISEMENT

ಎರಡನೇ ಕ್ವಾರ್ಟರ್‌ನಲ್ಲೂ ಭಾರತದ ಆಕ್ರಮಣಕಾರಿ ಆಟ ಮುಂದುವರಿಯಿತು. ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತೊಂದು ಗೋಲು ದಾಖಲಿಸಿ ಭಾರತದ ಮುನ್ನಡೆಯನ್ನು 3-0ಕ್ಕೆ ಹೆಚ್ಚಿಸಿದರು. ಮೂರು ಗೋಲುಗಳ ಹಿನ್ನಡೆಯಲ್ಲಿದ್ದ ಪಾಕಿಸ್ತಾನ ಬಳಿಕ ತಿರುಗೇಟು ನೀಡಲು ಪ್ರಯತ್ನಿಸಿತು. ಹನ್ನಾನ್ ಶಾಹಿದ್ ಪಾಕಿಸ್ತಾನದ ಪರ ಮೊದಲ ಗೋಲು ಗಳಿಸಿ ಅಂತರವನ್ನು ಕಡಿಮೆ ಮಾಡಿದರು. ಆದರೆ ಭಾರತ ತಕ್ಷಣವೇ ಪ್ರತಿಕ್ರಿಯಿಸಿತು. ಅಭಿಷೇಕ್ ತಮ್ಮ ಎರಡನೇ ಗೋಲು ದಾಖಲಿಸಿ ಭಾರತವನ್ನು 4-1 ಮುನ್ನಡೆಗೆ ಕೊಂಡೊಯ್ದರು.

ಪಾಕಿಸ್ತಾನ ಮತ್ತೊಮ್ಮೆ ಗೋಲು ಗಳಿಸುವ ಮೂಲಕ ಭಾರತದ ಮುನ್ನಡೆಯನ್ನು ಕಡಿಮೆ ಮಾಡಿತು. ಸುಫ್ಯಾನ್ ಖಾನ್ ಗಳಿಸಿದ ಗೋಲಿನಿಂದ ದ್ವಿತೀಯಾರ್ಧದ ವೇಳೆಗೆ ಸ್ಕೋರ್ 4-2ಕ್ಕೆ ತಲುಪಿತು. ಹೀಗಾಗಿ ಪಂದ್ಯದ ಫಲಿತಾಂಶದ ಬಗ್ಗೆ ಕುತೂಹಲ ಮತ್ತಷ್ಟು ಹೆಚ್ಚಾಯಿತು.

ಮೂರನೇ ಕ್ವಾರ್ಟರ್‌ನಲ್ಲಿ ಭಾರತಕ್ಕೆ ಪೆನಾಲ್ಟಿ ಸ್ಟೋಕ್ ಲಭಿಸಿತು. ಈ ಅವಕಾಶವನ್ನು ಹಾರ್ದಿಕ್ ಸಿಂಗ್ ಯಾವುದೇ ತಪ್ಪಿಲ್ಲದೆ ಗೋಲಾಗಿ ಪರಿವರ್ತಿಸಿದರು. ಇದರಿಂದ ಭಾರತದ ಮುನ್ನಡೆ 5-2ಕ್ಕೆ ವಿಸ್ತರಿಸಿತು. ಈ ಹಂತದಲ್ಲಿ ಪಾಕಿಸ್ತಾನ ಪಂದ್ಯಕ್ಕೆ ಮರಳಲು ಸಾಕಷ್ಟು ಪ್ರಯತ್ನಿಸಿದರೂ, ಭಾರತದ ರಕ್ಷಣಾ ವಿಭಾಗವನ್ನು ಭೇದಿಸುವುದು ಸುಲಭವಾಗಲಿಲ್ಲ.

ಅಂತಿಮ ಕ್ವಾರ್ಟರ್‌ನಲ್ಲಿ ಪಾಕಿಸ್ತಾನದ ಶಾಹಿದ್ ಮತ್ತೊಂದು ಗೋಲು ಗಳಿಸಿ ಅಂತರವನ್ನು 5-3ಕ್ಕೆ ಇಳಿಸಿದರು. ಆದರೆ ಉಳಿದ ಸಮಯದಲ್ಲಿ ಭಾರತ ತನ್ನ ರಕ್ಷಣಾತ್ಮಕ ಆಟವನ್ನು ಮತ್ತಷ್ಟು ಬಿಗಿಗೊಳಿಸಿತು. ಪಾಕಿಸ್ತಾನಕ್ಕೆ ಮತ್ತೊಂದು ಗೋಲು ಗಳಿಸುವ ಅವಕಾಶ ನೀಡದೆ ಪಂದ್ಯವನ್ನು 5-3 ಅಂತರದಿಂದ ತನ್ನದಾಗಿಸಿಕೊಂಡಿತು.

