ನವದೆಹಲಿ: ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯ ಫೈನಲ್ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ತಂಡದ ಅದ್ಭುತ ವಿಜಯವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಈ ಗೆಲುವನ್ನು ಅವರು ‘ಆಪರೇಷನ್ ಸಿಂದೂರ್’ನೊಂದಿಗೆ ಹೋಲಿಸಿ, ಮೈದಾನದಲ್ಲಿ ಕೂಡ ಭಾರತದ ಆಧಿಪತ್ಯವನ್ನು ಸಾಬೀತುಪಡಿಸಿದ್ದಾರೆ.
ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಸೇರಿದಂತೆ ಅಮಾಯಕ ಜೀವಗಳನ್ನು ಬಲಿಪಡೆದ ಘಟನೆಗೆ ಪ್ರತಿಕ್ರಿಯೆಯಾಗಿ ಭಾರತೀಯ ಸೇನೆಯು ನಡೆಸಿದ ‘ಆಪರೇಷನ್ ಸಿಂದೂರ್’ ಒಂದು ಯಶಸ್ವಿ ಕಾರ್ಯಾಚರಣೆಯಾಗಿತ್ತು. ಇದರಲ್ಲಿ ಭಯೋತ್ಪಾದಕರನ್ನು ಸಂಪೂರ್ಣವಾಗಿ ನಿಗ್ರಹಿಸಲಾಯಿತು. ಇದೇ ರೀತಿಯಲ್ಲಿ ಕ್ರಿಕೆಟ್ ಮೈದಾನದಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ಗೆಲುವನ್ನು ಮೋದಿ ಹೋಲಿಸಿದ್ದಾರೆ.
“ಆಪರೇಷನ್ ಸಿಂದೂರ್ನಲ್ಲಿ ಮೈದಾನದ ಆಟದಲ್ಲೂ ಆಪರೇಷನ್ ಸಿಂದೂರ್. ಫಲಿತಾಂಶ ಒಂದೇ – ಭಾರತ ಗೆದ್ದಿತು! ನಮ್ಮ ಕ್ರಿಕೆಟಿಗರಿಗೆ ಅಭಿನಂದನೆಗಳು” ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್ (ಹಿಂದೆ ಟ್ವಿಟರ್) ಖಾತೆಯಲ್ಲಿ ತಡರಾತ್ರಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
#OperationSindoor on the games field.
Outcome is the same – India wins!
Congrats to our cricketers.
— Narendra Modi (@narendramodi) September 28, 2025
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಐದು ವಿಕೆಟ್ಗಳಿಂದ ಸೋಲಿಸಿತ್ತು. ಈ ಮೂಲಕ 2025ರ ಏಷ್ಯಾ ಕಪ್ ಪ್ರಶಸ್ತಿಯನ್ನು ಎತ್ತಿಹಿಡಿದ ಮೆನ್ ಇನ್ ಬ್ಲೂ ತಂಡ ತನ್ನ ಒಂಬತ್ತನೇ ಟ್ರೋಫಿಯನ್ನು ಗಳಿಸಿತ್ತು. ಪಂದ್ಯಾವಳಿಯುದ್ದಕ್ಕೂ ಭಾರತ ಅಜೇಯವಾಗಿ ಉಳಿದು, ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿತ್ತು. ಪಾಕಿಸ್ತಾನದ ವಿರುದ್ಧ ಈ ಪಂದ್ಯಾವಳಿಯಲ್ಲಿ ಮೂರು ಬಾರಿ ಮುಖಾಮುಖಿಯಾಗಿ ಮೂರೂ ಬಾರಿ ಗೆದ್ದ ಭಾರತ, ತನ್ನ ಎದುರಾಳಿಗಳ ಮೇಲೆ ಸಂಪೂರ್ಣ ಆಧಿಪತ್ಯ ಸಾಧಿಸಿತು.
My heartiest congratulations to Team India for winning the Asia Cup cricket tournament. The team did not lose any match in the tournament, marking its dominance in the game. I wish Team India sustained glory in the future.
— President of India (@rashtrapatibhvn) September 28, 2025
ಈ ವಿಜಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಅಭಿನಂದನೆ ಸಲ್ಲಿಸಿದ್ದಾರೆ. “ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಗೆದ್ದಿದ್ದಕ್ಕಾಗಿ ಟೀಮ್ ಇಂಡಿಯಾಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ತಂಡವು ಪಂದ್ಯಾವಳಿಯಲ್ಲಿ ಯಾವುದೇ ಪಂದ್ಯವನ್ನು ಸೋತಿಲ್ಲ, ಇದು ಆಟದಲ್ಲಿ ತನ್ನ ಪ್ರಾಬಲ್ಯವನ್ನು ಗುರುತಿಸುತ್ತದೆ. ಭವಿಷ್ಯದಲ್ಲಿ ಟೀಮ್ ಇಂಡಿಯಾ ವೈಭವವನ್ನು ಉಳಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.
A phenomenal victory. The fierce energy of our boys blew up the rivals again.
Bharat is destined to win no matter which field.
— Amit Shah (@AmitShah) September 28, 2025
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಈ ಗೆಲುವನ್ನು ಕೊಂಡಾಡಿದ್ದಾರೆ. “ಒಂದು ಅದ್ಭುತ ಗೆಲುವು. ನಮ್ಮ ಹುಡುಗರ ಉಗ್ರ ಶಕ್ತಿಯು ಮತ್ತೆ ಎದುರಾಳಿಗಳನ್ನು ಸ್ಪೋಟಿಸಿತು. ಭಾರತವು ಯಾವುದೇ ಕ್ಷೇತ್ರದಲ್ಲಿ ಗೆಲ್ಲಲೇಬೇಕು” ಎಂದು ಅವರು ಎಕ್ಸ್ನಲ್ಲಿ ಬರೆದಿದ್ದಾರೆ.