• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IND vs NZ: ಸೂರ್ಯಕುಮಾರ್‌-ಇಶಾನ್‌ ಕಿಶನ್‌ ಸ್ಫೋಟಕ ಆಟದಿಂದ ಭಾರತಕ್ಕೆ ಭರ್ಜರಿ ಜಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 23, 2026 - 11:02 pm
in Flash News, ಕ್ರೀಡೆ
0 0
0
Untitled design 2026 01 23T224833.972

ರಾಯ್ಪುರ: ಇಶಾನ್‌ ಕಿಶನ್‌ ಹಾಗೂ ಸೂರ್ಯಕುಮಾರ್‌ ಯಾದವ್‌ ಅವರ ಸ್ಪೋಟಕ ಅರ್ಧಶತಕಗಳ ಬಲದಿಂದ ಭಾರತ ತಂಡ, ನ್ಯೂಜಿಲೆಂಡ್‌ ವಿರುದ್ಧ ನಡೆದ ಎರಡನೇ ಟಿ20ಐ ಪಂದ್ಯದಲ್ಲಿ 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಟೀಮ್ ಇಂಡಿಯಾ 2–0 ಮುನ್ನಡೆಯನ್ನು ಪಡೆದುಕೊಂಡು ಸರಣಿಯನ್ನು ಬಹುತೇಕ ತನ್ನದಾಗಿಸಿಕೊಂಡಿದೆ.

ಶುಕ್ರವಾರ ಇಲ್ಲಿನ ಸಹೀದ್‌ ವೀರ್‌ ನಾರಾಯಣ್‌ ಸಿಂಗ್‌ ಅಂತರರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ, ಮೊದಲು ಬ್ಯಾಟ್‌ ಮಾಡಿದ ನ್ಯೂಜಿಲೆಂಡ್‌ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 208 ರನ್‌ ಕಲೆ ಹಾಕಿತ್ತು. ಇದಕ್ಕೆ ಪ್ರತಿಯಾಗಿ ಕಣಕ್ಕಿಳಿದ ಭಾರತ ತಂಡ, ಕೇವಲ 15.2 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 209 ರನ್‌ ಗಳಿಸಿ ಗೆಲುವಿನ ದಡ ಸೇರಿದೆ.

RelatedPosts

ಧರ್ಮಸ್ಥಳ ‘ಬುರುಡೆ’ ರಹಸ್ಯ ಕೇಸ್‌: ಬಂಗ್ಲೆಗುಡೆ ಕಾಡಿಗೆ FSL ತಂಡ ಭೇಟಿ

ನೂರಾರು ಮಹಿಳೆಯರಿಗೆ ನಾಮ ಹಾಕಿದ ಮತ್ತೊಂದು ಬ್ಲೇಡ್‌ ಕಂಪನಿ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ‘ಚಾಲೆಂಜರ್ 2026’ ಭರ್ಜರಿ ತಾಲೀಮು

ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಹ*ತ್ಯೆ

ADVERTISEMENT
ADVERTISEMENT
ಆರಂಭದಲ್ಲೇ ಆಘಾತ

209 ರನ್‌ಗಳ ಭಾರೀ ಗುರಿ ಬೆನ್ನಟ್ಟಿದ ಭಾರತ ತಂಡಕ್ಕೆ ಆರಂಭದಲ್ಲಿ ಆಘಾತ ಎದುರಾಯಿತು. ಕೇವಲ 6 ರನ್‌ಗಳಾಗುವಷ್ಟರಲ್ಲಿ ಸಂಜು ಸ್ಯಾಮ್ಸನ್‌ ಹಾಗೂ ಅಭಿಷೇಕ್‌ ಶರ್ಮಾ ವಿಕೆಟ್‌ ಕಳೆದುಕೊಳ್ಳುವ ಮೂಲಕ ತಂಡ ಒತ್ತಡಕ್ಕೆ ಸಿಲುಕಿತ್ತು. ಆದರೆ, ಮೂರನೇ ವಿಕೆಟ್‌ಗೆ ಜತೆಯಾಗಿದ್ದ ಇಶಾನ್‌ ಕಿಶನ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಜೋಡಿ ಅಬ್ಬರದ ಬ್ಯಾಟಿಂಗ್‌ ಮೂಲಕ ಪಂದ್ಯವನ್ನು ಗೆಲುವಿನತ್ತ ತಿರುಗಿಸಿತ್ತು.

ಇವರು ಕೇವಲ 48 ಎಸೆತಗಳಲ್ಲಿ 122 ರನ್‌ಗಳ ಅಪ್ರತಿಮ ಜೊತೆಯಾಟ ದಾಖಲಿಸಿ, ಕಿವೀಸ್‌ ಬೌಲರ್‌ಗಳಿಗೆ ಬೆವರಿಳಿಸಿದರು. ಮೈದಾನದ ಎಲ್ಲ ದಿಕ್ಕುಗಳಿಗೆ ಚೆಂಡನ್ನು ಹಾರಿಸಿದ ಇವರ ಬ್ಯಾಟಿಂಗ್‌ ಪ್ರದರ್ಶನ, ಕ್ರಿಕೆಟ್‌ ಅಭಿಮಾನಿಗಳಿಗೆ ರಸದೌತಣ ನೀಡಿತ್ತು.

