• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Uncategorized

ಹನೂರು ಎನ್‌ಕೌಂಟರ್‌ ಪ್ರಕರಣ: ವಿಧಾನಸಭೆಯಲ್ಲಿ ಭಾರೀ ಗದ್ದಲ, ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 17, 2026 - 1:42 pm
in Uncategorized
0 0
0
Untitled design 2026 08 17T133045.333

ಹನೂರು ಎನ್‌ಕೌಂಟರ್‌ ಪ್ರಕರಣ ಸೋಮವಾರ ಕರ್ನಾಟಕ ವಿಧಾನಸಭೆಯ ಕಲಾಪದಲ್ಲಿ ತೀವ್ರ ರಾಜಕೀಯ ಚರ್ಚೆಗೆ ಕಾರಣವಾಯಿತು. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದಲ್ಲಿ ಮೂವರು ಮೃತಪಟ್ಟ ಘಟನೆ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದರು. ಈ ವಿಚಾರವಾಗಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ತೀವ್ರ ವಾಕ್ಸಮರ ನಡೆದಿದ್ದು, ಕೆಲಕಾಲ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು.

ಕಲಾಪ ಆರಂಭದಲ್ಲೇ ಅಶೋಕ್ ಆಗ್ರಹ

ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಷಯ ಪ್ರಸ್ತಾಪಿಸಿದ ಆರ್. ಅಶೋಕ್, “ಮೂವರು ಮೃತಪಟ್ಟಿರುವ ಗಂಭೀರ ಘಟನೆ ನಡೆದಿದೆ. ಸರ್ಕಾರ ಸದನಕ್ಕೆ ಸಂಪೂರ್ಣ ಮಾಹಿತಿ ನೀಡಬೇಕು” ಎಂದು ಒತ್ತಾಯಿಸಿದರು.

RelatedPosts

ಕಾಮನ್‌ವೆಲ್ತ್‌ನಲ್ಲಿ ಭಾರತಕ್ಕೆ ಪದಕಗಳ ಮಳೆ: ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ-ಕಂಚು

ರಿಷಬ್ ಶೆಟ್ಟಿ ಮೆಗಾ ಪ್ಯಾನ್ ಇಂಡಿಯಾ ಸಿನಿಮಾ ಡ್ರಾಪ್..?

ಟ್ರಂಪ್‌ ಸುಂಕ ಸಮರ: ಭಾರತ ಸೇರಿ 60 ದೇಶಗಳಿಗೆ ಹೊಸ ತೆರಿಗೆ!

ನೀಟ್ ಹಗರಣ: ವಿನೀತ್ ಜೋಶಿ ವಜಾ, ಗಂಗ್ವಾರ್ ನೇಮಕ

ADVERTISEMENT
ADVERTISEMENT

ತಮಿಳುನಾಡು ಮುಖ್ಯಮಂತ್ರಿ ಕೂಡ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ತಮಿಳಿಗರ ಸುರಕ್ಷತೆ ಕುರಿತು ಪ್ರಶ್ನೆ ಎತ್ತಿರುವುದನ್ನು ಉಲ್ಲೇಖಿಸಿದ ಅವರು, ಸರ್ಕಾರ ಈ ವಿಚಾರವನ್ನು ಲಘುವಾಗಿ ಪರಿಗಣಿಸದೆ ಸ್ಪಷ್ಟ ನಿಲುವು ತಿಳಿಸಬೇಕು ಎಂದು ಹೇಳಿದರು.

ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯೆ

ವಿಪಕ್ಷದ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಮೊದಲು ಪ್ರಶ್ನೋತ್ತರ ಕಲಾಪಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ನಂತರ ನಿಯಮಾನುಸಾರ ನಿಲುವಳಿ ಸೂಚನೆ ಮೂಲಕ ಎನ್‌ಕೌಂಟರ್‌ ಪ್ರಕರಣದ ಕುರಿತು ಸುದೀರ್ಘ ಚರ್ಚೆ ನಡೆಸಬಹುದು ಎಂದು ಸಲಹೆ ನೀಡಿದರು.

ಆದರೆ ಬಿಜೆಪಿ ಶಾಸಕ ಸುನೀಲ್ ಕುಮಾರ್, “ಸರ್ಕಾರವೇ ಸ್ವಯಂಪ್ರೇರಿತವಾಗಿ ಹೇಳಿಕೆ ನೀಡುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು. ಹೇಳಿಕೆ ನೀಡದ ಕಾರಣ ನಾವೇ ವಿಷಯ ಪ್ರಸ್ತಾಪಿಸಿದ್ದೇವೆ” ಎಂದು ಸರ್ಕಾರವನ್ನು ಟೀಕಿಸಿದರು.

ಸರ್ಕಾರದಿಂದ ಅಧಿಕೃತ ಸ್ಪಷ್ಟನೆ

ವಿಪಕ್ಷದ ನಿರಂತರ ಒತ್ತಡದ ಹಿನ್ನೆಲೆಯಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸರ್ಕಾರದ ಪರವಾಗಿ ಸದನದಲ್ಲಿ ಹೇಳಿಕೆ ನೀಡಿದರು. ಹನೂರು ಎನ್‌ಕೌಂಟರ್‌ ಪ್ರಕರಣದ ಹಿನ್ನೆಲೆ, ಅರಣ್ಯ ಸಿಬ್ಬಂದಿಯ ಕಾರ್ಯಾಚರಣೆ ಹಾಗೂ ಸರ್ಕಾರದ ಪ್ರಾಥಮಿಕ ನಿಲುವನ್ನು ಅವರು ವಿವರಿಸಿದರು.