ಈ ಗೆಲುವಿನಲ್ಲಿ ನಾಯಕ ಹರ್ಮನ್‌ಪ್ರೀತ್ ಸಿಂಗ್ ಹಾಗೂ ಅಭಿಷೇಕ್ ಅವರ ಪ್ರದರ್ಶನ ಪ್ರಮುಖವಾಗಿತ್ತು. ಇಬ್ಬರೂ ತಲಾ ಎರಡು ಗೋಲು ಗಳಿಸುವ ಮೂಲಕ ಭಾರತದ ಗೆಲುವಿಗೆ ದೊಡ್ಡ ಕೊಡುಗೆ ನೀಡಿದರು. ಹಾರ್ದಿಕ್ ಸಿಂಗ್ ಕೂಡ ಪೆನಾಲ್ಟಿ ಸ್ಟೋಕ್ ಅನ್ನು ಗೋಲಾಗಿ ಪರಿವರ್ತಿಸಿ ತಂಡದ ಗೆಲುವಿನಲ್ಲಿ ಪಾತ್ರವಹಿಸಿದರು.

ವಿಶ್ವಕಪ್ ಅಭಿಯಾನದಲ್ಲಿ ಭಾರತ ತನ್ನ ಮೊದಲ ಪಂದ್ಯದಲ್ಲಿ ವೇಲ್ಸ್ ವಿರುದ್ಧ 3-1 ಗೋಲುಗಳ ಜಯ ದಾಖಲಿಸಿತ್ತು. ಆದರೆ ನಂತರ ಇಂಗ್ಲೆಂಡ್ ವಿರುದ್ಧ 2-4 ಅಂತರದಲ್ಲಿ ಸೋಲು ಅನುಭವಿಸಿತ್ತು. ಹೀಗಾಗಿ ಪಾಕಿಸ್ತಾನ ವಿರುದ್ಧದ ಪಂದ್ಯ ಭಾರತಕ್ಕೆ ಮಹತ್ವದ್ದಾಗಿತ್ತು. ಈ ನಿರ್ಣಾಯಕ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ ತನ್ನ ಮುಂದಿನ ಹಂತದ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

ಇತ್ತ ಪಾಕಿಸ್ತಾನ ತಂಡ ಇಂಗ್ಲೆಂಡ್ ವಿರುದ್ಧ 1-4 ಅಂತರದಲ್ಲಿ ಸೋತಿದ್ದರೆ, ವೇಲ್ಸ್ ವಿರುದ್ಧ 3-3 ಡ್ರಾ ಸಾಧಿಸಿತ್ತು. ಎಂಟು ವರ್ಷಗಳ ಬಳಿಕ ವಿಶ್ವಕಪ್‌ಗೆ ಮರಳಿರುವ ಪಾಕಿಸ್ತಾನಕ್ಕೆ ಭಾರತದ ಅನುಭವ ಮತ್ತು ವೇಗದ ಆಟದ ಎದುರು ನಿರೀಕ್ಷಿತ ಮಟ್ಟದ ಪ್ರತಿರೋಧ ನೀಡಲು ಸಾಧ್ಯವಾಗಲಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 21T105549.678

ರಾಜ್ಯದಲ್ಲಿ SIR ಪ್ರಕ್ರಿಯೆ ಸಂಪೂರ್ಣ ಮುಕ್ತಾಯ: 43 ಲಕ್ಷದ 80 ಸಾವಿರದ 740 ಮತದಾರರಿಗೆ ಶೀಘ್ರವೇ ನೋಟಿಸ್

by ದಿಶಾ ಕೆ. ಎಸ್.
August 21, 2026 - 10:56 am
0

Untitled design 2026 08 21T101734.040

ಕ್ಷಣಾರ್ಧದಲ್ಲಿ ಟಿಕೆಟ್ ಸೋಲ್ಡ್ ಔಟ್: ‘ಟಾಕ್ಸಿಕ್’ ಮುಂಗಡ ಬುಕಿಂಗ್‌ಗೆ ಭರ್ಜರಿ ರೆಸ್ಪಾನ್ಸ್

by ದಿಶಾ ಕೆ. ಎಸ್.
August 21, 2026 - 10:18 am
0

Untitled design 2026 08 21T095819.644

ಜೈಲಿನಲ್ಲಿದ್ದ ಇಮ್ರಾನ್ ಖಾನ್‌ಗೆ ಆರೋಗ್ಯ ಸಮಸ್ಯೆ; ಮಧ್ಯರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲು

by ದಿಶಾ ಕೆ. ಎಸ್.
August 21, 2026 - 9:59 am
0

Untitled design 2026 08 21T093320.464

ವರಮಹಾಲಕ್ಷ್ಮಿ ಹಬ್ಬಕ್ಕೆ ಹೂ-ಹಣ್ಣುಗಳ ಬೆಲೆ ಗಗನಕ್ಕೆ; ಖರೀದಿಗೆ ಮುಗಿಬಿದ್ದ ಜನ

by ದಿಶಾ ಕೆ. ಎಸ್.
August 21, 2026 - 9:34 am
0

ಸಂಬಂಧಿಸಿದ ಪೋಸ್ಟ್‌ಗಳು

  • ಡೀಸೆಲ್ ಬೆಲೆ (7)
    ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!
    August 20, 2026 | 0
  • ಡೀಸೆಲ್ ಬೆಲೆ (4)
    ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
    August 20, 2026 | 0
  • ಡೀಸೆಲ್ ಬೆಲೆ (3)
    ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
    August 20, 2026 | 0
  • ಡೀಸೆಲ್ ಬೆಲೆ
    ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ
    August 20, 2026 | 0
  • Untitled design 2026 08 20T092423.195
    ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version