ಕಳೆದ ಪಂದ್ಯದಲ್ಲಿ ವಿಫಲಗೊಂಡಿದ್ದ ಇಶಾನ್‌ ಕಿಶನ್‌, ಈ ಬಾರಿ ಅದ್ಭುತ ಪ್ರತಿಕ್ರಿಯೆ ನೀಡಿದರು. ಅವರು ಕೇವಲ 32 ಎಸೆತಗಳಲ್ಲಿ 4 ಸಿಕ್ಸರ್‌ ಹಾಗೂ 11 ಬೌಂಡರಿಗಳ ನೆರವಿನಿಂದ 76 ರನ್‌ಗಳ ಸ್ಪೋಟಕ ಇನಿಂಗ್ಸ್‌ ಆಡಿದರು. ಅವರ ಧೈರ್ಯಶಾಲಿ ಶಾಟ್‌ಗಳು ಕಿವೀಸ್‌ ಬೌಲರ್‌ಗಳ ಆತ್ಮವಿಶ್ವಾಸವನ್ನೇ ಕುಗ್ಗಿಸಿದವು. ಈ ಶ್ರೇಷ್ಠ ಪ್ರದರ್ಶನಕ್ಕಾಗಿ ಇಶಾನ್‌ ಕಿಶನ್‌ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿತು.

ಸಾಲು ಸಾಲು ವೈಫಲ್ಯಗಳಿಂದ ಬಳಲುತ್ತಿದ್ದ ಸೂರ್ಯಕುಮಾರ್‌ ಯಾದವ್‌, ಈ ಪಂದ್ಯದಲ್ಲಿ ತಮ್ಮ ಹಳೆಯ ಲಯವನ್ನು ಮರಳಿ ಕಂಡುಕೊಂಡರು. ಅವರು 37 ಎಸೆತಗಳಲ್ಲಿ 4 ಸಿಕ್ಸರ್‌ ಮತ್ತು 9 ಬೌಂಡರಿಗಳೊಂದಿಗೆ ಅಜೇಯ 82 ರನ್‌ಗಳ ಅದ್ಭುತ ಇನಿಂಗ್ಸ್‌ ಆಡಿದರು. ಸೂರ್ಯ ಅವರ ಇನಿಂಗ್ಸ್‌ನಲ್ಲಿ ಕಂಡುಬಂದ ಶಾಟ್‌ಗಳು ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ಗಳಿಸಿತು.

ನಾಲ್ಕನೇ ವಿಕೆಟ್‌ಗೆ ಶಿವಂ ದುಬೆ ಅವರೊಂದಿಗೆ 81 ರನ್‌ಗಳ ಜೊತೆಯಾಟ ನಡೆಸಿದ ಸೂರ್ಯ, ತಂಡವನ್ನು ಸುಲಭವಾಗಿ ಗೆಲುವಿನ ಗುರಿಯತ್ತ ಕೊಂಡೊಯ್ದರು. ಶಿವಂ ದುಬೆ 18 ಎಸೆತಗಳಲ್ಲಿ ಅಜೇಯ 36 ರನ್‌ ಸಿಡಿಸಿ, ತಂಡದ ಗೆಲುವಿಗೆ ಮೆರಗು ನೀಡಿದರು.

ನ್ಯೂಜಿಲೆಂಡ್‌ – 208 ರನ್‌ಗಳ ಸವಾಲಿನ ಮೊತ್ತ

ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ನ್ಯೂಜಿಲೆಂಡ್‌ ತಂಡ ಉತ್ತಮ ಆರಂಭ ಪಡೆದುಕೊಂಡಿತು. ಡೆವೋನ್‌ ಕಾನ್ವೆ (19) ಹಾಗೂ ಟಿಮ್‌ ಸೀಫರ್ಟ್‌ (24) ಜೋಡಿ ಮೊದಲ ವಿಕೆಟ್‌ಗೆ 43 ರನ್‌ಗಳ ಜೊತೆಯಾಟ ನೀಡಿತ್ತು. ಆದರೆ, ಇವರಿಬ್ಬರೂ ದೊಡ್ಡ ಇನಿಂಗ್ಸ್‌ ಆಡಲು ವಿಫಲರಾದರು.

