• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೆ ಟೀಂ ಇಂಡಿಯಾ ಲಗ್ಗೆ..!

ವಿಶ್ವಕಪ್ ಫೈನಲ್ ಪಂದ್ಯದ ಸೇಡು ತೀರಿಸಿಕೊಂಡ ಭಾರತ..!

ಚಂದ್ರಮೋಹನ್ ಕೋಲಾರ by ಚಂದ್ರಮೋಹನ್ ಕೋಲಾರ
March 5, 2025 - 7:39 am
in ಕ್ರೀಡೆ
0 0
0
Untitled Design 2025 03 05t073741.175

ಐಸಿಸಿ ಚಾಂಪಿಯನ್ಸ್ ಟ್ರೋಫಿ ಸೆಮಿ-ಫೈನಲ್‌‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಗೆದ್ದು ಬೀಗಿದೆ. ಈ ಮೂಲಕ ವಿಶ್ವಕಪ್ ಫೈನಲ್ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿದೆ. ಭಾರತ ಎಲ್ಲ ವಿಭಾಗಗಳಲ್ಲಿ ಆಸ್ಟ್ರೇಲಿಯಾಗಿಂತಾ ಉತ್ತಮ ಪ್ರದರ್ಶನ ತೋರುವ ಮೂಲಕ ಆಸಿಸ್ ವಿರುದ್ಧ ಜಯ ಸಾಧಿಸಿದೆ.

Ind Vs Aus Dubai 1740989205766 1200x630xt

RelatedPosts

ಇಂದು ಭಾರತ vs ನ್ಯೂಜಿಲೆಂಡ್ ಹೈವೋಲ್ಟೇಜ್‌ ಕದನ: ಟೀಂ ಇಂಡಿಯಾಗೆ ಶುಭ ಹಾರೈಸಿದ ಆರ್‌ಸಿಬಿ

T20 World Cup final: ಭಾರತ-ನ್ಯೂಜಿಲೆಂಡ್ ಫೈನಲ್ ಪಂದ್ಯಕ್ಕೂ ಮುನ್ನ ಇಬ್ಬರ ಬಂಧನ

ಟಿ20 ವಿಶ್ವಕಪ್ ಫೈನಲ್: ಕಪ್‌ಗೆ ಮುತ್ತಿಕ್ಕಲು ಟೀಂ ಇಂಡಿಯಾ ಸಜ್ಜು..ಯಾರು ಚಾಂಪಿಯನ್?

ಭಾರತ vs ನ್ಯೂಜಿಲೆಂಡ್: ಟಿ20 ವಿಶ್ವಕಪ್ ಫೈನಲ್‌ಗೆ ವಿಶೇಷವಾಗಿ ಸಜ್ಜಾಗಿದೆ ಅಹಮದಾಬಾದ್ ಪಿಚ್

ADVERTISEMENT
ADVERTISEMENT

ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತ-ಪಾಕ್ ಪಂದ್ಯದ ನಂತರ ಅತಿದೊಡ್ಡ ಹೈವೋಲ್ಟೇಜ್ ಮ್ಯಾಚ್ ಅಂತಾ ಮೊದಲ ಸೆಮಿ ಫೈನಲ್ ಕ್ರೇಜ್ ಕ್ರಿಯೇಟ್ ಮಾಡಿತ್ತು. ಎಲ್ಲರ ನಿರೀಕ್ಷೆಯಂತೆಯೇ ಮೊದಲ ಸೆಮಿ ಫೈನಲ್ ಜಿದ್ದಾಜಿದ್ದಿನಿಂದ ಕೂಡಿತ್ತು. ದುಬೈನಲ್ಲಿ ನಡೆದ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಆಯ್ದುಕೊಂಡ್ರು. ಟಾಸ್ ಸೋತ ಬಳಿಕ ಮಾತನಾಡಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಟಾಸ್ ಗೆದ್ದರೆ ಏನು ಮಾಡಬೇಕು ಅನ್ನೋ ದ್ವಂದ್ವ ಇತ್ತು. ಟಾಸ್ ಸೋತ ಬಳಿಕ ಮನಸ್ಸು ನಿರಾಳವಾಗಿದೆ ಅಂತಾ ಹೇಳಿದರು.

