ಬೆಂಗಳೂರು: ಇದೇ ಜೂನ್ 26 ಮತ್ತು 28 ರಂದು ನಡೆಯಲಿರುವ ಐರ್ಲೆಂಡ್ (Ireland) ಎದುರಿನ ಎರಡು ಪಂದ್ಯಗಳ ಟಿ20 ಸರಣಿ ಹಾಗೂ ಇಂಗ್ಲೆಂಡ್ (England) ಎದುರಿನ ಮೂರು ಪಂದ್ಯಗಳ ಟಿ20 ಸರಣಿಗೆ ಬಲಿಷ್ಠ ಭಾರತ ತಂಡ (Team India) ಪ್ರಕಟವಾಗಿದೆ. ಬಿಸಿಸಿಐ (BCCI) ಈ ಮಹತ್ವದ ಘೋಷಣೆ ಮಾಡಿದ್ದು, ಶ್ರೇಯಸ್ ಅಯ್ಯರ್ (Shreyas Iyer) ಅವರಿಗೆ ನಾಯಕತ್ವದ ಪಟ್ಟ ಕಟ್ಟಲಾಗಿದೆ.
ಇನ್ನೊಂದು ದೊಡ್ಡ ಬೆಳವಣಿಗೆಯಲ್ಲಿ, ಹಿಂದಿನ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಈ ಸರಣಿಗೆ ಆಯ್ಕೆ ಮಾಡಲಾಗಿಲ್ಲ. ನಿರಂತರ ಫಾರ್ಮ್ ಸಮಸ್ಯೆ ಹಾಗೂ ತಂಡದ ಪುನರ್ ನಿರ್ಮಾಣದ ಹಿನ್ನಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ಹೇಳುತ್ತಿವೆ.
ಹೊಸ ನಾಯಕತ್ವದ ಹೊಣೆ ಶ್ರೇಯಸ್ ಅಯ್ಯರ್ಗೆ
ಮುಂಬೈ ಮೂಲದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಈಗ ಭಾರತ ಟಿ20 ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಐಪಿಎಲ್ನಲ್ಲಿ ತಮ್ಮ ನಾಯಕತ್ವದ ಸಾಮರ್ಥ್ಯವನ್ನು ಹಲವು ಬಾರಿ ಸಾಬೀತುಪಡಿಸಿರುವ ಅವರು, ಈಗ ರಾಷ್ಟ್ರೀಯ ತಂಡವನ್ನು ಹೊಸ ದಿಕ್ಕಿಗೆ ಕೊಂಡೊಯ್ಯುವ ಜವಾಬ್ದಾರಿಯನ್ನು ಪಡೆದಿದ್ದಾರೆ.
Presenting #TeamIndia‘s newest T20I captain 🇮🇳
Congratulations to Shreyas Iyer as he takes the helm in the shortest format of the game 👏@ShreyasIyer15 pic.twitter.com/frfAXAOkTA
— BCCI (@BCCI) June 6, 2026
ಉಪನಾಯಕನಾಗಿ ತಿಲಕ್ ವರ್ಮಾ
ಯುವ ಬ್ಯಾಟರ್ ತಿಲಕ್ ವರ್ಮಾ ಅವರನ್ನು ಉಪನಾಯಕನಾಗಿ ನೇಮಿಸಲಾಗಿದೆ. ಐಪಿಎಲ್ನಲ್ಲಿ ತಮ್ಮ ಸ್ಥಿರ ಪ್ರದರ್ಶನದಿಂದ ಗಮನ ಸೆಳೆದಿರುವ ಅವರು, ಮಧ್ಯಮ ಕ್ರಮಾಂಕದಲ್ಲಿ ಭಾರತದ ಭವಿಷ್ಯದ ಭರವಸೆಯ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ.
Presenting #TeamIndia‘s T20I squads for the tours of England & Ireland 2026 🇮🇳#ENGvIND | #IREvIND pic.twitter.com/f84kSSAIDf
— BCCI (@BCCI) June 6, 2026
ಐಪಿಎಲ್ ಸ್ಟಾರ್ಸ್ಗೆ ರಾಷ್ಟ್ರೀಯ ತಂಡದಲ್ಲಿ ಅವಕಾಶ
ಈ ಸರಣಿಯ ಅತ್ಯಂತ ಗಮನ ಸೆಳೆಯುವ ವಿಷಯವೆಂದರೆ ಯುವ ಆಟಗಾರರ ಸೇರ್ಪಡೆಯಾಗಿದ್ದಾರೆ. ಐಪಿಎಲ್ನಲ್ಲಿ ಮಿಂಚಿದ್ದ ವೈಭವ್ ಸೂರ್ಯವಂಶಿಗೆ ಮೊದಲ ಬಾರಿಗೆ ಸೀನಿಯರ್ ತಂಡದಲ್ಲಿ ಸ್ಥಾನ ಸಿಕ್ಕಿದೆ. ಅವರು ಆಡಿದರೆ, ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪ್ರವೇಶಿಸಿದ ಅತ್ಯಂತ ಕಿರಿಯ ಆಟಗಾರರಲ್ಲಿ ಒಬ್ಬರಾಗುವ ಸಾಧ್ಯತೆ ಇದೆ.
ತಂಡದಲ್ಲಿ ಅನುಭವೀ ಆಟಗಾರರಾದ ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಅರ್ಶದೀಪ್ ಸಿಂಗ್ ಸೇರಿದಂತೆ ಪ್ರಮುಖ ಆಟಗಾರರು ಸ್ಥಾನ ಪಡೆದಿದ್ದಾರೆ. ಇದರೊಂದಿಗೆ ತಂಡವು ಸಮತೋಲನದೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಇದೆ.
ಬೌಲಿಂಗ್ ವಿಭಾಗದಲ್ಲಿ ಯುವ ವೇಗಿಗಳು ಹಾಗೂ ಸ್ಪಿನ್ ವಿಭಾಗದಲ್ಲಿ ಸ್ಥಿರ ಪ್ರದರ್ಶನ ನೀಡುವ ಆಟಗಾರರ ಮಿಶ್ರಣವಿದೆ. ಇದು ಇಂಗ್ಲೆಂಡ್ನಂತಹ ಬಲಿಷ್ಠ ತಂಡದ ವಿರುದ್ಧ ಪ್ರಮುಖ ಅಸ್ತ್ರವಾಗಬಹುದು.
ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಈ ಸರಣಿಯನ್ನು ಭಾರತ ತಂಡದ ಭವಿಷ್ಯದ ಪರೀಕ್ಷಾ ಮೈದಾನವಾಗಿ ನೋಡಲಾಗುತ್ತಿದೆ. ಹೊಸ ನಾಯಕತ್ವ, ಯುವ ಆಟಗಾರರ ಪರೀಕ್ಷೆ ಹಾಗೂ ತಂತ್ರಜ್ಞಾನದ ಬದಲಾವಣೆಗಳು ಈ ಸರಣಿಯಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆ ಇದೆ.
