ಆರ್‌ಸಿಬಿ ಫ್ಯಾನ್ಸ್‌ಗೆ ಗುಡ್‌ನ್ಯೂಸ್: ಚಿನ್ನಸ್ವಾಮಿಗೆ ಉಚಿತ ಎಂಟ್ರಿ, ಪಾಸ್ ಘೋಷಣೆ!

Befunky collage 2025 06 04t163047.642

ಬೆಂಗಳೂರು: ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತನ್ನ ಚೊಚ್ಚಲ ಟ್ರೋಫಿಯನ್ನು ಗೆದ್ದು ಇತಿಹಾಸ ಸೃಷ್ಟಿಸಿದೆ. ಈ ಐತಿಹಾಸಿಕ ಗೆಲುವಿನ ಸಂಭ್ರಮವನ್ನು ಆಚರಿಸಲು ಆರ್‌ಸಿಬಿ ಆಟಗಾರರಿಗೆ ಸನ್ಮಾನ ಮತ್ತು ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಇಂದು ಸಂಜೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಂಡವನ್ನು ಸನ್ಮಾನಿಸಿದ ಬಳಿಕ, ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜನೆಯಾಗಿದೆ. HAL ವಿಮಾನ ನಿಲ್ದಾಣಕ್ಕೆ ಆಗಮಿಸಿದ ಆರ್‌ಸಿಬಿ ಆಟಗಾರರನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವಾಗತಿಸಿದರು.

ಈ ವಿಜಯೋತ್ಸವದ ಹಿನ್ನೆಲೆಯಲ್ಲಿ, ಆರ್‌ಸಿಬಿ ಮ್ಯಾನೇಜ್‌ಮೆಂಟ್ ಅಭಿಮಾನಿಗಳಿಗೆ ಒಂದು ಶುಭ ಸುದ್ದಿಯನ್ನು ಘೋಷಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 6:00 ಗಂಟೆಗೆ ನಡೆಯಲಿರುವ ಕಾರ್ಯಕ್ರಮಕ್ಕೆ ಉಚಿತ ಎಂಟ್ರಿ ಪಾಸ್‌ಗಳನ್ನು ನೀಡಲಾಗುತ್ತಿದೆ. ಅಭಿಮಾನಿಗಳು ಆರ್‌ಸಿಬಿಯ ಅಧಿಕೃತ ವೆಬ್‌ಸೈಟ್ shop.royalchallengers.com ಮೂಲಕ ಈ ಪಾಸ್‌ಗಳನ್ನು ಬುಕ್ ಮಾಡಿಕೊಳ್ಳಬಹುದು. ಯಾವುದೇ ಶುಲ್ಕವಿಲ್ಲದೆ ಈ ಉಚಿತ ಪಾಸ್‌ಗಳನ್ನು ಒದಗಿಸಲಾಗುತ್ತಿದೆ ಎಂದು ಆರ್‌ಸಿಬಿ ಮ್ಯಾನೇಜ್‌ಮೆಂಟ್ ತಿಳಿಸಿದೆ.

ADVERTISEMENT
ADVERTISEMENT

ಆದರೆ, ಈ ಘೋಷಣೆಯ ನಂತರ ಚಿನ್ನಸ್ವಾಮಿ ಸ್ಟೇಡಿಯಂದ ಹೊರಗೆ ಅಭಿಮಾನಿಗಳ ದೊಡ್ಡ ಜನಸಾಗರವೇ ಜಮಾಯಿಸಿತು. ಮಧ್ಯಾಹ್ನದಿಂದಲೇ ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತು ಪಾಸ್‌ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಆರಂಭದಲ್ಲಿ ಟಿಕೆಟ್‌ಗಳ ಬಗ್ಗೆ ಸ್ಪಷ್ಟತೆ ಇರಲಿಲ್ಲ.

ಕೆಲವರು ಸ್ಟೇಡಿಯಂನ ಕಾಂಪೌಂಡ್ ಗೋಡೆಯನ್ನೇ ಹತ್ತಲು ಯತ್ನಿಸಿದರು. ಜನಸಂದಣಿ ಹೆಚ್ಚಾದಂತೆ, ಭದ್ರತಾ ಸಿಬ್ಬಂದಿ ಅಭಿಮಾನಿಗಳನ್ನು ಮನವೊಲಿಸಲು ಪ್ರಯತ್ನಿಸಿದರು. ಆರ್‌ಸಿಬಿ ಮ್ಯಾನೇಜ್‌ಮೆಂಟ್ ತಕ್ಷಣವೇ ವೆಬ್‌ಸೈಟ್ ಲಿಂಕ್ ಅನ್ನು ಅಪ್‌ಡೇಟ್ ಮಾಡಿದರೂ, ನೆಟ್‌ವರ್ಕ್ ಸಮಸ್ಯೆಯಿಂದಾಗಿ ಕೆಲವು ಅಭಿಮಾನಿಗಳು ಪಾಸ್ ಬುಕ್ ಮಾಡಲು ಪರದಾಡಿದರು. ಆರ್‌ಸಿಬಿ ತಂಡವು ಶೀಘ್ರದಲ್ಲೇ ಈ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಲಿದೆ ಎಂದು ತಿಳಿಸಿದೆ.

Exit mobile version