Rohit Sharma And Virat Kohli

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾಗೆ ಉತ್ತಮ ಆರಂಭ ಸಿಗಲಿಲ್ಲ. ಕೇವಲ ನಾಲ್ಕು ರನ್‌ಗಳಿಗೆ ಆರಂಭಿಕ ಆಟಗಾರ ಕೂಪರ್ ಕಾನೊಲಿ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಬಳಿಕ ಜೊತೆಯಾದ ಟ್ರಾವಿಸ್ ಹೆಡ್ ಮತ್ತು ನಾಯಕ ಸ್ಮಿತ್ ಆಸ್ಟ್ರೇಲಿಯಾವನ್ನ ಸಂಕಷ್ಟದಿಂದ ಪಾರು ಮಾಡೋಕೆ ಶುರು ಮಾಡಿದರು. ಇಬ್ಬರೂ ಎರಡನೇ ವಿಕೆಟ್‌ಗೆ 50 ರನ್ ಪೇರಿಸಿದರು. ಈ ವೇಳೆ ಟ್ರಾವಿಸ್ ಹೆಡ್ 39 ರನ್ ಗಳಿಸಿ ಔಟ್ ಆದ್ರು. ಹೆಡ್ ಬಳಿಕ ಕ್ರೀಸ್‌‌ಗೆ ಬಂದ ಮಾರ್ನಸ್ ಲಬುಶೇನ್, ಆಸ್ಟ್ರೇಲಿಯಾ ನಾಯಕ ಸ್ಮಿತ್ ಜೊತೆ 56 ರನ್ ಜೊತೆಯಾಟವಾಡಿದ್ರು. ತಂಡದ ಮೊತ್ತ 110 ರನ್ ಆಗಿದ್ದಾಗ ಲಬುಶೇನ್ 36 ರನ್ ಗಳಿಸಿ ಜಡೇಜಾಗೆ ವಿಕೆಟ್ ಒಪ್ಪಿಸಿದ್ರು. ಬಳಿಕ ಬಂದ ಜೋಶ್ ಇಂಗ್ಲಿಸ್ ವೇಗವಾಗಿ ರನ್ ಗಳಿಸೋ ಆತುರಕ್ಕೆ ಬಿದ್ದು ವಿಕೆಟ್ ಒಪ್ಪಿಸಿದರು.

Teamindia 1739770539

ಒಂದು ಕಡೆ ಸ್ಮಿತ್ ನೆಲಕಚ್ಚಿ ಆಡುವ ಮೂಲಕ ತಂಡಕ್ಕೆ ಆಸರೆಯಾಗಲು ಪ್ರಯತ್ನ ನಡೆಸ್ತಿದ್ದರು. ಆಗ ಇವರಿಗೆ ಜೊತೆಯಾದ ಅಲೆಕ್ಸ್ ಕೇರಿ, ನಾಯಕನಿಗೆ ಬೆಂಬಲ ನೀಡುವಂತಾ ಆಟ ಆಡಿದ್ರು. ಇಬ್ಬರೂ ಸೇರಿ 54 ರನ್‌ಗಳನ್ನ ಕಲೆ ಹಾಕಿದ್ದ ವೇಳೆ ಮೊಹಮ್ಮದ್ ಶಮಿ ಬೌಲಿಂಗ್‌‌ನಲ್ಲಿ ದೊಡ್ಡ ಹೊಡೆತಕ್ಕೆ ಪ್ರಯತ್ನಿಸಿದ ಸ್ಮಿತ್ 73 ರನ್ ಗಳಿಸಿ ಔಟಾದರು. ಇದಾದ ಬಳಿಕ ಆಸ್ಟ್ರೇಲಿಯಾ ಚೇತರಿಸಿಕೊಳ್ಳಲೇ ಇಲ್ಲ. ಸ್ಮಿತ್ ಬಳಿಕ ಬಂದ ಮ್ಯಾಕ್ಸ್‌ವೆಲ್‌‌‌‌, ಬೆನ್ ಡ್ವಾರ್ಷುಯಸ್, ಆ್ಯಡಂ ಜಂಪಾ, ನಾಥನ್ ಎಲ್ಲಿಸ್ ಎಲ್ಲರೂ ದೊಡ್ಡ ಹೊಡೆತಗಳಿಗೆ ಪ್ರಯತ್ನಿಸಿ ಔಟಾದರು. ಮತ್ತೊಂದೆಡೆ ಆಸ್ಟ್ರೇಲಿಯಾಗೆ ಆಸರೆಯಾಗಿದ್ದ ಅಲೆಕ್ಸ್ ಕೇರಿ 61 ರನ್ ಗಳಿಸಿ ರನ್ ಔಟ್ ಆದ್ರು. ಇಲ್ಲದ ರನ್ ಕದಿಯಲು ಹೋಗಿ ವಿಕೆಟ್ ಒಪ್ಪಿಸಿದ್ರು. ಕೊನೆಗೆ ಆಸ್ಟ್ರೇಲಿಯಾ 264 ರನ್‌ಗಳಿಗೆ ಆಲೌಟ್ ಆಗಿ, ಭಾರತಕ್ಕೆ 265 ರನ್‌‌ಗಳ ಟಾರ್ಗೆಟ್ ನೀಡಿತು. ಭಾರತದ ಪರ ಮೊಹಮ್ಮದ್ ಶಮಿ 3, ಜಡೇಜಾ, ವರುಣ್ ಚಕ್ರವರ್ತಿ ತಲಾ 2, ಅಕ್ಷರ್ ಪಟೇಲ್ ಮತ್ತು ಹಾರ್ದಿಕ್ ಪಾಂಡ್ಯ ತಲಾ 1 ವಿಕೆಟ್ ಪಡೆದು ಮಿಂಚಿದ್ರು.

