• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, January 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಭಾರತಕ್ಕೆ ಭಾನುವಾರ ಬ್ಯಾಡ್‌‌ಲಕ್‌‌‌‌..!

ಭಾನುವಾರದ ಭೂತಕ್ಕೆ ತೆರೆ ಎಳೆಯಲಿದೆಯಾ ಟೀಂ ಇಂಡಿಯಾ..? : ಯಾವಾಗೆಲ್ಲಾ ಸೋತಿದೆ ಗೊತ್ತಾ..?

ಚಂದ್ರಮೋಹನ್ ಕೋಲಾರ by ಚಂದ್ರಮೋಹನ್ ಕೋಲಾರ
March 8, 2025 - 6:46 pm
in ಕ್ರೀಡೆ
0 0
0
Befunky collage 2025 03 08t183759.473

ಟೀಂ ಇಂಡಿಯಾ ಐಸಿಸಿ ನಡೆಸುವ ಟೂರ್ನಿಗಳಲ್ಲಿ ಭಾನುವಾರ ಫೈನಲ್ ನಡೆದರೆ ಹಲವಾರು ಬಾರಿ ಸೋತಿದೆ. ಇದುವರೆಗೆ ಒಂದೇ ಒಂದು ಬಾರಿ ಭಾನುವಾರ ನಡೆದ ಫೈನಲ್‌‌ನಲ್ಲಿ ಗೆದ್ದಿದೆ. ಆದರೆ, ಅದು ಕೂಡ ಭಾನುವಾರ ಶುರುವಾಗಿ ಭಾರಿ ಮಳೆಯಿಂದ ಸೋಮವಾರಕ್ಕೆ ಮುಂದೂಡಿಕೆಯಾಗಿತ್ತು. 2000ನೇ ವರ್ಷದಲ್ಲಿ ನಡೆದಿದ್ದ ಚಾಂಪಿಯನ್ಸ್ ಟ್ರೋಫಿ ಫೈನಲ್ ಕೂಡ ಭಾನುವಾರ ನಡೆದಿತ್ತು. ಇದೇ ನ್ಯೂಜಿಲೆಂಡ್ ತಂಡ ಎದುರಾಳಿಯಾಗಿತ್ತು. ಆ ಪಂದ್ಯದಲ್ಲಿ ಭಾರತ ಸೋತಿತ್ತು.

ಇದೇ ರೀತಿ 2003, 2023ರ ವರ್ಲ್ಡ್ ಕಪ್ ಫೈನಲ್ ಕೂಡ ಭಾನುವಾರ ನಡೆದಿತ್ತು. ಆಗಲೂ ಭಾರತ ಸೋತಿತ್ತು. ಎರಡೂ ಬಾರಿ ಆಸ್ಟ್ರೇಲಿಯಾ ಭಾರತಕ್ಕೆ ಎದುರಾಳಿಯಾಗಿತ್ತು. 2014ರ ಟಿ-20 ವಿಶ್ವಕಪ್, 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಕೂಡ ಭಾನುವಾರ ಇತ್ತು. ಆಗಲೂ ಭಾರತ ಸೋತಿತ್ತು. ಹೀಗಾಗಿ ಈ ಬಾರಿಯಾದರೂ ಭಾರತ ಭಾನುವಾರದ ಕಂಟಕವನ್ನು ಕಳೆದುಕೊಳ್ಳಲಿದೆಯಾ ಎಂಬ ಪ್ರಶ್ನೆ ಉಳಿದು ಕೊಂಡಿದೆ.

RelatedPosts

IND vs NZ: ಅಭಿ-ಸೂರ್ಯ ಸಿಡಿಲಬ್ಬರದ ಅರ್ಧಶತಕ, ಟಿ20 ಸರಣಿ ಜಯಿಸಿದ ಟೀಂ ಇಂಡಿಯಾ!

