ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್: ವಿಡಿಯೋ ವೈರಲ್

Untitled design 2026 04 04T132210.568

ಬೆಂಗಳೂರು, ಏಪ್ರಿಲ್ 4: IPL 2026 ರೋಚಕತೆ ತಾರಕಕ್ಕೇರುತ್ತಿದೆ. ಉದ್ಘಾಟನಾ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ತನ್ನ ದ್ವಿತೀಯ ಪಂದ್ಯಕ್ಕೆ ಸಜ್ಜಾಗಿದೆ. ಭಾನುವಾರ (ಏಪ್ರಿಲ್ 5) ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬದ್ಧ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಸೆಣಸಾಟ ನಡೆಯಲಿದೆ. ಈ ಮಹತ್ವದ ಪಂದ್ಯಕ್ಕೂ ಮುನ್ನ RCB ನಾಯಕ ರಜತ್ ಪಾಟೀದಾರ್ ಮತ್ತು ಆಟಗಾರ ಜಿತೇಶ್ ಶರ್ಮ ಅವರು ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ತಿರುಪತಿಯಲ್ಲಿ ವಿಶೇಷ ಪೂಜೆ

ಉಭಯ ಆಟಗಾರರು ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು, ತಂಡದ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಅವರು ದೇವಸ್ಥಾನದಲ್ಲಿ ವಿಶೇಷ ಅರ್ಚನೆ ಮತ್ತು ಲಡ್ಡು ಪ್ರಸಾದವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ತೆಗೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಭಿಮಾನಿಗಳು ಈ ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. 

ಪಂದ್ಯದ ಮಹತ್ವ

ಸತತ ಎರಡು ಸೋಲು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಈ ಟೂರ್ನಿಯಲ್ಲಿ ಇದುವರೆಗೆ ಒಂದು ಪಂದ್ಯವನ್ನೂ ಗೆಲ್ಲದ CSK, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ ಬಲಿಷ್ಠ ಆರ್‌ಸಿಬಿ ತಂಡವನ್ನು ಸೋಲಿಸುವುದು ಅವರಿಗೆ ಸುಲಭದ ಮಾತಲ್ಲ. ಆರ್‌ಸಿಬಿ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ಸಮರ್ಥವಾಗಿದೆ. 

ಪಂದ್ಯದ ದಿನ ಸಾರಿಗೆ ವ್ಯವಸ್ಥೆ

ಕ್ರೀಡಾಭಿಮಾನಿಗಳ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ಮತ್ತು BMTC ವಿಶೇಷ ಬಸ್ ಸೇವೆಗಳನ್ನು ಕಲ್ಪಿಸಿದೆ. ಮೆಟ್ರೋ ಸೇವೆಯನ್ನು ರಾತ್ರಿ 11 ಗಂಟೆಯಿಂದ ಮುಂದಿನ ದಿನ ಮಧ್ಯರಾತ್ರಿ 2 ಗಂಟೆವರೆಗೆ ವಿಸ್ತರಿಸಲಾಗಿದೆ. ವಿವಿಧ ಮಾರ್ಗಗಳಲ್ಲಿ ಕೊನೆಯ ರೈಲುಗಳ ಸಮಯ ಈ ಕೆಳಗಿನಂತಿದೆ.

BMTC ವಿಶೇಷ ಬಸ್ ಸೇವೆಗಳು

Exit mobile version