ಆಸ್ಟ್ರೇಲಿಯಾ ನೀಡಿದ್ದ ಟಾರ್ಗೆಟ್ ಬೆನ್ನತ್ತಿದ ಭಾರತಕ್ಕೂ ಉತ್ತಮ ಆರಂಭ ಸಿಗಲಿಲ್ಲ. ಭಾರತದ ಓಪನಿಂಗ್ ಬ್ಯಾಟ್ಸ್‌‌ಮನ್‌ಗಳು ಆಕ್ರಮಣಕಾರಿ ಆಟಕ್ಕೆ ಮುಂದಾದರು. ಅದ್ರಲ್ಲೂ ರೋಹಿತ್ ಶರ್ಮಾ ಪವರ್‌‌‌ಪ್ಲೇನಲ್ಲಿ ಸಾಧ್ಯವಾದಷ್ಟು ಬೇಗ ರನ್ ಕಲೆ ಹಾಕೋಕೆ ಪ್ರಯತ್ನಿಸಿದ್ರು. ಭಾರತ 30 ರನ್ ಗಳಿಸಿದ್ದಾಗ ಶುಭಮನ್ ಗಿಲ್ ಇನ್‌ಸೈಡ್‌‌‌ ಎಡ್ಜ್ ಮಾಡಿಕೊಂಡು ಬೌಲ್ಡ್ ಆದ್ರು. ವೇಗವಾಗಿ ರನ್ ಗಳಿಸುತ್ತಿದ್ದ ರೋಹಿತ್ ಶರ್ಮಾ ಸ್ವೀಪ್ ಮಾಡಲು ಹೋಗಿ 28 ರನ್‌ಗಳಿಗೆ ಔಟ್ ಆದ್ರು. ಆಗ ತಂಡದ ಮೊತ್ತ ಕೇವಲ 43 ರನ್. ಈ ವೇಳೆ ಜೊತೆಯಾದ ಚೇಸ್ ಮಾಸ್ಟರ್ ಕೊಹ್ಲಿ, ಶ್ರೇಯಸ್ ಅಯ್ಯರ್ ನಿಧಾನವಾಗಿ ತಂಡದ ಮೊತ್ತವನ್ನ ಹೆಚ್ಚಿಸಲು ಶುರು ಮಾಡಿದ್ರು. ಇಬ್ಬರೂ ಸೇರಿ ಮೂರನೇ ವಿಕೆಟ್‌ಗೆ 91 ರನ್ ಕಲೆ ಹಾಕಿ ಭಾರತಕ್ಕೆ ಉತ್ತಮ ಅಡಿಪಾಯ ಹಾಕಿದ್ರು. ಆದ್ರೆ, ಶ್ರೇಯಸ್ ಅಯ್ಯರ್ 45 ರನ್ ಗಳಿಸಿದ್ದಾಗ ಆ್ಯಡಂ ಜಂಪಾ ಬೌಲಿಂಗ್‌‌ನಲ್ಲಿ ಬೌಲ್ಡ್ ಆದ್ರು. ಇದಾದ ಬಳಿಕ ಕೊಹ್ಲಿ, ಅಕ್ಷರ್ ಪಟೇಲ್, ಕೆ.ಎಲ್.ರಾಹುಲ್ ಭಾರತ ಗುರಿ ಮುಟ್ಟಲು ನೆರವಾದರು.

ಶುಭಮನ್ ಗಿಲ್, ಜಡೇಜಾ ಹೊರತು ಪಡಿಸಿ ಭಾರತದ ಎಲ್ಲ ಬ್ಯಾಟರ್‌ಗಳು ಎರಡಂಕಿ ಮೊತ್ತ ಗಳಿಸಿದರು. ಅಕ್ಷರ್ ಪಟೇಲ್ 27 ರನ್ ಗಳಿಸಿದ್ರೆ, ಹಾರ್ದಿಕ್ ಪಾಂಡ್ಯ 24 ಎಸೆತಗಳಲ್ಲಿ 28 ರನ್ ಗಳಿಸಿ ತಂಡ ಗೆಲುವಿನ ದಡ ಸೇರುವಲ್ಲಿ ತಮ್ಮ ಪಾತ್ರ ನಿಭಾಯಿಸಿದ್ರು. ಆದ್ರೆ, ದೊಡ್ಡ ಹೊಡೆತಕ್ಕೆ ಮುಂದಾಗಿ ವಿಕೆಟ್ ಚೆಲ್ಲಿದರು. ಹಾರ್ದಿಕ್ ಬಳಿಕ ಕ್ರೀಸ್‌ಗೆ ಬಂದ ಜಡೇಜಾ ತಂಡ ಯಾವುದೇ ತೊಂದರೆ ಇಲ್ಲದೇ ಗುರಿ ಮುಟ್ಟುವಂತೆ ನೋಡಿಕೊಂಡ್ರು. ಪಂದ್ಯದ ಬಿಗ್ಗೆಸ್ಟ್ ಹೈಲೈಟ್ ಅಂದ್ರೆ ಕೆ.ಎಲ್.ರಾಹುಲ್. ಅಕ್ಷರ್ ಪಟೇಲ್ ವಿಕೆಟ್ ಪತನದ ಬಳಿಕ ಬಂದ ರಾಹುಲ್ ಫಿನಿಷರ್ ಕೆಲಸವನ್ನ ಅದ್ಭುತವಾಗಿ ನಿಭಾಯಿಸಿದ್ರು. ಕೊನೆಗೆ ಮ್ಯಾಕ್ಸ್‌‌ವೆಲ್‌‌‌‌‌‌ ಬೌಲಿಂಗ್‌‌ನಲ್ಲಿ ಸಿಕ್ಸರ್ ಬಾರಿಸೋ ಮೂಲಕ ಭಾರತ ಸುಲಭವಾಗಿ ಗುರಿ ಮುಟ್ಟಲು ನೆರವಾದರು.

ವಿಶ್ವಕಪ್ ಫೈನಲ್ ಪಂದ್ಯದ ಸೋಲಿಗೆ ಭಾರತ ಸೇಡು ತೀರಿಸಿಕೊಂಡಿದೆ. ಭಾರಿ ಜೋಷ್‌‌ನಲ್ಲಿ ಸೆಮಿ ಫೈನಲ್‌ಗೆ ಎಂಟ್ರಿ ಕೊಟ್ಟಿದ್ದ ಆಸ್ಟ್ರೇಲಿಯಾಗೆ ಮನೆ ದಾರಿ ತೋರಿಸಿದೆ. ಇದರ ಜೊತೆಗೆ ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್‌ಗಳಲ್ಲಿ ಒಂದೇ ಒಂದು ಬಾರಿಯೂ ಸೋತಿಲ್ಲ ಅನ್ನೋ ದಾಖಲೆಯನ್ನ ಭಾರತ ಮುಡಿಗೇರಿಸಿಕೊಂಡು, ಫೈನಲ್‌ಗೆ ಬರ್ತ್ ಫೈನಲ್ ಮಾಡಿಕೊಂಡಿದೆ.

 

ShareSendShareTweetShare
ಚಂದ್ರಮೋಹನ್ ಕೋಲಾರ

ಚಂದ್ರಮೋಹನ್ ಕೋಲಾರ

ಗ್ಯಾರಂಟಿ ನ್ಯೂಸ್ ಸಂಸ್ಥೆಯಲ್ಲಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಹಲವಾರು ಸುದ್ದಿವಾಹಿನಿಗಳಲ್ಲಿ ವಿವಿಧ ಹುದ್ದೆಗಳಲ್ಲಿ 13 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ಪ್ರಚಲಿತ ವಿದ್ಯಮಾನಗಳು, ವಿಜ್ಞಾನ - ತಂತ್ರಜ್ಞಾನ ರಂಗಗಳು ಇವರು ಆಸಕ್ತಿಯ ವಿಚಾರಗಳು. ಇದಲ್ಲದೆ ಇತಿಹಾಸ, ಆರ್ಥಿಕತೆ, ಬಾಹ್ಯಾಕಾಶ, ಕ್ರೀಡಾ ಸುದ್ದಿಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಮೋಟರ್ ಸ್ಪೋರ್ಟ್ ರೇಸಿಂಗ್ ವೀಕ್ಷಣೆ, ಬೈಕಿಂಗ್, ಪ್ರವಾಸ ಮಾಡುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