ಪದ್ಮ ಪ್ರಶಸ್ತಿ 2026: ರೋಹಿತ್ ಶರ್ಮಾ ಮತ್ತು ಹರ್ಮನ್‌ಪ್ರೀತ್ ಸೇರಿ 9 ಕ್ರೀಡಾ ಸಾಧಕರಿಗೆ ಪದ್ಮ ಪ್ರಶಸ್ತಿ

ಸ್ಮೃತಿ ಮಂಧಾನ ಸ್ನೇಹಿತನ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಿದ ಪಲಾಶ್ ಮುಚ್ಚಲ್

ಭಾರತ vs ನ್ಯೂಜಿಲೆಂಡ್ 3ನೇ ಟಿ20: ಸರಣಿ ಗೆಲ್ಲುವ ಛಲದಲ್ಲಿ ಟೀಮ್‌ ಇಂಡಿಯಾ

ADVERTISEMENT
ADVERTISEMENT

ಮಾರ್ಚ್ 9, 2025. ಭಾನುವಾರ. ಟೀಂ ಇಂಡಿಯಾ ಅಭಿಮಾನಿಗಳು ಸೇರಿ ಭಾರತೀಯರೆಲ್ಲರೂ ಈ ದಿನಕ್ಕಾಗಿ ಕಾದು ಕುಳಿತಿದ್ದಾರೆ. ಏಕೆಂದರೆ, ಭಾನುವಾರ ಚಾಂಪಿಯನ್ಸ್ ಟ್ರೋಫಿ ಫೈನಲ್ ನಡೆಯಲಿದೆ. ಈ ಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಟ್ರೋಫಿ ಮುಡಿಗೇರಿಸಿಕೊಳ್ಳಲು ಸೆಣಸಾಡಲಿವೆ. ಟೀಂ ಇಂಡಿಯಾ ಮೇಲೆ ಗೆಲ್ಲಲೇಬೇಕಾದ ಒತ್ತಡ ಇದೆ.

1200 675 19432406 thumbnail 16x9 img

ಟ್ವೆಂಟಿ ಟ್ವೆಂಟಿಯಲ್ಲಿ ವಿಶ್ವಕಪ್ ಮುಡಿಗೇರಿಸಿಕೊಂಡಿರುವ ಭಾರತ, ಮತ್ತೊಂದು ಐಸಿಸಿ ಟ್ರೋಫಿಯನ್ನು ಮಡಿಲಿಗೆ ಹಾಕಿಕೊಳ್ಳಲು ತಯಾರಾಗಿದೆ. ಹೀಗೆಂದು ಎದುರಾಳಿಯಾಗಿರುವ ನ್ಯೂಜಿಲೆಂಡ್ ತಂಡ ಸಾಮಾನ್ಯ ತಂಡವೇನು ಅಲ್ಲ. ಕೇನ್ ವಿಲಿಯಮ್ಸನ್, ಡಿವೋನ್ ಕಾನ್ವೆ, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಫ್ಸ್, ರಾಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಟಾಮ್ ಲಾಥಮ್ ಸೇರಿದಂತೆ ಘಟಾನುಘಟಿ ಆಟಗಾರರೇ ಇದ್ದಾರೆ.