ಆದರೆ ಸಚಿವರ ಹೇಳಿಕೆಯಿಂದ ಅತೃಪ್ತರಾದ ಆರ್. ಅಶೋಕ್, “ಸಚಿವರು ಕೇವಲ ಬರೆದು ಕೊಟ್ಟ ಉತ್ತರ ಓದಿ ಮುಗಿಸಿದ್ದಾರೆ. ಮೃತಪಟ್ಟವರ ವಿರುದ್ಧ ಯಾವುದೇ ಅರಣ್ಯ ಪ್ರಕರಣಗಳಿರಲಿಲ್ಲ ಎಂದಿದ್ದರೆ, ಗುಂಡಿನ ದಾಳಿ ಹೇಗೆ ನಡೆಯಿತು? ಕುಟುಂಬಗಳಿಗೆ ಯಾವ ಪರಿಹಾರ ನೀಡಲಾಗಿದೆ?” ಎಂದು ಪ್ರಶ್ನಿಸಿದರು.

“ಇದು ಎನ್‌ಕೌಂಟರ್‌ ಅಲ್ಲ, ಕೊಲೆ”

ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಶೋಕ್, “ಇದು ಎನ್‌ಕೌಂಟರ್‌ ಅಲ್ಲ, ಕೊಲೆ” ಎಂದು ಆರೋಪಿಸಿದರು. ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಾದರೆ ಸಂಪೂರ್ಣ ದಿನದ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಕಾಂಗ್ರೆಸ್ ಸದಸ್ಯರು ಪ್ರಶ್ನೋತ್ತರ ಕಲಾಪ ಮುಂದುವರಿಸಬೇಕೆಂದು ಪಟ್ಟು ಹಿಡಿದರು. ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಮತ್ತೆ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಸಭಾಧ್ಯಕ್ಷರು ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 17T133045.333

ಹನೂರು ಎನ್‌ಕೌಂಟರ್‌ ಪ್ರಕರಣ: ವಿಧಾನಸಭೆಯಲ್ಲಿ ಭಾರೀ ಗದ್ದಲ, ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ

by ದಿಶಾ ಕೆ. ಎಸ್.
August 17, 2026 - 1:42 pm
0

Untitled design 2026 08 17T131558.314

ಹನೂರು ಶೂಟೌಟ್‌ ದುರಂತ: ಮೃತರ ಕುಟುಂಬಗಳಿಗೆ ತಲಾ ₹15 ಲಕ್ಷ ಪರಿಹಾರ ವಿತರಣೆ

by ದಿಶಾ ಕೆ. ಎಸ್.
August 17, 2026 - 1:16 pm
0

Untitled design (85)

ಪಿಜಿ, ಹಾಸ್ಟೆಲ್‌ಗಳಿಗೆ ಬಿಗ್ ಶಾಕ್: ಆಹಾರ ತಪಾಸಣೆ ಕಡ್ಡಾಯ ಎಂದ ಆರೋಗ್ಯ ಸಚಿವ ಖಾದರ್!

by ಕವಿತಾ
August 17, 2026 - 1:01 pm
0

Image

ಪ್ರತಿದಿನ ರಾತ್ರಿ ಕೊತ್ತಂಬರಿ ನೀರು ಕುಡಿಯುವ ಅಭ್ಯಾಸ ಯಾಕೆ ಉತ್ತಮ?

by ಶಾಲಿನಿ ಕೆ. ಡಿ
August 17, 2026 - 12:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅನೈತಿಕ (11)
    ಕಾಮನ್‌ವೆಲ್ತ್‌ನಲ್ಲಿ ಭಾರತಕ್ಕೆ ಪದಕಗಳ ಮಳೆ: ಟ್ರಿಪಲ್ ಜಂಪ್‌ನಲ್ಲಿ ಬೆಳ್ಳಿ-ಕಂಚು
    August 1, 2026 | 0
  • ಅನೈತಿಕ (8)
    ರಿಷಬ್ ಶೆಟ್ಟಿ ಮೆಗಾ ಪ್ಯಾನ್ ಇಂಡಿಯಾ ಸಿನಿಮಾ ಡ್ರಾಪ್..?
    August 1, 2026 | 0
  • Web Photo Editor 2026 07 24T102509.339
    ಟ್ರಂಪ್‌ ಸುಂಕ ಸಮರ: ಭಾರತ ಸೇರಿ 60 ದೇಶಗಳಿಗೆ ಹೊಸ ತೆರಿಗೆ!
    July 24, 2026 | 0
  • ಶಿ
    ನೀಟ್ ಹಗರಣ: ವಿನೀತ್ ಜೋಶಿ ವಜಾ, ಗಂಗ್ವಾರ್ ನೇಮಕ
    July 24, 2026 | 0
  • 09
    ಆಂಧ್ರದಲ್ಲಿ ಪತಿಯನ್ನು ಮುಗಿಸಲು ಪತ್ನಿಯ ಸಂಚು? ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ
    July 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version