BeFunky collage 2026 03 08T144632.200

ನಮ್ಮ ಮೆಟ್ರೋದಲ್ಲಿ ಆಟಿಕೆ ಗನ್‌ ತೋರಿಸಿ ಪ್ರಾಂಕ್ ಮಾಡಿದ ಯುವಕ ಪೊಲೀಸ್ ವಶಕ್ಕೆ

by ಶ್ರೀದೇವಿ ಬಿ. ವೈ
March 8, 2026 - 2:51 pm
0

Untitled design 2026 03 08T141306.939

ಬಂಧಿತ ಬಾಯ್‌ಫ್ರೆಂಡ್ ಬಿಡುಗಡೆಗೆ ಡಿಮ್ಯಾಂಡ್: ಮೊಬೈಲ್ ಟವರ್ ಏರಿದ ಯುವತಿ; ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
March 8, 2026 - 2:26 pm
0

Untitled design 2026 03 08T135522.669

ಇಂದು ಭಾರತ vs ನ್ಯೂಜಿಲೆಂಡ್ ಹೈವೋಲ್ಟೇಜ್‌ ಕದನ: ಟೀಂ ಇಂಡಿಯಾಗೆ ಶುಭ ಹಾರೈಸಿದ ಆರ್‌ಸಿಬಿ

by ಶಾಲಿನಿ ಕೆ. ಡಿ
March 8, 2026 - 1:56 pm
0

ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರು ಶವವಾಗಿ ಪತ್ತೆ

ನೀರಿನ ಟ್ಯಾಂಕ್‌‌‌‌ನಲ್ಲಿ ಮೂವರು ಬಾಲಕಿಯರು ಶವವಾಗಿ ಪತ್ತೆ: ತಂದೆಯ ಮೇಲೆ ಕೊಲೆ ಶಂಕೆ

by ಶ್ರೀದೇವಿ ಬಿ. ವೈ
March 8, 2026 - 1:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 08T135522.669
    ಇಂದು ಭಾರತ vs ನ್ಯೂಜಿಲೆಂಡ್ ಹೈವೋಲ್ಟೇಜ್‌ ಕದನ: ಟೀಂ ಇಂಡಿಯಾಗೆ ಶುಭ ಹಾರೈಸಿದ ಆರ್‌ಸಿಬಿ
    March 8, 2026 | 0
  • Untitled design 2026 03 08T130535.660
    T20 World Cup final: ಭಾರತ-ನ್ಯೂಜಿಲೆಂಡ್ ಫೈನಲ್ ಪಂದ್ಯಕ್ಕೂ ಮುನ್ನ ಇಬ್ಬರ ಬಂಧನ
    March 8, 2026 | 0
  • Untitled design 2026 03 08T085642.129
    ಟಿ20 ವಿಶ್ವಕಪ್ ಫೈನಲ್: ಕಪ್‌ಗೆ ಮುತ್ತಿಕ್ಕಲು ಟೀಂ ಇಂಡಿಯಾ ಸಜ್ಜು..ಯಾರು ಚಾಂಪಿಯನ್?
    March 8, 2026 | 0
  • Untitled design 2026 03 07T231613.211
    ಭಾರತ vs ನ್ಯೂಜಿಲೆಂಡ್: ಟಿ20 ವಿಶ್ವಕಪ್ ಫೈನಲ್‌ಗೆ ವಿಶೇಷವಾಗಿ ಸಜ್ಜಾಗಿದೆ ಅಹಮದಾಬಾದ್ ಪಿಚ್
    March 7, 2026 | 0
  • Untitled design 2026 03 07T223952.296
    T20 World Cup final: ಭಾರತ-ನ್ಯೂಜಿಲೆಂಡ್ ಮುಖಾಮುಖಿ; ಮಳೆ ಬಂದರೆ ಯಾರಿಗೆ ಟ್ರೋಫಿ? ICC ನಿಯಮವೇನು?
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version