ಒಂದೆಡೆ ನ್ಯೂಜಿಲೆಂಡ್ನ ಘಟಾನುಘಟಿ ಆಟಗಾರರನ್ನು ಎದುರಿಸಬೇಕಾದ ಒತ್ತಡದಲ್ಲಿರುವ ಭಾರತಕ್ಕೆ.. ಇನ್ನೊಂದು ಭೂತ ಎದುರಾಗಿದೆ. ಐಸಿಸಿ ನಡೆಸುವ ಟೂರ್ನಿಗಳಲ್ಲಿ ಭಾರತ ಭಾನುವಾರ ನಡೆದಿರುವ ಫೈನಲ್ಗಳಲ್ಲಿ ಇದುವರೆಗೆ ಒಂದು ಬಾರಿಯೂ ಗೆದ್ದಿಲ್ಲ. ಭಾನುವಾರ ನಡೆದಿರುವ ಎಲ್ಲ ಫೈನಲ್ ಪಂದ್ಯಗಳಲ್ಲಿ ಭಾರತ ಸೋತು ಸುಣ್ಣವಾಗಿದೆ. ಭಾರತ ಮೊದಲ ಬಾರಿ 1983ರಲ್ಲಿ ವಿಶ್ವಕಪ್‌ ಗೆದ್ದು, ಐಸಿಸಿ ನಡೆಸುವ ಟೂರ್ನಿಯ ಮೊದಲ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಆಗ ಶನಿವಾರದಂದು ಫೈನಲ್ ನಡೆದಿತ್ತು. ಇದಾದ ಬಳಿಕ 2002ರಲ್ಲಿ ಭಾರತ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಆಗ ಸೋಮವಾರದಂದು ಫೈನಲ್ ನಡೆದಿತ್ತು.

New zealand v india icc champions trophy 2025
 

2007ರಲ್ಲಿ ನಡೆದಿದ್ದ ಚೊಚ್ಚಲ ಟ್ವೆಂಟಿ ಟ್ವೆಂಟಿ ವಿಶ್ವಕಪ್ನಲ್ಲಿ ಭಾರತ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು. ಆಗಲೂ ಸಹ ಫೈನಲ್ ಪಂದ್ಯವನ್ನು ಸೋಮವಾರದಂದು ಏರ್ಪಡಿಸಲಾಗಿತ್ತು. 2011ರಲ್ಲಿ ಭಾರತ ಏಕದಿನ ವಿಶ್ವಕಪ್ ಗೆದ್ದಿದ್ದು ಶನಿವಾರದಂದು. 2024ರಲ್ಲಿ ಭಾರತ ಟ್ವೆಂಟಿ 20 ವಿಶ್ವಕಪ್ ಗೆದ್ದಿದ್ದು ಕೂಡ ಶನಿವಾರದಂದೇ ಎಂಬುದು ವಿಚಿತ್ರವಾದ್ರೂ ಸತ್ಯ.

ಭಾರತ ಇದುವರೆಗೆ ಭಾನುವಾರ ನಡೆದಿರುವ ಐಸಿಸಿ ಟೂರ್ನಿಯ ಫೈನಲ್ನಲ್ಲಿ ಒಂದೇ ಒಂದು ಬಾರಿ ಗೆದ್ದಿದೆ. ಆದರೆ, ಇದಕ್ಕೂ ಒಂದು ಟ್ವಿಸ್ಟ್ ಇದೆ. 2013ರಲ್ಲಿ ನಡೆದಿದ್ದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಭಾನುವಾರ ನಡೆದಿತ್ತು. ಈ ಪಂದ್ಯದಲ್ಲಿ ಭಾರತಕ್ಕೆ ಆತಿಥೇಯ ಇಂಗ್ಲೆಂಡ್ ಎದುರಾಳಿಯಾಗಿತ್ತು. ಈ ಪಂದ್ಯದ ಆರಂಭಕ್ಕೆ ಮಳೆರಾಯ ಅಡ್ಡಿಯಾಗಿದ್ದ. ಕೊನೆಗೆ ಏಕದಿನ ಮಾದರಿ ಬದಲು ತಲಾ 20 ಓವರ್ಗಳಿಗೆ ಪಂದ್ಯವನ್ನು ಇಳಿಸಲಾಗಿತ್ತು. ಹೀಗೆ ಪಂದ್ಯ ಆರಂಭವಾದ ಬಳಿಕ ಮತ್ತೆ ಮಳೆಯಿಂದ ಪಂದ್ಯಕ್ಕೆ ಅಡ್ಡಿಯಾಗಿತ್ತು. ಹೀಗಾಗಿ ಸೋಮವಾರ ಪಂದ್ಯವನ್ನು ಮುಂದುವರಿಸಲಾಗಿತ್ತು. ಭಾನುವಾರ ಪಂದ್ಯ ಶುರುವಾಗಿದ್ದರೂ, ಪಂದ್ಯ ಮುಗಿದಿದ್ದು ಸೋಮವಾರದಂದು. ಹೀಗಾಗಿ ಈ ಭಾನುವಾರದ ಫೈನಲ್ ಪರಿಗಣನೆಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ.