ಮಧ್ಯಮ ಕ್ರಮಾಂಕದಲ್ಲಿ ಗ್ಲೆನ್‌ ಫಿಲಿಪ್ಸ್‌ (19), ಡ್ಯಾರಿಲ್‌ ಮಿಚೆಲ್‌ (18) ಹಾಗೂ ಮಾರ್ಕ್‌ ಚಾಪ್ಮನ್‌ (10) ಹೆಚ್ಚಿನ ಕೊಡುಗೆ ನೀಡಲಿಲ್ಲ. ಆದರೆ, ರಚಿನ್‌ ರವೀಂದ್ರ 26 ಎಸೆತಗಳಲ್ಲಿ 44 ರನ್‌ಗಳ ಸ್ಪೋಟಕ ಆಟವಾಡಿ ತಂಡದ ಮೊತ್ತವನ್ನು ಹೆಚ್ಚಿಸಿದರು.

ಕೊನೆಯಲ್ಲಿ ಮಿಚೆಲ್‌ ಸ್ಯಾಂಟ್ನರ್‌ ಡೆತ್‌ ಓವರ್‌ಗಳಲ್ಲಿ ಅಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿ, 27 ಎಸೆತಗಳಲ್ಲಿ ಅಜೇಯ 47 ರನ್‌ ಗಳಿಸಿದರು. ಝ್ಯಾಕರಿ ಫೌಕ್ಸ್‌ 15 ರನ್‌ಗಳ ನೆರವು ನೀಡಿದರು.

ಭಾರತದ ಪರ ಕುಲ್ದೀಪ್‌ ಯಾದವ್‌ 2 ವಿಕೆಟ್‌ ಕಿತ್ತರೆ, ಹರ್ಷಿತ್‌ ರಾಣಾ, ಹಾರ್ದಿಕ್‌ ಪಾಂಡ್ಯ, ವರುಣ್‌ ಚಕ್ರವರ್ತಿ ಹಾಗೂ ಶಿವಂ ದುಬೆ ತಲಾ ಒಂದು ವಿಕೆಟ್‌ ಪಡೆದುಕೊಂಡರು.

ಈ ಭರ್ಜರಿ ಜಯದೊಂದಿಗೆ ಭಾರತ ತಂಡ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ 2–0 ಮುನ್ನಡೆ ಸಾಧಿಸಿದ್ದು, ಸರಣಿ ಗೆಲುವನ್ನು ಬಹುತೇಕ ಖಚಿತಪಡಿಸಿಕೊಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 21T170231.626

ಧರ್ಮಸ್ಥಳ ‘ಬುರುಡೆ’ ರಹಸ್ಯ ಕೇಸ್‌: ಬಂಗ್ಲೆಗುಡೆ ಕಾಡಿಗೆ FSL ತಂಡ ಭೇಟಿ

by ಶಾಲಿನಿ ಕೆ. ಡಿ
May 21, 2026 - 5:04 pm
0

Untitled design 2026 05 21T164221.553

ನೂರಾರು ಮಹಿಳೆಯರಿಗೆ ನಾಮ ಹಾಕಿದ ಮತ್ತೊಂದು ಬ್ಲೇಡ್‌ ಕಂಪನಿ

by ಶಾಲಿನಿ ಕೆ. ಡಿ
May 21, 2026 - 4:43 pm
0

Untitled design 2026 05 21T161408.898

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ‘ಚಾಲೆಂಜರ್ 2026’ ಭರ್ಜರಿ ತಾಲೀಮು

by ಶಾಲಿನಿ ಕೆ. ಡಿ
May 21, 2026 - 3:58 pm
0

Untitled design 2026 05 21T154926.389

ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಹ*ತ್ಯೆ

by ಶಾಲಿನಿ ಕೆ. ಡಿ
May 21, 2026 - 3:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 21T170231.626
    ಧರ್ಮಸ್ಥಳ ‘ಬುರುಡೆ’ ರಹಸ್ಯ ಕೇಸ್‌: ಬಂಗ್ಲೆಗುಡೆ ಕಾಡಿಗೆ FSL ತಂಡ ಭೇಟಿ
    May 21, 2026 | 0
  • Untitled design 2026 05 21T164221.553
    ನೂರಾರು ಮಹಿಳೆಯರಿಗೆ ನಾಮ ಹಾಕಿದ ಮತ್ತೊಂದು ಬ್ಲೇಡ್‌ ಕಂಪನಿ
    May 21, 2026 | 0
  • Untitled design 2026 05 21T161408.898
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ‘ಚಾಲೆಂಜರ್ 2026’ ಭರ್ಜರಿ ತಾಲೀಮು
    May 21, 2026 | 0
  • Untitled design 2026 05 21T154926.389
    ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಹ*ತ್ಯೆ
    May 21, 2026 | 0
  • BeFunky collage (62)
    ಕರ್ನಾಟಕದಲ್ಲಿ ಮಳೆಯ ಅಬ್ಬರ: ಮುಂದಿನ 2 ದಿನಗಳಲ್ಲಿ ಭಾರಿ ಮಳೆ, ಬೆಂಗಳೂರಿಗೆ ಬಿಗ್ ಅಲರ್ಟ್
    May 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version