November blogs

1983ರ ಬಳಿಕ ಭಾರತ ಐಸಿಸಿ ನಡೆಸುವ ಟೂರ್ನಿಗಳಲ್ಲಿ ಮೊದಲ ಬಾರಿಗೆ 2000ನೇ ವರ್ಷದಲ್ಲಿ ಫೈನಲ್ ತಲುಪಿತ್ತು. ಆಗ ಕೂಡ ಭಾನುವಾರ ಫೈನಲ್ ಪಂದ್ಯ ನಡೆದಿತ್ತು. ಆಗ ಎದುರಾಳಿಯಾಗಿದ್ದದ್ದು ಕೂಡ ಇದೇ ನ್ಯೂಜಿಲೆಂಡ್. ಮ್ಯಾಚ್ ಫಿಕ್ಸಿಂಗ್ ಹಗರಣ ಬಯಲಾಗಿ ಭಾರತೀಯ ಕ್ರಿಕೆಟ್ಗೆ ಕಳಂಕ ಮೆತ್ತಿಕೊಂಡಿದ್ದ ಕಾಲದಲ್ಲಿ ತಂಡದ ಚುಕ್ಕಾಣಿ ಹಿಡಿದಿದ್ದ ಸೌರವ್ ಗಂಗೂಲಿ ತಂಡಕ್ಕೆ ಹೊಸ ರೂಪ ಕೊಟ್ಟಿದ್ದರು. ಫೈನಲ್ವರೆಗೆ ಬಂದ ಭಾರತ, ನ್ಯೂಜಿಲೆಂಡ್ ಎದುರು ಸೋತು ಹೋಗಿತ್ತು. 2003ರ ವಿಶ್ವಕಪ್ ಫೈನಲ್ ಕೂಡ ಭಾನುವಾರ ನಡೆದಿತ್ತು. ಸುಮಾರು 20 ವರ್ಷಗಳ ಬಳಿಕ ಭಾರತ ಫೈನಲ್ ತಲುಪಿತ್ತು. ಆಗಲೂ ಭಾನುವಾರವೇ ಫೈನಲ್ ನಡೆದಿತ್ತು. ಆಗಲೂ ಭಾರತ ಸೋತು ಹೋಗಿತ್ತು.

2014ರಲ್ಲಿ ಭಾರತ ಎರಡನೇ ಬಾರಿಗೆ ಟ್ವೆಂಟಿ ಟ್ವೆಂಟಿ ವಿಶ್ವಕಪ್ ಫೈನಲ್ ತಲುಪಿತ್ತು. ನೆರೆಯ ದೇಶ ಶ್ರೀಲಂಕಾ ಭಾರತದ ಎದುರಾಳಿಯಾಗಿತ್ತು. ಆಗಲೂ ಭಾನುವಾರವೇ ಫೈನಲ್ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿಯೂ ಭಾರತ ಸೋತು ಹೋಗಿತ್ತು. 2017ರಲ್ಲಿ ಇಂಗ್ಲೆಂಡ್ನಲ್ಲಿ ನಡೆದಿದ್ದ ಚಾಂಪಿಯನ್ಸ್ ಟ್ರೋಫಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಫೈನಲ್ನಲ್ಲಿ ಎದುರಾಗಿತ್ತು.

Photo

ಟೂರ್ನಿಯ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಸೆಣೆಸಿ ಗೆದ್ದಿದ್ದ ಭಾರತ, ಭಾನುವಾರದಂದು ನಡೆದ ಫೈನಲ್ನಲ್ಲಿ ಹೀನಾಯವಾಗಿ ಸೋತಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನಕ್ಕೆ ಜಸ್ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ರು. ಆರಂಭಿಕ ಆಟಗಾರ ಫಖರ್ ಜಮಾನ್ ವಿಕೆಟ್ ಕಬಳಿಸಿದ್ದರು. ಆದರೆ, ಅದು ನೋಬಾಲ್ ಆಗಿತ್ತು. ತಮಗೆ ಸಿಕ್ಕ ಜೀವದಾನವನ್ನು ಬಳಸಿಕೊಂಡ ಫಖರ್ ಜಮಾನ್ ಭಾರತದ ವಿರುದ್ಧ ಅಬ್ಬರಿಸಿದ್ದರು.

ಇದಾದ ಬಳಿಕ 2023ರ ವಿಶ್ವಕಪ್ನಲ್ಲಿ ಅಜೇಯ ತಂಡವಾಗಿ ಭಾರತ ಫೈನಲ್ ಪ್ರವೇಶಿಸಿತ್ತು. ಫೈನಲ್ನಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ ಎದುರಾಳಿಯಾಗಿತ್ತು. ಅಹಮದಾಬಾದ್ನಲ್ಲಿ ಭಾನುವಾರ ಫೈನಲ್ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿಯೂ ಭಾರತ ಸೋತು, ತೀವ್ರ ನಿರಾಸೆ ಅನುಭವಿಸಿತ್ತು. ಈಗ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರೋ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಕೂಡ ಭಾನುವಾರವೇ ನಡೆಯಲಿದೆ.

ಹೀಗಾಗಿ ಭಾರತಕ್ಕೆ ಕಾಡುತ್ತಿರುವ ಭಾನುವಾರದ ಭೂತದ ವಿರುದ್ಧ ಟೀಂ ಇಂಡಿಯಾ ಗೆದ್ದು ಬೀಗಲಿದೆಯಾ ಎಂಬ ಪ್ರಶ್ನೆ ಉಳಿದುಕೊಂಡಿದೆ. ಆದರೆ, ಭಾರತಕ್ಕೆ ಒಂದೇ ಒಂದು ಗುಡ್ ನ್ಯೂಸ್ ಎಂದರೆ, 2021ರ ಬಳಿಕ ದುಬೈನಲ್ಲಿ ನಡೆದಿರುವ ಒಂದೇ ಒಂದು ಪಂದ್ಯದಲ್ಲಿಯೂ ಭಾರತ ಸೋತಿಲ್ಲ. ಒಂದು ಪಂದ್ಯ ಟೈ ಆಗಿದ್ದರೆ, ಉಳಿದೆಲ್ಲಾ ಪಂದ್ಯಗಳಲ್ಲಿ ಭಾರತ ಗೆದ್ದಿದೆ. ಹೀಗಾಗಿ ಫೈನಲ್ನಲ್ಲಿ ಯಾರು ಗೆಲ್ಲುತ್ತಾರೆ ಎಂಬ ವಿಚಾರ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಚಂದ್ರಮೋಹನ್, ಸ್ಪೆಷಲ್‌ ಬ್ಯೂರೋ, ಗ್ಯಾರಂಟಿ ನ್ಯೂಸ್.

ShareSendShareTweetShare
ಚಂದ್ರಮೋಹನ್ ಕೋಲಾರ

ಚಂದ್ರಮೋಹನ್ ಕೋಲಾರ

ಗ್ಯಾರಂಟಿ ನ್ಯೂಸ್ ಸಂಸ್ಥೆಯಲ್ಲಿ 2025ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಹಲವಾರು ಸುದ್ದಿವಾಹಿನಿಗಳಲ್ಲಿ ವಿವಿಧ ಹುದ್ದೆಗಳಲ್ಲಿ 13 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ಪ್ರಚಲಿತ ವಿದ್ಯಮಾನಗಳು, ವಿಜ್ಞಾನ - ತಂತ್ರಜ್ಞಾನ ರಂಗಗಳು ಇವರು ಆಸಕ್ತಿಯ ವಿಚಾರಗಳು. ಇದಲ್ಲದೆ ಇತಿಹಾಸ, ಆರ್ಥಿಕತೆ, ಬಾಹ್ಯಾಕಾಶ, ಕ್ರೀಡಾ ಸುದ್ದಿಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಮೋಟರ್ ಸ್ಪೋರ್ಟ್ ರೇಸಿಂಗ್ ವೀಕ್ಷಣೆ, ಬೈಕಿಂಗ್, ಪ್ರವಾಸ ಮಾಡುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 01 25T064522.591

ಜನವರಿ 26ರ ದಿನ ಭವಿಷ್ಯ: ನಿಮ್ಮ ರಾಶಿಗೆ ಇಂದು ಶುಭವೇ ಅಥವಾ ಅಶುಭವೇ ?

by ಯಶಸ್ವಿನಿ ಎಂ
January 26, 2026 - 6:42 am
0

BeFunky collage (72)

ರಾತ್ರಿಯಿಡೀ ನಿದ್ದೆ ಬರದೇ ಒದ್ದಾಡುತ್ತಿದ್ದೀರಾ? ಇದೇ ಕಾರಣಕ್ಕೆ ಇರಬಹುದು

by ಶ್ರೀದೇವಿ ಬಿ. ವೈ
January 25, 2026 - 11:24 pm
0

BeFunky collage (71)

ಈ ತರಕಾರಿಗಳನ್ನು ಸಿಪ್ಪೆ ತೆಗೆಯಬೇಡಿ ಹಾಗೆ ತಿನ್ನಿ, ಆರೋಗ್ಯದ ರಹಸ್ಯ ನೋಡಿ!

by ಶ್ರೀದೇವಿ ಬಿ. ವೈ
January 25, 2026 - 11:13 pm
0

BeFunky collage (70)

ಸ್ನೇಹಿತರೇ ರೌಡಿಶೀಟರ್ ಆಟೋ ನಾಗನ ಭೀಕರ ಮರ್ಡರ್: ಹಣದ ವಿಚಾರಕ್ಕೆ ಹರಿದ ನೆತ್ತರು

by ಶ್ರೀದೇವಿ ಬಿ. ವೈ
January 25, 2026 - 10:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (69)
    IND vs NZ: ಅಭಿ-ಸೂರ್ಯ ಸಿಡಿಲಬ್ಬರದ ಅರ್ಧಶತಕ, ಟಿ20 ಸರಣಿ ಜಯಿಸಿದ ಟೀಂ ಇಂಡಿಯಾ!
    January 25, 2026 | 0
  • Untitled design
    ಪದ್ಮ ಪ್ರಶಸ್ತಿ 2026: ರೋಹಿತ್ ಶರ್ಮಾ ಮತ್ತು ಹರ್ಮನ್‌ಪ್ರೀತ್ ಸೇರಿ 9 ಕ್ರೀಡಾ ಸಾಧಕರಿಗೆ ಪದ್ಮ ಪ್ರಶಸ್ತಿ
    January 25, 2026 | 0
  • BeFunky collage (64)
    ಸ್ಮೃತಿ ಮಂಧಾನ ಸ್ನೇಹಿತನ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಿದ ಪಲಾಶ್ ಮುಚ್ಚಲ್
    January 25, 2026 | 0
  • Untitled design 2026 01 25T094635.879
    ಭಾರತ vs ನ್ಯೂಜಿಲೆಂಡ್ 3ನೇ ಟಿ20: ಸರಣಿ ಗೆಲ್ಲುವ ಛಲದಲ್ಲಿ ಟೀಮ್‌ ಇಂಡಿಯಾ
    January 25, 2026 | 0
  • Untitled design 2026 01 24T190742.395
    ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಔಟ್: ಹೊಸದಾಗಿ ಸ್ಕಾಟ್ಲೆಂಡ್ ಎಂಟ್ರಿ
    January 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version